ಕೋಟ್ಯಂತರ ರೂ. ಚಿನ್ನಾಭರಣ ವಂಚಿಸಿ ಸಿಕ್ಕಿಬಿದ್ದ ಸೋಮಣ್ಣ


Team Udayavani, Apr 4, 2018, 10:37 AM IST

blore-1.jpg

ಬೆಂಗಳೂರು: ನಾನು ಎಂಎಲ್‌ಸಿ ಸೋಮಣ್ಣ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಸುಳ್ಳು ಹೇಳಿಕೊಂಡು ಸಾಮೂಹಿಕ ವಿವಾಹದ ನೆಪದಲ್ಲಿ ಚಿನ್ನದಂಗಡಿಯಿಂದ 1.88 ಕೋಟಿ ರೂ. ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿದ್ದ ಆರೋಪಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಸಹಕಾರ ನಗರ ನಿವಾಸಿ ಎಲ್‌. ಸೋಮಣ್ಣ (39) ಬಂಧಿತ. ಕೆಲ ತಿಂಗಳ ಹಿಂದೆ ಬಸವೇಶ್ವರನಗರದ ಬಟ್ಟೆ ಅಂಗಡಿ ಮಾಲೀಕರಾದ ಸೂರಜ್‌ ಮತ್ತು ಚಿನ್ನದಂಗಡಿ ಮಾಲೀಕ ಧೀರಜ್‌ರಿಗೆ ವಿಧಾನಪರಿಷತ್‌ ಸದಸ್ಯ ಎಂದು ಪರಿಚಯಿಸಿಕೊಂಡು 1.88 ಕೋಟಿ ರೂ. ವಂಚಿಸಿದ್ದ. ಈ ಸಂಬಂಧ ಇಬ್ಬರೂ ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದರು ಎಂದು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ. ಚನ್ನಣ್ಣನವರ್‌ ತಿಳಿಸಿದ್ದಾರೆ.

ಮೈಸೂರು ಮೂಲದ ಆರೋಪಿ ಕೆಲ ವರ್ಷಗಳ ಹಿಂದೆ ಸಹಕಾರನಗರಕ್ಕೆ ಬಂದು ನೆಲೆಸಿದ್ದು, ಬಳಿಕ ಸ್ನೇಹಿತನ ಮೂಲಕ 2017ರ ಜುಲೈನಲ್ಲಿ ಬಟ್ಟೆ ಅಂಗಡಿ ಮಾಲೀಕ ಸೂರಜ್‌ರನ್ನು ಪರಿಚಯಸಿ ಕೊಂಡಿದ್ದ. ಈ ವೇಳೆ ನಾನು ವಿಧಾನ ಪರಿಷತ್‌ ಸದಸ್ಯ ಎಂದು ಹೇಳಿಕೊಂಡಿದ್ದ. ನಂತರ ತನ್ನ ಹುಟ್ಟುಹಬ್ಬದಂದು ಪತ್ನಿ ಮತ್ತು ಮಕ್ಕಳೊಂದಿಗೆ ಅದೇ ಬಟ್ಟೆ ಅಂಗಡಿಯಲ್ಲಿ 30 ಸಾವಿರ ರೂ. ಮೌಲ್ಯದ ಬಟ್ಟೆ ಖರೀದಿಸಿದ್ದ. ಹೀಗೆ ವಿಶ್ವಾಸ ಗಳಿಸಿದ್ದ.

ಕೊಲೆ ಬೆದರಿಕೆ: ನಿಮ್ಮ ಅಂಗಡಿ ಚಿಕ್ಕದಾಗಿದ್ದು, ದೊಡ್ಡ ಅಂಗಡಿ ಮಾಡಿಕೊಳ್ಳಲು ನಮ್ಮ ಟ್ರಸ್ಟ್‌ನಿಂದ ಸಾಲ ಕೊಡುತ್ತೇನೆ ಎಂದು ನಂಬಿಸಿದ್ದ ಆರೋಪಿ, ಈ ಸಂಬಂಧ ಕೆಲ ಚೆಕ್‌, ಬಾಂಡ್‌ ಪೇಪರ್‌ ಹಾಗೂ ಗುರುತಿನ ಚೀಟಿ ಪಡೆದುಕೊಂಡಿದ್ದ. ಅನಂತರ ಟ್ರಸ್ಟ್‌ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸಿದ್ದು, 6 ಗ್ರಾಂ ತೂಕದ 187 ತಾಳಿಗಳು, 30 ಗ್ರಾಂ ತೂಕದ ಚಿನ್ನದ ಬಿಸ್ಕತ್‌ಗಳು, 50 ಗ್ರಾಂ ತೂಕದ 5 ಬಿಸ್ಕತ್‌ ಬೇಕಿದೆ. ನೀವು ಇವುಗಳನ್ನು ಪೂರೈಸಿದರೆ ಕೂಡಲೇ 3.5 ಕೋಟಿ ರೂ. ಸಾಲ ಮಂಜೂರು ಮಾಡುತ್ತೇನೆ ಎಂದು ಹೇಳಿದ್ದ. 

