ಬಹು ಗ್ರಾಮದಿಂದ ಘನ ತ್ಯಾಜ್ಯಕ್ಕೆ ಪರಿಹಾರ

ಬೆಟ್ಟಹಲಸೂರಿನಲ್ಲಿಘಟಕ ಸ್ಥಾಪನೆಗೆ ನಗರ ಜಿಪಂ ಚಿಂತನೆ | ಹದಿನೈದು ಹಳ್ಳಿಗಳನ್ನು ಕೇಂದ್ರೀಕರಿಸಿ ಯೋಜನೆ

Team Udayavani, Nov 7, 2020, 12:29 PM IST

ಬಹು ಗ್ರಾಮದಿಂದ ಘನ ತ್ಯಾಜ್ಯಕ್ಕೆ ಪರಿಹಾರ

ಬೆಂಗಳೂರು: ಘನತ್ಯಾಜ್ಯ ನಿರ್ವಹಣೆ ಸವಾಲಿಗೆ ಪರಿಹಾರವಾಗಿ “ಸ್ವಚ್ಛ ಭಾರತ ಮಿಷನ್‌ ಯೋಜನೆ’ಯಡಿ “ಬಹುಗ್ರಾಮ ಘನತ್ಯಾಜ್ಯ ನಿರ್ವಹಣಾ ಘಟಕ ‘ಸ್ಥಾಪನೆಗೆ ಬೆಂಗಳೂರು ನಗರ ಜಿಪಂ ಮುಂದಾಗಿದೆ. ಪ್ರಸ್ತುತ ಬಿಬಿಎಂಪಿ ವ್ಯಾಪ್ತಿಯಲ್ಲಿ ಎದುರಾಗಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆ ಭವಿಷ್ಯದಲ್ಲಿ ಬೆಂಗಳೂರುನಗರ ಜಿಪಂಗೂ ಎದುರಾಗದಿರಲಿ ಎಂಬ ನಿಟ್ಟಿನಲ್ಲಿ “ಬಹುಗ್ರಾಮ ಘನತ್ಯಾಜ್ಯ ನಿರ್ವಹಣಾ ಘಟಕ’ ಯೋಜನೆ ಜಾರಿಗೆ ತೀರ್ಮಾನಿಸಲಾಗಿದೆ.

ಯಲಹಂಕ ತಾಲೂಕಿನ ಬೆಟ್ಟಹಲಸೂರು ಮತ್ತು ಮೀನಕುಂಟೆ ಗ್ರಾಪಂ ವ್ಯಾಪ್ತಿಯ ಸುಮಾರು ಹದಿನೈದು ಗ್ರಾಮಗಳನ್ನು ಕೇಂದ್ರೀಕರಿಸಿ ಬೆಟ್ಟಹಲಸೂರಿನಲ್ಲಿ ಶೀಘ್ರದಲ್ಲೇ ಪ್ರಯೋಗಿಕವಾಗಿ ಘನತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಯಾಗಲಿದೆ. ಇದು ಯಶಸ್ವಿಯಾದ ನಂತರ ಇತರೆಡೆಯೂ ಸ್ಥಾಪಿಸುವ ಚಿಂತನೆಯಿದೆ. ತಿರುಪತಿಗೆ ಭೇಟಿ: ಆಂಧ್ರಪ್ರದೇಶದ ತಿರುಪತಿಯಲ್ಲಿ ಈಗಾಗಲೇ ಹಸಿರು ದಳ ಸಂಸ್ಥೆ ಬಹುಗ್ರಾಮಗಳನ್ನು ಕೇಂದ್ರೀಕರಿಸಿ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಿಸಿ, ನಿರ್ವಹಣೆ ಮಾಡುತ್ತಿದೆ. ಅದು ಹೇಗೆ ಕಾರ್ಯ ನಿರ್ವಹಿಸಲಿದೆ ಎಂಬುವುದನ್ನು ಅರಿಯಲು ಬೆಟ್ಟಹಲಸೂರು ಗ್ರಾಪಂ ಅಧ್ಯಕ್ಷೆ ರಜನಿ ಪ್ರಕಾಶ್‌ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಒಳಗೊಂಡ 35 ಮಂದಿ ನಿಯೋಗ ಕಲಿಕಾ ಪ್ರವಾಸವನ್ನು ಕೈಗೊಂಡಿತ್ತು. ತಿರುಪತಿಗೆ ಭೇಟಿ ನೀಡಿ ಘಟಕದ ನಿರ್ಮಾಣ ಮತ್ತದರ ಕಾರ್ಯ ನಿರ್ವಹಣೆಯ ಬಗ್ಗೆ ಅಲ್ಲಿನ ಹಿರಿಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಬಳಿಕ ಈಗ ಬಹುಗ್ರಾಮ ಘನತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಹೆಜ್ಜೆಯಿರಿಸಲಾಗಿದೆ.

