ನಗರದ ನೂರು ಕಡೆ ಸ್ಮಾರ್ಟ್‌ಬಿನ್‌


Team Udayavani, May 29, 2018, 2:31 PM IST

highcourt2.jpg

ಬೆಂಗಳೂರು: ನಗರದಲ್ಲಿ ಹಸಿ ಹಾಗೂ ಒಣ ತ್ಯಾಜ್ಯದ ಪ್ರತ್ಯೇಕ ಸಂಗ್ರಹಣೆಗೆ ಆಯ್ದ ಪ್ರದೇಶಗಳಲ್ಲಿ ಹೊಸದಾಗಿ 100 ಸ್ಮಾರ್ಟ್‌ಬಿನ್‌ಗಳನ್ನು ಅಳವಡಿಸಲಾಗುತ್ತದೆ ಎಂದು ಬಿಬಿಎಂಪಿ ಸೋಮವಾರ ಹೈಕೋರ್ಟ್‌ಗೆ ತಿಳಿಸಿದೆ.

ಘನತ್ಯಾಜ್ಯ ನಿರ್ವಹಣೆ, ವಾರ್ಡ್‌ ಕಮಿಟಿ ರಚನೆ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ್‌ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠಕ್ಕೆ ಪಾಲಿಕೆ ಈ ಮಾಹಿತಿ ನೀಡಿತು.

ವಿಚಾರಣೆ ವೇಳೆ ಹಾಜರಿದ್ದ ಘನತ್ಯಾಜ್ಯ ಸಂಸ್ಕರಣೆ ವಿಭಾಗದ ಜಂಟಿ ಆಯುಕ್ತ ಡಾ.ಸಫ‌ರಾಜ್‌ ಖಾನ್‌, ತ್ಯಾಜ್ಯ ಸಂಸ್ಕರಣೆಗೆ ಪಾಲಿಕೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಹೊಸದಾಗಿ 1500 ಟನ್‌ ತ್ಯಾಜ್ಯ ಸಂಗ್ರಹಣೆ ಸಾಮರ್ಥ್ಯದ 100 ಸ್ಮಾರ್ಟ್‌ಬಿನ್‌ಗಳನ್ನು ನಗರದ ಆಯ್ದ ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಒಣ ಹಾಗೂ ಹಸಿ ತ್ಯಾಜ್ಯ ಸಂಗ್ರಹಣೆಗೆ ಪ್ರತ್ಯೇಕ ಸ್ಮಾರ್ಟ್‌ ಬಿನ್‌ಗಳಲ್ಲಿ ಇಡಲಾಗುತ್ತದೆ ಎಂದು ತಿಳಿಸಿದರು.

ಈ ಹಿಂದೆ ವಾಣಿಜ್ಯ ಪ್ರದೇಶಗಳಲ್ಲಿ ಅಳವಡಿಸಿದ್ದ 2000 ಸ್ಮಾರ್ಟ್‌ಬಿನ್‌ಗಳ ಪೈಕಿ, 500 ಸ್ಮಾರ್ಟ್‌ಬಿನ್‌ಗಳನ್ನು ದುಷ್ಕರ್ಮಿಗಳು ಹಾಳುಗೆಡವಿದ್ದು, ಹಲವೆಡೆ ಕಳವು ಮಾಡಿದ್ದಾರೆ. ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದೇವೆ. ಇದೀಗ ಮತ್ತೆ ಸ್ಮಾರ್ಟ್‌ಬಿನ್‌ಗಳನ್ನು ಅಳವಡಿಸಲಾಗುತ್ತದೆ ಎಂದು ಪಾಲಿಕೆ ಹಮ್ಮಿಕೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡಿದರು.

ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ, ಹೊಸದಾಗಿ ಸ್ಮಾರ್ಟ್‌ಬಿನ್‌ಗಳನ್ನು ಯಾವ ರೀತಿ ಅಳವಡಿಸಲಾಗುತ್ತದೆ ಮತ್ತು ಕಸ ವಿಂಗಡಣೆಗೆ ವೈಜ್ಞಾನಿಕವಾಗಿ ಕೈಗೊಳ್ಳುವ ಕ್ರಮಗಳ ಬಗ್ಗೆ ಮುಂದಿನ ಎರಡು ವಾರದಲ್ಲಿ ಪ್ರಮಾಣಪತ್ರ ಸಲ್ಲಿಸುವಂತೆ ತಾಕೀತು ಮಾಡಿತು.

