
ಸೋಲಾರ್ ಪ್ಲಾಂಟ್ ಹೆಸರಲ್ಲಿ ವಂಚನೆ: ಸೆರೆ
Team Udayavani, Mar 25, 2023, 1:26 PM IST

ಬೆಂಗಳೂರು: ಸಂಜಯ ನಗರದ ಉದ್ಯಮಿಯೊಬ್ಬ ರಿಗೆ ಸೋಲಾರ್ ಪ್ಲಾಂಟ್ ಅಳವಡಿಸುವುದಾಗಿ ನಂಬಿಸಿ 4.11 ಕೋಟಿ ರೂ. ವಂಚಿಸಿದ್ದ ಆರೋಪಿ ಯು ಸಂಜಯ್ನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಪ್ರಮೋದ್ ಪ್ರಕಾಶ್ ಬಂಧಿತ. ಜೆಮಿನಿ ಡೈಯಿಂಗ್ ಆ್ಯಂಡ್ ಪ್ರಿಂಟಿಂಗ್ ಮಿಲ್ಸ್ ಪ್ರೈವೇಟ್ ಲಿ. ಮಾಲೀಕ ಗುಲ್ಲು ತಲರೇಜಾ (70) ವಂಚನೆ ಗೊಳಗಾದವರು.
ಗುಲ್ಲು ತಲರೇಜಾ ಗೊರಗುಂಟೆ ಪಾಳ್ಯ ಬಳಿ ಇರುವ ತಮ್ಮ ಕಂಪನಿಗೆ ಸೋಲಾರ್ ಪ್ಲಾಂಟ್ ಮಾಡಿಸಲು ಮುಂದಾಗಿದ್ದರು. ಈ ವೇಳೆ ಸಮೃದ್ಧಿ ರಿನವಬೇಲ್ ಸಲ್ಯೂಷನ್ ಪ್ರೈವೇಟ್ ಲಿ.ಮಾಲೀಕ ಪ್ರಮೋದ್ ಪ್ರಕಾಶ್ ಪರಿಚಯವಾಗಿದ್ದ. ಉದ್ಯಮಿಗೆ ನಕಲಿ ದಾಖಲೆ ತೋರಿಸಿದ್ದ ಪ್ರಮೋದ್ ಪ್ರಕಾಶ್ ಸೋಲಾರ ಪ್ಲಾಂಟ್ ಅಳವಡಿಸುವುದಾಗಿ ಹೇಳಿದ್ದ. ಪ್ರಾಜೆಕ್ಟ್ ಬೇಗ ಮುಗಿಸಿಕೊಡಲು ಹಂತ-ಹಂತವಾಗಿ 4.11 ಕೋಟಿ ರೂ.ಪಡೆದಿದ್ದ. ಹಣ ಪಡೆದರೂ ಕೆಲಸ ಪ್ರಾರಂಭಿಸಿರಲಿಲ್ಲ. ಉದ್ಯಮಿ ಗುಲ್ಲು ತಲರೇಜಾ ಪ್ರಮೋದ್ ಪ್ರಕಾಶ್ನನ್ನು ಸಂಪರ್ಕಿಸಿದಾಗ ಸಬೂಬು ಹೇಳಿ ತಪ್ಪಿಸಿಕೊಂಡಿದ್ದ. ಆತನ ಮೇಲೆ ಅನುಮಾನ ಬಂದು ಉದ್ಯಮಿ ಆತನ ಹಿನ್ನೆಲೆ ಪರಿಶೀಲಿಸಿದಾಗ ಆರೋಪಿ ವಂಚನೆ ಬೆಳಕಿಗೆ ಬಂದಿದೆ.
ಹಣ ಹಿಂತಿರುಗಿಸುವಂತೆ ಕೇಳಿದರೆ ಆರೋಪಿ ಬೆದರಿಸುತ್ತಿದ್ದ. ಇತ್ತ ಉದ್ಯಮಿ ಸಂಜಯನಗರ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು. ಇದೀಗ ಪೊಲೀಸರು ಆರೋಪಿ ಪ್ರಮೋದ್ನನ್ನು ಬಂಧಿಸಿದ್ದಾರೆ.
ಆರೋಪಿ ವಂಚಿಸಿದ ಹಣವನ್ನು ಚಲನಚಿತ್ರದಲ್ಲಿ ಹೂಡಿಕೆ ಮಾಡಿರುವುದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್ಸಿ ದ್ವಿತೀಯ