ಸರ್ಕಾರಿ ಕಚೇರಿಗಳಲ್ಲಿ ಸ್ಮಾರ್ಟ್‌ ಟ್ಯಾಪ್‌?


Team Udayavani, Jul 9, 2019, 3:10 AM IST

sarjkaari

ಬೆಂಗಳೂರು: ನಗರದಲ್ಲಿ ಆಗುತ್ತಿರುವ ನೀರಿನ ಪೋಲು ಮತ್ತು ಹೆಚ್ಚುತ್ತಿರುವ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ಕಡಿಮೆ ನೀರು ಹೊರಹಾಕುವ ಟ್ಯಾಪ್‍ಗಳ ಬಳಕೆಗೆ ಚಿಂತನೆ ನಡೆಸಿದ್ದು, ಪ್ರಾಯೋಗಿಕವಾಗಿ ಸರ್ಕಾರಿ ಕಚೇರಿಗಳಲ್ಲಿ ಈ ಮಾದರಿಯ ಸ್ಮಾರ್ಟ್ ಟ್ಯಾಪ್‍ಗಳನ್ನು ಪರಿಚಯಿಸಲು ಸರ್ಕಾರ ಉದ್ದೇಶಿಸಿದೆ.

ಒಂದೆಡೆ ನೀರಿನ ಬೇಡಿಕೆ ಹೆಚ್ಚುತ್ತಲೇ ಇದ್ದರೆ, ಮತ್ತೂಂದೆಡೆ ಇದಕ್ಕೆ ತದ್ವಿರುದ್ಧವಾಗಿ ಲಭ್ಯತೆ ಕಡಿಮೆ ಆಗುತ್ತಿದೆ. ಆದ್ದರಿಂದ ಸಾಧ್ಯವಾದಷ್ಟು ಎಲ್ಲ ರೀತಿಯಿಂದ ನೀರಿನ ಉಳಿತಾಯ ಮಾಡಲು ಪ್ರಯತ್ನಗಳು ನಡೆದಿದೆ. ಇದರಲ್ಲಿ ಹೊಸ ಅಪಾರ್ಟ್‍ಮೆಂಟ್‌ ನಿರ್ಮಾಣ ಯೋಜನೆಗೆ ನಿಷೇಧ, ಈಗಾಗಲೇ ಇರುವ ಅಪಾರ್ಟ್‍ಮೆಂಟ್‌ಗಳಿಗೆ ಮೀಟರ್‌ ಅಳವಡಿಕೆ, ತ್ಯಾಜ್ಯ ನೀರು ಸಂಸ್ಕರಣೆ ಜತೆಗೆ ಇದರ ಮುಂದುವರಿದ ಭಾಗವಾಗಿ ಕಡಿಮೆ ನೀರು ಹೊರಚೆಲ್ಲುವ ಟ್ಯಾಪ್‍ಗಳನ್ನು ಅಳವಡಿಸಲು ಚಿಂತನೆ ನಡೆದಿದೆ.

ಈ ಮಾದರಿಯ ಟ್ಯಾಪ್‍ಗಳನ್ನು ಪ್ರಾಯೋಗಿಕವಾಗಿ ಸರ್ಕಾರಿ ಕಚೇರಿಗಳಲ್ಲಿ ಪರಿಚಯಿಸುವ ಚಿಂತನೆ ಇದೆ. ನಗರದಲ್ಲೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸಾವಿರಾರು ಕಚೇರಿಗಳಿವೆ. ಅಲ್ಲೆಲ್ಲಾ ಈ ಮಾದರಿಯ ಟ್ಯಾಪ್‍ಗಳನ್ನು ಅಳವಡಿಸಲು ಸಾಧ್ಯವಾದರೆ, ಈಗ ಆ ಕಚೇರಿಗಳಲ್ಲಿ ಬಳಕೆ ಮಾಡುತ್ತಿರುವ ನೀರಿನ ಪೈಕಿ ಶೇ.30ರಿಂದ 40ರಷ್ಟು ನೀರು ಉಳಿತಾಯ ಮಾಡಬಹುದು ಎಂದು ಜಲಮಂಡಳಿ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ. ಅದರಲ್ಲೂ ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧದಲ್ಲೇ ಈ ಟ್ಯಾಪ್‍ಗಳನ್ನು ಅಳವಡಿಸುವ ಯೋಚನೆ ಇದೆ ಎಂದು ಮೂಲಗಳು ತಿಳಿಸಿವೆ.