ಇದನ್ನು ನಂಬಿದ ಸೂರಜ್‌, ನೆರೆ ರಾಜ್ಯದಿಂದ ಆಭರಣ ತರಿಸಿ ಜ.22ರಂದು ಸೋಮಣ್ಣಗೆ ನೀಡಿದ್ದರು. ಕೆಲ ದಿನಗಳು ಕಳೆದರೂ ಸಾಲದ ಹಣ ಬಾರದಿದ್ದಾಗ ಅನುಮಾನಗೊಂಡು ಪ್ರಶ್ನಿಸಿದಾಗ ಆರೋಪಿ ಸೂರಜ್‌ಗೆ ಕೊಲೆ ಬೆದರಿಕೆ ಹಾಕಿದ್ದ ಎಂದು ತಿಳಿದುಬಂದಿದೆ. 

ಧೀರಜ್‌ಗೂ ವಂಚನೆ: ಅದೇ ರೀತಿ ಧೀರಜ್‌ಗೂ ಆರೋಪಿ ವಂಚಿಸಿದ್ದಾನೆ. ಸಾಮೂಹಿಕ ವಿವಾಹಕ್ಕೆ ತಾಳಿ, ಮುಖ್ಯಅತಿಥಿಗಳಿಗೆ ಉಡುಗೊರೆ ಕೊಡಲು ಚಿನ್ನದ ಬಿಸ್ಕತ್‌ ನೀಡಬೇಕು ಎಂದು ಹೇಳಿಕೊಂಡಿದ್ದ. ಅದರಂತೆ ಧೀರಜ್‌ ಚಿನ್ನಾಭರಣಗಳನ್ನು ಬೇರೆಡೆ ಅಡಮಾನ ಇಟ್ಟು ಫೆ. 19ರಂದು ಸೋಮಣ್ಣಗೆ ತಾಳಿ ಮತ್ತು ಚಿನ್ನದ ಬಿಸ್ಕೆಟ್‌ ಕೊಟ್ಟಿದ್ದರು. ಹಣ ಕೇಳಿದಾಗ ಪ್ರಾಣಬೆದರಿಕೆ ಹಾಕಿದ್ದ.

ಕೆಲಸದ ಆಮಿಷವೊಡ್ಡಿ ಮೋಸ ತಾನು ವಿಧಾನ ಪರಿಷತ್‌ ಸದಸ್ಯ ಎಂದು ಹೇಳಿಕೊಂಡು ಆರೋಪಿ ಉದ್ಯೋ
ಗಾಂಕ್ಷಿಗಳಿಗೆ ಸರ್ಕಾರಿ ಕೆಲಸ ಹಾಗೂ ಕೆಲವರಿಗೆ ನಿವೇಶನ ಅಥವಾ ಬ್ಯಾಂಕ್‌ನಲ್ಲಿ ಸಾಲ ಕೊಡಿಸುತ್ತೇನೆ ಎಂದು ನಂಬಿಸಿ ಕೋಟಿ ರೂ.ಗೂ ಅಧಿಕ ವಂಚನೆ ಮಾಡಿದ್ದಾನೆ. ಈತನ ವಿರುದ್ಧ ವೈಯಾಲಿ ಕಾವಲ್‌, ಕೊಡಿಗೆಹಳ್ಳಿ, ಇತರೆಡೆ 7ಕ್ಕೂ ಹೆಚ್ಚು ದೂರು ದಾಖಲಾಗಿವೆ

ನೇರವಾಗಿ ಭೇಟಿ ಆಗುವುದಿಲ
ವಿಧಾನಪರಿಷತ್‌ನ ಬಿಜೆಪಿ ಸದಸ್ಯ ವಿ. ಸೋಮಣ್ಣ ಹೆಸರನ್ನು ದುರುಪಯೋಗ ಪಡಿಸಿಕೊಂಡ ಆರೋಪಿ, ನಾನು ಎಂಎಲ್‌ಸಿ ಸೋಮಣ್ಣ ಎಂದ ಷ್ಟೇ ಪರಿಚಯಿಸಿಕೊಳ್ಳುತ್ತಿದ್ದ. ಆದರೆ, ನೇರವಾಗಿ ಭೇಟಿಯಾಗು ತ್ತಿರಲಿಲ್ಲ. ಕೇವಲ ಮೊಬೈಲ್‌ನಲ್ಲಿ ಮಾತ ನಾಡುತ್ತಿದ್ದ. ಸೋಮಣ್ಣ ಎಂದರೆ ವಿ. ಸೋಮಣ್ಣ ಎಂದು ಭಾವಿಸಿ ಜನ ಮೋಸ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಠಾಣೆಗೆ ದೂರು ನೀಡಿ
ಆರೋಪಿ ಸೋಮಣ್ಣನಿಂದ ಮೋಸ ಹೋದವರು ಬಸವೇಶ್ವರನಗರ ಪೊಲೀಸ್‌ ಠಾಣೆಗೆ ದೂರು ನೀಡುವಂತೆ ಡಿಸಿಪಿ ರವಿ ಡಿ. ಚನ್ನಣ್ಣನವರ್‌ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಲು ದೂರವಾಣಿ ಸಂಖ್ಯೆ 080-22942516, ಪಶ್ಚಿಮ ವಿಭಾಗ ಕಂಟ್ರೋಲ್‌ ರೂಂ ನಂ- 22943232 ಮತ್ತು ಮೊಬೈಲ್‌ ನಂ. 94808 01729
ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.