ತ್ಯಾಜ್ಯ ಸಂಸ್ಕರಣ ಘಟಗಳಲ್ಲಿ, ತ್ಯಾಜ್ಯ ವಿಲೇವಾರಿ, ತಾಂತ್ರಿಕ ಅಳವಡಿಕೆ ಸೇರಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಿದ್ದು ವರದಿ ನೀಡುವಂತೆ ಕರ್ನಾಟಕ ಸಾವಯವ ಗೊಬ್ಬರ  ಅಭಿವೃದ್ಧಿ ನಿಗಮ (ಕೆಸಿಡಿಸಿ) ವ್ಯವಸ್ಥಾಪಕ ನಿರ್ದೇಶಕರಿಗೆ ನ್ಯಾಯಪೀಠ ನಿರ್ದೇಶಿಸಿ ಚಾರಣೆಯನ್ನು ಜೂನ್‌ 29ಕ್ಕೆ ಮುಂದೂಡಿತು.

ತಾಂತ್ರಿಕ ಸಲಹಾ ಸಮಿತಿ ರಚನೆ: ಪಾಲಿಕೆ ವ್ಯಾಪ್ತಿಯ ಏಳು ತ್ಯಾಜ್ಯ ಸಂಸ್ಕರಣಾ ಘಟಕಗಳ ಸಮರ್ಪಕ ಕಾರ್ಯನಿರ್ವಹಣೆಗೆ ಅನುಕೂಲವಾಗುವಂತೆ ಶಿಫಾರಸುಗಳನ್ನು ನೀಡುವ ಸಲುವಾಗಿ ತಜ್ಞರನ್ನೊಳಗೊಂಡ “ತಾಂತ್ರಿಕ ಸಲಹಾ ಸಮಿತಿ’  ರಚಿಸಲಾಗಿದೆ ಎಂದು ರಾಜ್ಯಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಹೈಕೋರ್ಟ್‌ ಸೂಚನೆ ಮೇರೆಗೆ ರಾಜ್ಯಸರ್ಕಾರ ಮೇ 16ರಂದು ತಾಂತ್ರಿಕ ಸಲಹಾ ಸಮಿತಿ ರಚಿಸಿದೆ ಎಂದು ಸರ್ಕಾರದ ಪರ ವಕೀಲರು ಮೆಮೊ ಸಲ್ಲಿಸಿದರು. ಸಾರ್ವಜನಿಕ ಹಿತ ಹಾಗೂ ಪರಿಸರ ಸಂರಕ್ಷಣೆ ದೃಷ್ಟಿಯಿಂದ ಕಸ ಸಂಸ್ಕರಣಾ ಘಟಕಗಳು ವೈಜಾನಿಕವಾಗಿ ಮತ್ತು ಯಾವುದೇ ಲೋಪವಿಲ್ಲದೆ ಕಾರ್ಯನಿರ್ವಹಿಸಬೇಕಿದೆ.

ಆದ್ದರಿಂದ ತ್ಯಾಜ್ಯ ಸಂಸ್ಕರಣೆ, ವಿಲೇವಾರಿ, ತಾಂತ್ರಿಕ ಅಳವಡಿಕೆ ಸೇರಿದಂತೆ ಇನ್ನಿತರೆ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ಅಗತ್ಯ ಶಿಫಾರಸುಗಳನ್ನು ನೀಡುವ ಸಲುವಾಗಿ  ಐಐಎಸ್ಸಿ, ಪರಿಸರ ವಿಜ್ಞಾನಿಗಳು, ಕೃಷಿ ವಿ.ವಿ ತಜ್ಞರು, ಮಾಲಿನ್ಯ ನಿಯಂತ್ರಣ ಮಂಡಳಿ, ವಿವಿಧ ಕ್ಷೇತ್ರಗಳ ತಜ್ಞರನ್ನೊಳಗೊಂಡತೆ ಕನಿಷ್ಟ 8 ಸದಸ್ಯರ ಉನ್ನತ ಮಟ್ಟದ “ತಾಂತ್ರಿಕ ಸಲಹಾ ಸಮಿತಿಯನ್ನು’ ರಚಿಸುವಂತೆ ಹೈಕೋರ್ಟ್‌ ಸೂಚಿಸಿತ್ತು.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬಸ್‌ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

Bengaluru: ಬಸ್‌ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.