ಗ್ರಿಡ್‌ ಸಿದ್ಧವಾದರೂ ಸಿಗದ ಸೌರ ವಿದ್ಯುತ್‌!


Team Udayavani, Aug 31, 2019, 3:08 AM IST

greed

ಬೆಂಗಳೂರು: ವರ್ಷಕ್ಕೆ ಎರಡೂವರೆ ಕೋಟಿ ವಿದ್ಯುತ್‌ ಬಿಲ್‌ ಪಾವತಿಸುವ ಬೆಂಗಳೂರು ವಿಶ್ವವಿದ್ಯಾಲಯ ಸೋಲಾರ್‌ ವಿದ್ಯುತ್‌ ಬಳಕೆಗೆ ಮುಂದಾಗಿದ್ದು, ಇದಕ್ಕೆ ಬೇಕಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆದರೆ ಕರ್ನಾಟಕ ವಿದ್ಯುತ್‌ ನಿಯಂತ್ರಣ ಪ್ರಾಧಿಕಾರದ (ಕೆಇಆರ್‌ಸಿ) ನಿಯಮಾವಳಿ ಗೊಂದಲದಿಂದ ವಿಶ್ವವಿದ್ಯಾಲಯಕ್ಕೆ ಸೋಲಾರ್‌ ವಿದ್ಯುತ್‌ ಬಳಕೆ ಕಷ್ಟವಾಗಿದೆ.

ಕೇಂದ್ರ ಸರ್ಕಾರದ ಥಿಂಕ್‌ ಎನರ್ಜಿ ಯೋಜನೆ ಅಡಿ ಬೆಂಗಳೂರು ವಿವಿ, 2018ರ ಅಕ್ಟೋಬರ್‌ ತಿಂಗಳಲ್ಲೇ ತನ್ನ ಆರು ಕಟ್ಟಡಗಳಿಗೆ ರೂಫ್ಟಾಪ್‌ ಸೋಲಾರ್‌ ಪ್ಯಾನಲ್‌ ಅಳವಡಿಕೆ ಪೂರ್ಣಗೊಳಿಸಿದ್ದು, ಬೆಸ್ಕಾಂ ಅನುಮತಿಗಾಗಿ ಕಾಯುತ್ತಿದೆ. ಒಂದೊಮ್ಮೆ ನಿಯಮಾವಳಿ ಗೊಂದಲ ನಿವಾರಣೆ ಆಗದೆ ಅನುಮತಿ ದೊರೆಯದಿದ್ದರೆ 2019-20ರಲ್ಲಿ ವಿವಿಯು ಬೆಸ್ಕಾಂ ಬಿಲ್‌ ಪಾವತಿ ರೂಪದಲ್ಲಿ ಒಂದೂವರೆ ಕೋಟಿ ರೂ. ನಷ್ಟ ಅನುಭವಿಸಲಿದೆ.

ಯಾವುದೇ ಖಾಸಗಿ ವ್ಯಕ್ತಿ ತನ್ನ ಸ್ವಂತ ಖರ್ಚಿನಲ್ಲೇ ಮನೆ ಮೇಲೆ ಸೋಲಾರ್‌ ಅಳವಡಿಸಬೇಕು ಎಂದು ಕೆಇಆರ್‌ಸಿ ನಿಯಮ ತಿಳಿಸುತ್ತದೆ. ಆದರೆ ಬೆಂಗಳೂರು ವಿವಿ, ಸೋಲಾರ್‌ ವಿದ್ಯುತ್‌ಗಾಗಿ ಕೇಂದ್ರ ಸರ್ಕಾರದ “ಥಿಂಕ್‌ ಇಂಡಿಯಾ’ ಕಾರ್ಯಕ್ರಮದಡಿ ಸೋಲಾರ್‌ ಪ್ಯಾನಲ್‌ ಅಳವಡಿಸಿದೆ. ಆದರೆ, ಈವರೆಗೂ ಕಟ್ಟಡದ ಮಾಲಿಕರಿಗೆ ಮಾತ್ರ ರೂಫ್ಟಾಪ್‌ ಸೋಲಾರ್‌ ಅಳವಡಿಕೆಗೆ ಬೆಸ್ಕಾಂ ಅವಕಾಶ ನೀಡುತಿದೆ.