ಪಿಡಬ್ಲ್ಯೂಡಿ ಜತೆ ಚರ್ಚೆ: ಅತ್ಯಾಧುನಿಕ ಟ್ಯಾಪ್‍ಗಳ ಅಳವಡಿಕೆಯಿಂದ ಖಂಡಿತ ನೀರಿನ ಉಳಿತಾಯ ಆಗಲಿದೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆಯೊಂದಿಗೆ ಚರ್ಚೆ ನಡೆಸುವ ಯೋಚನೆ ಇದೆ. ಅಷ್ಟೇ ಅಲ್ಲ, ನಗರದ ಅಪಾರ್ಟ್‍ಮೆಂಟ್‌ಗಳು ಸೇರಿದಂತೆ ಮನೆಗಳಲ್ಲೂ ಈ ಮಾದರಿಯ ಟ್ಯಾಪ್‍ಗಳ ಬಗ್ಗೆ ಅರಿವು ಮೂಡಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಜಲ ಮಂಡಳಿ ವತಿಯಿಂದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳಿಗೆ ನೀರಿನ ಮಿತ ಬಳಕೆ ಬಗ್ಗೆ ಕಾರ್ಯಾಗಾರ ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಆಗ ಇಂತಹ ಟ್ಯಾಪ್‍ಗಳನ್ನು ಅಳವಡಿಸಿಕೊಳ್ಳುವಂತೆ ಮನವೊಲಿಸಲಾಗುವುದು ಎಂದು ಜಲ ಮಂಡಳಿ ಅಧ್ಯಕ್ಷ ತುಷಾರ್‌ ಗಿರಿನಾಥ್‌ ತಿಳಿಸಿದರು.

ನಗರದಲ್ಲಿ ಅಪಾರ್ಟ್‍ಮೆಂಟ್‌ಗಳು ಸೇರಿದಂತೆ ಸಗಟು ಗ್ರಾಹಕರು (bulk consumers) ಸುಮಾರು 23 ಸಾವಿರ. ಆ ಪೈಕಿ ಸ್ಮಾಟ್‌ ಟ್ಯಾಪ್‌ ಅಥವಾ ಮಿತ ಬಳಕೆಯ ಟ್ಯಾಪ್‍ಗಳನ್ನು ಅಳವಡಿಸಿರುವವರ ಪ್ರಮಾಣ ಎಷ್ಟು ಎಂಬ ಮಾಹಿತಿ ಇಲ್ಲ. ಅಂತಹ ಗ್ರಾಹಕರ ಸಂಖ್ಯೆ ತುಂಬಾ ವಿರಳ. ಈ ಗ್ರಾಹಕರಿಗೆ ಕಡ್ಡಾಯವಾಗಿ ಇಂತಹದ್ದೇ ಟ್ಯಾಪ್‍ಗಳನ್ನು ಬಳಸಿ ಎಂದು ಹೇಳುವುದು ಕಷ್ಟ. ಆದರೆ, ಮನವೊಲಿಸಬಹುದಾಗಿದೆ. ಇದರಿಂದ ಗ್ರಾಹಕರಿಗೂ ಉಳಿತಾಯ ಆಗಲಿದೆ.

ಹೇಗೆಂದರೆ, ನೀರು ಮಿತ ಬಳಕೆಯಿಂದ ನೀರಿನ ಬಿಲ್‌ ಕಡಿಮೆ ಆಗುತ್ತದೆ. ಮಾರುಕಟ್ಟೆಗಳಲ್ಲಿ ಒಂದು ನಿಮಿಷಕ್ಕೆ 6 ಲೀ., 9 ಲೀ. ಮತ್ತು 15 ಲೀ. ನೀರು ಹೊರಚೆಲ್ಲುವಂತಹ ವಿವಿಧ ಪ್ರಕಾರ ಟ್ಯಾಪ್‍ಗಳಿವೆ. ಸ್ಮಾರ್ಟ್‍ ಟ್ಯಾಪ್‍ಗಳು ದುಬಾರಿ ಎನಿಸಿದವರು, ಈ ಮಾದರಿಯ ಟ್ಯಾಪ್‍ಗಳನ್ನು ಅಳವಡಿಸಿಕೊಳ್ಳಬಹುದು ಎಂದು ಜಲಮಂಡಳಿ ಉನ್ನತ ಅಧಿಕಾರಿಯೊಬ್ಬರು ಹೇಳುತ್ತಾರೆ.

