ಶೀಘ್ರ ಕಾಮಗಾರಿ ಪೂರ್ಣಕ್ಕೆ ತಾಕೀತು: ಅಧಿಕಾರಿಗಳ ಜತೆ ಗೌರವ್‌ ಗುಪ್ತ ಮಾತುಕತೆ

ಸಂಗೊಳ್ಳಿರಾಯಣ್ಣ ಪ್ರತಿಮೆ, ಸ್ಟೀಲ್‌ ಬ್ರಿಡ್ಜ್, ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

Team Udayavani, Aug 13, 2021, 2:29 PM IST

ಶೀಘ್ರ ಕಾಮಗಾರಿ ಪೂರ್ಣಕ್ಕೆ ತಾಕೀತು: ಅಧಿಕಾರಿಗಳ ಜತೆ ಗೌರವ್‌ ಗುಪ್ತ ಮಾತುಕತೆ

ಬೆಂಗಳೂರು: ನಗರದ ವಿವಿಧೆಡೆ ನಡೆಯುತ್ತಿರುವ ಪ್ರತಿಮೆ, ಮೇಲ್ಸೆತುವೆ, ರಸ್ತೆ ಕಾಮಗಾರಿಯ ಸ್ಥಳಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂಗೊಳ್ಳಿ ರಾಯಣ್ಣರವರ ಪ್ರತಿಮೆಯ ಬಳಿ ಬಾಕಿಯಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ವೃತ್ತದಲ್ಲಿರುವ ಕಿರು ಉದ್ಯಾನದ ಸುತ್ತಲು ಅಳವಡಿಸಿರುವ ಕಂಬಗಳು ಹಳೆಯದಾಗಿದ್ದು, ಇನ್ನು ಕೆಲವು ಹಾಳಾಗಿವೆ. ಅದನ್ನೆಲ್ಲಾ ದುರಸ್ತಿಪಡಿಸಿ. ಅಲ್ಲದೆ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಬೃಹತ್‌ ವಿದ್ಯುತ್‌ ಕಂಬದಲ್ಲಿರುವ ಎಲ್ಲಾ ದೀಪಗಳನ್ನು ಸರಿಪಡಿಸಲು ಸೂಚಿಸಿದ ಅವರು , ರಸ್ತೆಗೆ ಡಾಂಬರೀಕರಣ ಮಾಡಿ ಲೈನ್‌ ಮಾರ್ಕಿಂಗ್‌ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಓಕಳಿಪುರ ಅಷ್ಟಪಥಕಾರಿಡಾರ್‌ ಬಳಿ ತುಮಕೂರು ಕಡೆಗೆ ಹೋಗುವ ರೈಲ್ವೆ ಟ್ರಾಕ್‌ ಅಡಿ ರೈಲ್ವೆ ಇಲಾಖೆ ವತಿಯಿಂದ ಬಾಕ್ಸ್‌ ಪುಶಿಂಗ್‌ ಕಾಮಗಾರಿ
ನಡೆಯುತ್ತಿದ್ದು, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲು ಮುಖ್ಯ ಆಯುಕ್ತರು ಅಧಿಕಾರಿಗಳಿಗೆ
ಸೂಚಿಸಿದರು.

ಚೆನ್ನೈ ಕಡೆ ಹೋಗುವ ರೈಲ್ವೆ ಹಳಿ ಕೆಳಗೆ ಎರಡು ಬಾಕ್ಸ್‌ ಬರಲಿದ್ದು, ರೈಲ್ವೆ ಇಲಾಖೆಯಿಂದ ಕಾಮಗಾರಿ ನಡೆಯುತ್ತಿದೆ. ರಸ್ತೆ ಬದಿ ಭಗ್ನಾವೇಶಗಳು ಬಿದ್ದಿರುವುದನ್ನು ತೆರವುಗೊಳಿಸಲು ಹೇಳಿದರು.ವಾಹನ ಸಂಚಾರಕ್ಕೆ ಬಳಕೆಯಾಗದಿರುವ ರಸ್ತೆಯನ್ನು ಕೂಡಲೆ ವಾಹನ ಸಚಾರ ಓಡಾಟಕ್ಕೆ ಅನುವು ಮಾಡಿಕೊಡಲು ಅಧಿಕಾರಿಗಳಿಗೆ ತಿಳಿಸಿದರು.