ಪ್ರಸಕ್ತ ಪ್ರಕರಣದಲ್ಲಿ ವಿವಿ ಥರ್ಡ್‌ ಪಾರ್ಟಿ ಮೂಲಕ (ಥಿಂಕ್‌ ಇಂಡಿಯಾ) ಹೂಡಿಕೆ ಮಾಡಿಸಿದೆ. ಹಾಗಾಗಿ ರೂಫ್ ಟಾಪ್‌ ಸೋಲಾರ್‌ ವಿದ್ಯುತ್‌ ಬಳಸಲು ವಿವಿಗೆ ಬೆಸ್ಕಾಂ ಅನುಮತಿ ನೀಡಬೇಕೆಂದರೆ ಕೆಇಆರ್‌ಸಿ ಮೂಲಕ ಕಾಯ್ದೆ ತಿದ್ದುಪಡಿ ಆಗಬೇಕು. ಕೆಇಆರ್‌ಸಿ ಥರ್ಡ್‌ ಪಾರ್ಟಿ ಕರಡು ಸಿದ್ಧಪಡಿಸಿ ಅನುಮತಿಗೆ ಅವಕಾಶ ನೀಡಿದರೆ ಮಾತ್ರ ವಿವಿಯ ಸೋಲಾರ್‌ ಗ್ರಿಡ್‌ ಕಾರ್ಯ ನಿರ್ವಹಿಸಲಿದೆ.

ಬೆಂಗಳೂರು ವಿವಿ ದಿನವೊಂದಕ್ಕೆ 300 ಕಿಲೋ ವ್ಯಾಟ್‌ ವಿದ್ಯುತ್‌ ಬಳಸುತ್ತಿದೆ. ಸದ್ಯ 450ರಿಂದ 500 ಕಿಲೋ ವ್ಯಾಟ್‌ ವಿದ್ಯುತ್‌ ತಯಾರಿಸುವ ಸಾಮರ್ಥ್ಯವುಳ್ಳ ರೂಫ್ ಟಾಪ್‌ ಸೋಲಾರ್‌ ಅಳವಡಿಸಿದ್ದು, ಬೆಸ್ಕಾಂ ಅನುಮತಿ ಸಿಕ್ಕ ಕೂಡಲೆ ತನಗೆ ಬೇಕಿರುವ ವಿದ್ಯುತ್‌ ತಾನೇ ಉತ್ಪಾದಿಸಿಕೊಳ್ಳುವ ಜತೆಗೆ ಹೆಚ್ಚುವರಿ ವಿದ್ಯುತ್‌ ಅನ್ನು ಮಾರುಕಟ್ಟೆ ಬೆಲೆಗೆ ಬೆಸ್ಕಾಂಗೆ ಮಾರಾಟ ಮಾಡಲಿದೆ. ಇನ್ನು ಕಡಿಮೆ ಉತ್ಪತ್ತಿಯಾದರೆ ಹೆಚ್ಚುವರಿ ವಿದ್ಯುತ್‌ ಅನ್ನು ಬೆಸ್ಕಾಂ ಪೂರೈಸಲಿದೆ. ಈ ನಿಟ್ಟಿನಲ್ಲಿ ಈಗಾಗಲೇ ಪವರಿ ಗ್ರಿಡ್‌ ಕೂಡ ಸಿದ್ಧವಾಗಿದೆ.