ಚರ್ಚೆ ಪ್ರಾಥಮಿಕ ಹಂತದಲ್ಲಿ; ಲೋಕೋಪಯೋಗಿ ಇಲಾಖೆ: “ಪ್ರಸ್ತುತ ನಾವು ಬಳಕೆ ಮಾಡುವ ಸಾಮಾನ್ಯ ನಲ್ಲಿಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ನೀರು ಹೊರಬರುತ್ತದೆ. ಸ್ಮಾರ್ಟ್‍ ಟ್ಯಾಪ್‍ಗಳು ಅಥವಾ ಅಗತ್ಯಕ್ಕೆ ತಕ್ಕಷ್ಟೇ ನೀರು ಹೊರಚೆಲ್ಲುವ ಅತ್ಯಾಧುನಿಕ ಟ್ಯಾಪ್‍ಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಅವುಗಳನ್ನು ಪರಿಚಯಿಸಲು ಸಾಧ್ಯವೇ ಎಂಬುದರ ಬಗ್ಗೆ ಚಿಂತನೆ ನಡೆದಿದೆ. ಅಷ್ಟೇ ಅಲ್ಲದೆ, ಫ್ಲಶ್‌ಗಳ ನೀರನ್ನು ಕೂಡ ಶುದ್ಧೀಕರಿಸಿ, ಅದೇ ಫ್ಲಶ್‌ಗಳಿಗೆ ಮರುಬಳಕೆ ಮಾಡುವ ತಂತ್ರಜ್ಞಾನವೂ ಬಂದಿದೆ. ಈ ಸಂಬಂಧ ಅಮೆರಿಕದ ಕಂಪೆನಿಯೊಂದು ಪ್ರಾತ್ಯಕ್ಷಿಕೆ ನೀಡುವುದರ ಜತೆಗೆ ಚರ್ಚೆ ನಡೆಸಿದೆ. ಆದರೆ, ಈ ಚಿಂತನೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ’ ಎಂದು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಕೃಷ್ಣರೆಡ್ಡಿ “ಉದಯವಾಣಿ’ಗೆ ಸ್ಪಷ್ಟಪಡಿಸಿದರು.

ಸಬ್ಸಿಡಿ ನೀಡುವುದು ಅಗತ್ಯ – ತಜ್ಞರು: ನೀರಿನ ಮಿತ ಬಳಕೆಗೆ ಪೂರಕವಾದ ಟ್ಯಾಪ್‍ಗಳ ಅಳವಡಿಕೆಗೆ ಜನರನ್ನು ಪ್ರೋತ್ಸಾಹಿಸಲು ಸರ್ಕಾರಗಳಿಂದ ಸಬ್ಸಿಡಿ ನೀಡುವ ಅಗತ್ಯವಿದೆ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಅತ್ಯಾಧುನಿಕ ಟ್ಯಾಪ್‍ಗಳನ್ನು ಅಳವಡಿಸಿಕೊಳ್ಳಲು ಜನ ಮುಂದೆಬರುವುದಿಲ್ಲ. ಈ ಟ್ಯಾಪ್‍ಗಳು ದುಬಾರಿ ಎಂಬುದು ಇದಕ್ಕೆ ಕಾರಣ. ಆದರೆ, ನಂತರದ ದಿನಗಳಲ್ಲಿ ಪರೋಕ್ಷವಾಗಿ ಬಳಕೆದಾರರಿಗೇ ಇದರಿಂದ ಉಳಿತಾಯ ಆಗುತ್ತದೆ. ಅದೇನೇ ಇರಲಿ, ಜನ ಸ್ವಯಂಪ್ರೇರಿತರಾಗಿ ಮುಂದೆಬರಲು ಸಬ್ಸಿಡಿ ನೀಡಿ ಪ್ರೋತ್ಸಾಹಿಸಬೇಕು. ಈ ಸಂಬಂಧ ರಾಜ್ಯ ಅಥವಾ ಕೇಂದ್ರ ಸರ್ಕಾರ ನೀತಿ ರೂಪಿಸುವ ಅವಶ್ಯಕತೆ ಇದೆ ಎಂದು ತಜ್ಞರು ಪ್ರತಿಪಾದಿಸುತ್ತಾರೆ.

* ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.