2 ಎಕರೆಪ್ರದೇಶದಲ್ಲಿ ನಿರ್ಮಾಣ:ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಎದುರಾಗಿದ್ದ ಜಾಗದ ಸಮಸ್ಯೆ ನಿವಾರಿಸಿ ಯಲಹಂಕ ತಾಲೂಕಿನ ಬೆಟ್ಟಹಲಸೂರು ಗ್ರಾಪಂನಲ್ಲಿ 2 ಎಕರೆ ಜಾಗ ಗುರುತಿಸಲಾಗಿದೆ ಎಂದು ನಗರ ಜಿಪಂ ಸ್ವಚ್ಛ  ಭಾರತ್‌ ಮಿಷನ್‌ (ಗ್ರಾಮೀಣ)ನ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭವಿಷ್ಯದಲ್ಲಿ ಉಂಟಾಗಬಹುದಾದ ಕಸದ ಸಮಸ್ಯೆ ಅರಿತು ಈಗಾಗಲೇ ಹಲವು ಯೋಜನೆಗಳ ‌ನ್ನು ರೂಪಿಸಲಾಗಿದೆ.ಪ್ರಾಯೋಗಿಕವಾಗಿಬೆಟ್ಟಹಲಸೂರಿನಲ್ಲಿ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಇದರ ಯಶಸ್ಸಿನ ಬಳಿಕ ಮತ್ತಷ್ಟು ಗ್ರಾಪಂಗಳಿಗೆ ವಿಸ್ತರಣೆ ಮಾಡಲಾಗುವುದು ಎಂದು ನಗರ ಜಿಪಂ ಉಪ ಕಾರ್ಯದರ್ಶಿ ಡಾ.ಸಿದ್ದರಾಮಯ್ಯ ತಿಳಿಸಿದ್ದಾರೆ.

9 ಲಕ್ಷ ರೂ.ಅನುದಾನ :  ಸ್ವಚ್ಛ ಭಾರತ್‌ ಮಿಷನ್‌ (ಗ್ರಾಮೀಣ)ಯೋಜನೆಯಡಿ “ಬಹುಗ್ರಾಮ ಘನ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆ’ಗೆ 9 ಲಕ್ಷ ರೂ.ಅನುದಾನ ನೀಡಲಾಗುವುದು. ಉಳಿದ ಅನುದಾನವನ್ನು ಎಂಬೆಸಿ ಕಂಪನಿಯು ಸಾಮಾಜಿಕ ಹೊಣೆಗಾರಿಕೆ

ನಿಧಿಯಿಂದ ಬರಿಸಲಿದೆ. ಹಸಿ ಕಸವನ್ನು ಗೊಬ್ಬರವನ್ನಾಗಿ ಮಾಡಿ ಅದನ್ನು ರೈತರಿಗೆ ನೀಡುವ ಆಲೋಚನೆಯೂ ಜಿಲ್ಲಾಡಳಿತಕ್ಕಿದೆ ಎಂದು ನಗರ ಜಿಲ್ಲೆಯ ಸ್ವಚ್ಛ ಭಾರತ್‌ ಮಿಷನ್‌ನ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಿರುಪತಿಯಬಳಿ “ಬಹುಗ್ರಾಮಘನ ತ್ಯಾಜ್ಯ ನಿರ್ವಹಣಾ ಘಟಕ’ ತಲೆಎತ್ತಿದ್ದು, ಅದು ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ. ಅದೇ ಮಾದರಿಯಲ್ಲಿ ಸುಮಾರು 15 ಗ್ರಾಮಗಳನ್ನುಕೇಂದ್ರೀಕರಿಸಿ ಬೆಟ್ಟಹಲಸೂರಿನಲ್ಲಿ ಘಟಕ ನಿರ್ಮಾಣಮಾಡಲಾಗವುದು. ರಜನಿ ಪ್ರಕಾಶ್‌, ಬೆಟ್ಟಹಲಸೂರು ಗ್ರಾಪಂ ಅಧ್ಯಕ್ಷ

ಕಸದ ಸಮಸ್ಯೆ ನಿವಾರಿಸಲು ಸ್ವಚ್ಛ ಭಾರತ್‌ ಮಿಷನ್‌ಯೋಜನೆಯಡಿ ಬಹು ಗ್ರಾಮ ಘನ ತ್ಯಾಜ್ಯ ನಿರ್ವಹಣಾ ಘಟಕಯೋಜನೆಯೂ ಸೇರಿದೆ.ಯಲಹಂಕ ತಾಲೂಕಿನ ಬೆಟ್ಟಲಸೂರಿನಲ್ಲಿ ಶೀಘ್ರದಲ್ಲೇ ಘಟಕ ನಿರ್ಮಾಣ ಕಾರ್ಯ ನಡೆಯಲಿದೆ. ಕೆ.ಶಿವರಾಮೇಗೌಡ, ನಗರ ಜಿಪಂ ಸಿಇಒ

 

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.