15 ದಿನಗಳಲ್ಲಿ ಇತ್ಯರ್ಥ?: ಬೆಸ್ಕಾಂನ ಅನುಮತಿ ಇಲ್ಲದೆ ರೂಫ್ಟಾಪ್‌ ಸೋಲಾರ್‌ ಪ್ಯಾನಲ್‌ ಅಳವಡಿಸಿದ ಬೆಂಗಳೂರು ವಿಶ್ವವಿದ್ಯಾಲಯ, ಬಳಿಕ ಅನುಮತಿಗೆ ಅರ್ಜಿ ಸಲ್ಲಿಸಿದೆ. ಈವರೆಗೆ ಕಟ್ಟಡ ಮಾಲಿಕರಿಗೆ ಮಾತ್ರ ರೂಫ್ ಟಾಪ್‌ ಸೋಲಾರ್‌ ಅಳವಡಿಕೆಗೆ ಅನುಮತಿ ನೀಡಲಾಗುತಿತ್ತು. ಆದರೆ ಬೆಂಗಳೂರು ವಿವಿ ಸಂಪೂರ್ಣವಾಗಿ ತನ್ನದೇ ಖರ್ಚಿನಲ್ಲಿ ಸೋಲಾರ್‌ ಅಳವಡಿಸದೆ, ಥರ್ಡ್‌ ಪಾರ್ಟಿಯಿಂದ ಹೂಡಿಕೆ ಮಾಡಿಸಿದೆ. ಈ ರೀತಿಯ ಪ್ರಕರಣ ಇದೇ ಮೊದಲಾಗಿದ್ದು, ಇದಕ್ಕಾಗಿ ಕೆಇಆರ್‌ಸಿ ಕರಡು ಸಿದ್ಧಪಡಿಸಬೇಕಿದೆ. 15 ದಿನಗಳಲ್ಲಿ ಕೆಇಆರ್‌ಸಿ ಸಭೆ ನಡೆಯಲಿದ್ದು, ಈ ವೇಳೆ ಬೆಂಗಳೂರು ವಿವಿ ಸೋಲಾರ್‌ ಗ್ರಿಡ್‌ಗೆ ಅನುಮತಿ ನೀಡಬೇಕೋ ಬೇಡವೋ ಎಂಬುದು ಇತ್ಯರ್ಥವಾಗುವ ಸಾಧ್ಯತೆಯಿದೆ.

ವಿವಿಯು ಪ್ರತಿ ವರ್ಷ 2.5 ಕೋಟಿ ರೂ. ವಿದ್ಯುತ್‌ ಬಿಲ್‌ ಪಾವತಿಸುತ್ತಿದೆ. ಇದರಿಂದ ಹಣ ವ್ಯರ್ಥವಾಗುವುದನ್ನು ತಡೆಯಲು ರೂಫ್ಟಾಪ್‌ ಸೋಲಾರ್‌ ವ್ಯವಸ್ಥೆ ಮಾಡಲಾಗಿದೆ. ಪ್ಯಾನಲ್‌ ಅಳವಡಿಸಿ, ಗ್ರಿಡ್‌ ಕಾಮಗಾರಿ ಮುಗಿಸಿದ್ದು, ಬೆಸ್ಕಾಂ ಅನುಮತಿ ನೀಡಬೇಕಿದೆ.
-ಪ್ರೊ.ಕೆ.ಆರ್‌.ವೇಣುಗೋಪಾಲ್‌, ಬೆಂಗಳೂರು ವಿವಿ ಕುಲಪತಿ

ಬೆಂಗಳೂರು ವಿವಿ ಬೆಸ್ಕಾಂ ಗ್ರಾಹಕರಾಗಿರುವ ಕಾರಣ ಕೆಇಆರ್‌ಸಿಗೆ ಪತ್ರ ಬರೆಯಲಾಗಿದೆ. ಕೆಇಆರ್‌ಸಿ ಕರಡು ಸಿದ್ಧಪಡಿಸಿ ಅನುಮತಿ ನೀಡಲು ಸೂಚನೆ ನೀಡಿದ ಕೂಡಲೆ ಸೋಲಾರ್‌ ವಿದ್ಯುತ್‌ ಬಳಸಲು ವಿವಿಗೆ ಅವಕಾಶ ನೀಡಲಾಗುವುದು. ಈ ಸಂಬಂಧ 15 ದಿನಗಳಲ್ಲಿ ಕೆಇಆರ್‌ಸಿ ಸಭೆ ಕರೆದಿದ್ದು, ಥರ್ಡ್‌ ಪಾರ್ಟಿ ಹೂಡಿಕೆ ಮಾಡಿಸಿರುವ ಬೆಂಗಳೂರು ವಿವಿ, ಜಿಕೆವಿಕೆ ಸೇರಿ ನಾಲ್ಕು ಗ್ರಾಹಕರಿಗೆ ಅನುಮತಿ ನೀಡಲು ಬೆಸ್ಕಾಂ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ.
-ಶೀಲಾ, ಬೆಸ್ಕಾಂ ಬೇಡಿಕೆ ಮತ್ತು ಸರಬರಾಜು ನಿರ್ವಹಣೆ ಜಿಎಂ

* ಲೋಕೇಶ್‌ ರಾಮ್‌

ಟಾಪ್ ನ್ಯೂಸ್

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.