ರಾಷ್ಟ್ರಗೀತೆಗೆ ಮುನ್ನವೇ ಹೊರ ನಡೆದ ಸ್ಪೀಕರ್
Team Udayavani, May 20, 2018, 7:00 AM IST
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆಂದು ಯಡಿಯೂರಪ್ಪ ಹೇಳಿ ಮಾತು
ಮುಗಿಸುತ್ತಿದ್ದಂತೆ ಸ್ಪೀಕರ್ ಸ್ಥಾನದಲ್ಲಿದ್ದ ಕೆ.ಜಿ.ಬೋಪಯ್ಯ ಕಲಾಪವನ್ನು ಅನಿರ್ದಿಷ್ಟಾವಧಿ ಮುಂದೂಡಿ ಎದ್ದು
ಹೊರಟರು.
ಇದರ ಬೆನ್ನಲ್ಲೇ ಬಿಜೆಪಿ ಸದಸ್ಯರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸದನದಿಂದ ಹೊರನಡೆಯಲಾರಂಭಿಸಿದರು. ಅಷ್ಟರಲ್ಲಿ ರಾಷ್ಟ್ರಗೀತೆ ನುಡಿಸಲಾಯಿತಾದರೂ ಗದ್ದಲದಲ್ಲಿ ಸರಿಯಾಗಿ ಕೇಳಿಸಲಿಲ್ಲ. ಬಿಎಸ್ವೈ ಸೇರಿ ಅರ್ಧದಷ್ಟು ಬಿಜೆಪಿ ಸದಸ್ಯರು ಹೊರನಡೆದರು. ಈ ಮಧ್ಯೆ ರಾಷ್ಟ್ರಗೀತೆ ಹಾಡಲಾಗುತ್ತಿದೆ. ಎಲ್ಲರೂ ಎದ್ದುನಿಂತು ಗೌರವ ಸೂಚಿಸಿ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಹೇಳುತ್ತಿದ್ದರೂ ಕೇಳುವ ವ್ಯವಧಾನ ತೋರಲಿಲ್ಲ.
ಇದರಿಂದ ಅಸಮಾಧಾನಗೊಂಡ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು, ರಾಷ್ಟ್ರಗೀತೆ ಹಾಡುತ್ತಿರುವಾಗ ಸ್ಪೀಕರ್ ಹೋಗಿದ್ದಾರೆ. ಅವರನ್ನು ವಾಪಸ್ ಕರೆಯಿಸಿ ಎಂದು ದಂಡನಾಯಕರನ್ನು ಒತ್ತಾಯಿಸಿದರು. ಅಷ್ಟರಲ್ಲಿ ಒಂದು ಬಾರಿ ರಾಷ್ಟ್ರಗೀತೆ ಮುಗಿದಿತ್ತು. ಒಳಗೆ ಹೋದ ದಂಡನಾಯಕರು ಸ್ಪೀಕರ್ ಅವರನ್ನು ವಾಪಸ್ ಕರೆತರುತ್ತಿದ್ದಾರೆ ಎಂದಾಗ ಎರಡನೇ ಬಾರಿ ರಾಷ್ಟ್ರಗೀತೆ ಹಾಡಲಾಯಿತು. ಆದರೆ, ಅಷ್ಟರಲ್ಲಿ ಸ್ಪೀಕರ್ ತಮ್ಮ ಸ್ಥಾನಕ್ಕೆ ತಲುಪಲು ಸಾಧ್ಯವಾಗದೆ ಸ್ಪೀಕರ್ ಕುರ್ಚಿಯ ಹಿಂದೆ ನಿಂತು ಗೌರವ ಸಲ್ಲಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