ಇದನ್ನೂ ಓದಿ:ಶಾಲಾ, ಕಾಲೇಜು ಪುನರಾರಂಭ: ಟಾಸ್ಕ್ ಫೋರ್ಸ್ ಆಕ್ಷೇಪ, ಮಹಾ ಸರ್ಕಾರ ಯೂ ಟರ್ನ್

ವೈ ಜಂಕ್ಷನ್‌ ಭೇಟಿ: ಬೆಂಗಳೂರು ಹಳೇ ಮೈಸೂರು ರಸ್ತೆ(ಮಾಗಡಿ ರಸ್ತೆ) ಹಾಗೂ ವಾಟಾಳ್‌ ನಾಗರಾಜ್‌ ರಸ್ತೆ (ಸುಜಾತ ಟಾಕೀಸ್‌) ವೈ ಜಂಕ್ಷನ್‌ ನಲ್ಲಿ ಗ್ರೇಡ್‌ ಸೆಪರೇಟರ್‌ ಯೋಜನೆಯು 30 ಕೋಟಿ ರೂ. ವೆಚ್ಚದಲ್ಲಿ ಸರ್ಕಾರವು ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆ ಅನುದಾನದಲ್ಲಿ ಅನುಮೋದನೆ ನೀಡಿದ್ದು, ಮುಖ್ಯ ಆಯುಕ್ತರು ಇಂದು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವೈ ಜಂಕ್ಷನ್‌ ವಾಟಾಳ್‌ ನಾಗರಾಜ್‌ ರಸ್ತೆಯು ತುಮಕೂರು ರಸ್ತೆ ಮತ್ತು ಡಾ. ರಾಜ್‌ಕುಮಾರ್‌ ರಸ್ತೆಗೆ ಲಿಂಕ್‌ ರಸ್ತೆಯಾಗಿದ್ದು, ಇದು ಹೊರ ಪ್ರದೇಶಕ್ಕೆ ಹೋಗುವ ಪ್ರಮುಖ ರಸ್ತೆಯಾಗಿರುತ್ತದೆ. ಮೆಜೆಸ್ಟಿಕ್‌ ಮತ್ತು ರಾಜಾಜಿನಗರ ಕಡೆಯಿಂದ ಬರುವ ವಾಹನಗಳು ಸದರಿ ಜಂಕ್ಷನ್‌ ನಲ್ಲಿ ಹಾಲಿ ಸಿಗ್ನಲ್‌ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ವಾಹನ ದಟ್ಟಣೆಯನ್ನು ನಿವಾರಿಸಲು ವಾಟಾಳ್‌ ನಾಗರಾಜ್‌ ರಸ್ತೆ ಮತ್ತು ಮಾಗಡಿ ಡಿವೈಷನ್‌ ರಸ್ತೆ(ಹಳೇ ಮೈಸೂರು ರಸ್ತೆ) ವೈ ಜಂಕ್ಷನ್‌ ನಲ್ಲಿ ಮೆಜೆಸ್ಟಿಕ್‌ ಮತ್ತು ರಾಜಾಜಿನಗರ ಕಡೆ ಕೆಳಸೇತುವೆ ಕಾಮಗಾರಿ ಪ್ರಗತಿಯಲ್ಲಿದ್ದು, ಶೇ.67 ಕಾಮಗಾರಿ ಮುಗಿದಿದೆ. ಕೆಳಸೇತುವೆ ಕಾಮಗಾರಿ ಪುರ್ಣಗೊಂಡ ಬಳಿಕ ಆ ಮಾರ್ಗದಲ್ಲಿ ವಾಹನ ಸಂಚಾರಕ್ಕೆ
ಅನುಮಾಡಿ ಮೇಲುಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ

ಶಿವಾನಂದ ವೃತ್ತ ಮೇಲುಸೇತುವೆ ಪರಿಶೀಲನೆ
ನಗರದ ಶಿವಾನಂದ ವೃತ್ತದಲ್ಲಿ ನಡೆಯುತ್ತಿರುವ ಮೇಲು ಸೇತುವೆ ಕಾಮಗಾರಿಯನ್ನು ಮುಖ್ಯ ಆಯುಕ್ತ ಗೌರವ್‌ ಗುಪ್ತ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ರವರು ಗುರುವಾರ ಜಂಟಿ ಪರಿಶೀಲನೆ ನಡೆಸಿದರು. ಈ ಸ್ಥಳದಲ್ಲಿ ಮೇಲುಸೇತುವೆ ಕಾಮಗಾರಿಗೆ579 ಚ.ಮೀ
ಭೂಸ್ವಾಧೀನವಾಗಬೇಕಿದ್ದು, ಅದನ್ನುಕೂಡಲೆ ಇತ್ಯರ್ಥಪಡಿಸಲು ಮುಖ್ಯ ಆಯುಕ್ತರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಇರ್ತಥ್ಯಪಡಿಸಿಲು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಶಿವಾನಂದ ವೃತ್ತದಲ್ಲಿ ನಡೆಯುತ್ತಿ ರುವ ಮೇಲುಸೇತುವೆಯ ರ್‍ಯಾಂಪ್‌ ಕೆಲಸ ಹಾಗೂ ತಡೆಗೋಡೆಯ ಕಾಮಗಾರಿ ಬಾಕಿ ಯಿದ್ದು, ಭೂಸ್ವಾಧೀನ ಪಡೆಸಿಕೊಳ್ಳಬೇಕಿರುವ ಸ್ಥಳ ವನ್ನು
ತ್ವರಿತವಾಗಿ ಸ್ವಾಧೀನ ಪಡಿಸಿಕೊಂಡು ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸಲು ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಕೆಂಗೇರಿ ಮೆಟ್ರೋ ಮಾರ್ಗ ಪರಿಶೀಲನೆ ಪೂರ್ಣ
ಬೆಂಗಳೂರು: “ನಮ್ಮ ಮೆಟ್ರೋ’ ಎರಡನೇ ಹಂತದ ಮೈಸೂರು ರಸ್ತೆ-ಕೆಂಗೇರಿ ನಡುವಿನ ವಿಸ್ತರಿಸಿದ ಮಾರ್ಗದ ಪರಿಶೀಲನೆಯನ್ನು ಮೆಟ್ರೋ ರೈಲು ಸುರಕ್ಷತಾ ಆಯುಕ್ತ (ಸಿಎಂಆರ್‌ಎಸ್‌)ರ ತಂಡ ಗುರುವಾರ ಪೂರ್ಣಗೊಳಿಸಿದೆ. 7.53ಕಿ.ಮೀ. ಮಾರ್ಗ ಹಾಗೂ ಅದರಲ್ಲಿ ಬರುವ ಎಲ್ಲ ಆರು ನಿಲ್ದಾಣಗಳ ಭೌತಿಕ ಮತ್ತು ತಾಂತ್ರಿಕ ಅಂಶಗಳ ಬಗ್ಗೆ ಎರಡು ದಿನಗಳು ಸುದೀರ್ಘ‌ ಪರಿಶೀಲನೆ ನಡೆಸಿದ ತಂಡ, ಹಲವು ಮಾಹಿತಿಗಳನ್ನು ದಾಖಲಿಸಿಕೊಂಡಿತು. ಸಿಗ್ನಲಿಂಗ್‌ ವ್ಯವಸ್ಥೆ, ಹಳಿ, ರೈಲುಕಾರ್ಯಾಚರಣೆ, ತುರ್ತು ನಿರ್ಗಮನ, ರೈಲು ಮತ್ತು ನಿಲ್ದಾಣಗಳಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನುಕೂಲಂಕಷವಾಗಿ ತಪಾಸಣೆ ನಡೆಸಿತು.

ಮುಂದಿನ10-15 ದಿನಗಳಲ್ಲಿ ಸಿಎಂಆರ್‌ಎಸ್‌ ತನ್ನ ವರದಿಯೊಂದಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌)ಕ್ಕೆ ಪ್ರತಿಕ್ರಿಯೆ ನೀಡಲಿದೆ. ಎಲ್ಲವೂ ಸರಿಯಾಗಿದ್ದರೆ, ಸಾರ್ವಜನಿಕ ಸೇವೆ ಆರಂಭಿಸಲು ಅನುಮತಿಯೂ ದೊರೆಯಲಿದೆ. ಈ ಮಧ್ಯೆ ಕೊರೊನಾ ಮೂರನೇ ಅಲೆ ಮುನ್ಸೂಚನೆ ಇದ್ದು, ರಾತ್ರಿ ಕರ್ಫ್ಯೂ ಜಾರಿ ಬಗ್ಗೆಯೂ ಚರ್ಚೆಗಳು ನಡೆದಿವೆ. ಆದ್ದರಿಂದ ಮತ್ತೆ ಕೋವಿಡ್‌ ಹಾವಳಿ ಶುರುವಾಗುವ
ಮುನ್ನವೇ ಕೆಂಗೇರಿ ಮಾರ್ಗವನ್ನು ಲೋಕಾರ್ಪಣೆ ಮಾಡುವ ಉದ್ದೇಶ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.