ಎಸ್‌ಪಿ ರಸ್ತೆ ಮಳಿಗೆಗಳ ತೆರವು!


Team Udayavani, Dec 16, 2018, 12:10 PM IST

sp-road.jpg

ಬೆಂಗಳೂರು: ಕಾರ್ಪೊರೇಷನ್‌ ಕಚೇರಿ ಸಮೀಪದ ಜನಪ್ರಿಯ ಎಸ್‌.ಪಿ ರಸ್ತೆಯಲ್ಲಿ ಶನಿವಾರ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಬಿಬಿಎಂಪಿ ಅಧಿಕಾರಿಗಳು, 20ಕ್ಕೂ ಹೆಚ್ಚು ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸುವ ಮೂಲಕ ಒತ್ತುವರಿದಾರರಿಗೆ ಬಿಸಿ ಮುಟ್ಟಿಸಿದರು.

ಕೆ.ಆರ್‌.ಮಾರುಕಟ್ಟೆ ವಾರ್ಡ್‌ ವ್ಯಾಪ್ತಿಯ ಎಸ್‌.ಪಿ ರಸ್ತೆ ಸುತ್ತಮುತ್ತಲಿನ ಭಾಗಗಳಲ್ಲಿ ಹಲವಾರು ವರ್ಷಗಳಿಂದ ವ್ಯಾಪಾರಿಗಳು ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡು ವ್ಯಾಪಾರ, ವಹಿವಾಟು ನಡೆಸುತ್ತಿದ್ದರು. ಈ ಹಿಂದೆ ಒತ್ತುವರಿ ತೆರವುಗೊಳಿಸುವಂತೆ ಹಲವು ಬಾರಿ ಸೂಚಿಸಿದ್ದರೂ, ವ್ಯಾಪಾರಿಗಳು ತೆರವು ಮಾಡದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಜೆಸಿಬಿ ಬಳಸಿ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಿದರು. 

ಎಸ್‌.ಪಿ ರಸ್ತೆಯಲ್ಲಿ ನೂರಾರು ಮೊಬೈಲ್‌ ಹಾಗೂ ಎಲೆಕ್ಟ್ರಿಕಲ್‌ ಸಾಧನಗಳ ಬಿಡಿಭಾಗಗಳ ಸಗಟು ಮಳಿಗೆಗಳಿವೆ. ಬಿಡಿ ಭಾಗಗಳ ಖರೀದಿಗಾಗಿ ನಿತ್ಯ ಹತ್ತಾರು ಸಾವಿರ ಜನ ಎಸ್‌.ಪಿ ರಸ್ತೆಗೆ ಭೇಟಿ ನೀಡುತ್ತಾರೆ. ಆದರೆ, ಕೆಲವರು ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ಕಬ್ಬಿಣದ ಬಾಕ್ಸ್‌ ಮಾದರಿಯ ಮಳಿಗೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಇದರಿಂದ ಪಾದಚಾರಿಗಳು ರಸ್ತೆಯಲ್ಲಿ ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು. 

ಜನರು ರಸ್ತೆಯಲ್ಲಿ ಓಡಾಡುತ್ತಿರುವ ಕಾರಣ ಅಪಘಾತಗಳು ಸಂಭವಿಸಿ ಜನ ತೊಂದರೆ ಅನುಭವಿಸಿದ್ದಾರೆ. ಜತೆಗೆ ವಾಹನಗಳ ಸಂಚಾರಕ್ಕೂ ತೊಂದರೆಯಾಗುತ್ತಿದೆ. ಇದರಿಂದ ತೀವ್ರ ಸಂಚಾರ ದಟ್ಟಣೆ ಕೂಡ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವುಗೊಳಿಸುವಂತೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು.

ಸಾರ್ವಜನಿಕರ ದೂರುಗಳನ್ನು ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ ಪಾಲಿಕೆ ಅಧಿಕಾರಿಗಳು, ಶನಿವಾರ 20ಕ್ಕೂ ಹೆಚ್ಚು ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಿದ್ದಾರೆ. ಈ ವೇಳೆ ಮುಂಜಾಗ್ರತೆ ಕ್ರಮವಾಗಿ ಪೊಲೀಸರು ಭದ್ರತೆ ಒದಗಿಸಿದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ. ಜತೆಗೆ ತಮ್ಮ ಮಳಿಗೆ ಅನಧಿಕೃತ ಎಂಬುದು ವ್ಯಾಪಾರಿಗಳಿಗೂ ತಿಳಿದಿದ್ದರಿಂದ ಯಾರೂ ವಿರೋಧಿಸುವ ಪ್ರಯತ್ನ ಮಾಡಲಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಅನಧಿಕೃತ ಮಳಿಗೆಗಳಿಂದ ಸಾವಿರಾರು ರೂ. ಬಾಡಿಗೆ: ಕೆಲ ಕಂಪ್ಯೂಟರ್‌ ಹಾಗೂ ಎಲೆಕ್ಟ್ರಿಕಲ್‌ ವಸ್ತುಗಳ ಮಾರಾಟ ಮಳಿಗೆಗಳು ತಮ್ಮ ಕಟ್ಟಡಕ್ಕೆ ಹೊಂದಿಕೊಂಡಿರುವ ಪಾದಚಾರಿ ಮಾರ್ಗದಲ್ಲೇ ಕಟ್ಟಡ ನಿರ್ಮಿಸಿಕೊಂಡಿದ್ದರು. ಇನ್ನು ಕೆಲವರು ಪಾದಚಾರಿ ಮಾರ್ಗದಲ್ಲಿಯೇ ಪೆಟ್ಟಿಗೆ ಅಂಗಡಿ ನಿರ್ಮಿಸಿಕೊಂಡಿದ್ದರು. ಹಲವರು ಅನಧಿಕೃತವಾಗಿ ಮಳಿಗೆಗಳನ್ನು ನಿರ್ಮಿಸಿ ಸಾವಿರಾರು ರೂ. ಬಾಡಿಗೆ ಪಡೆಯುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ವಾರ್ಡ್‌ನ ಇತರೆಡೆಯೂ ಕಾರ್ಯಾಚರಣೆ: ಸಾರ್ವಜನಿಕರು ಸಂಚರಿಸಲಿ ಎಂಬ ಉದ್ದೇಶದಿಂದ ಪಾದಚಾರಿ ಮಾರ್ಗಗಳನ್ನು ನಿರ್ಮಿಸಲಾಗಿದೆ. ಅವುಗಳನ್ನು ಒತ್ತುವರಿ ಮಾಡಿಕೊಂಡು ಮಳಿಗೆಗಳನ್ನು ನಿರ್ಮಿಸಿದರೆ ಜನ ಎಲ್ಲಿ ಓಡಾಡಬೇಕು? ಈ ಬಗ್ಗೆ ಸಾರ್ವಜನಿಕರು ನೀಡಿದ ದೂರುಗಳನ್ನು ಆಧರಿಸಿ ತೆರವು ಕಾರ್ಯಾಚರಣೆ ನಡೆಸಿದ್ದು, ವಾರ್ಡ್‌ನ ಉಳಿದ ಭಾಗಗಳಲ್ಲಿ ಆಗಿರುವ ಪಾದಚಾರಿ ಮಾರ್ಗದ ಒತ್ತುವರಿಯನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ನಾಗರಾಜು ತಿಳಿಸಿದ್ದಾರೆ.

ಟಾಪ್ ನ್ಯೂಸ್

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.