10 ದಿನದಲ್ಲಿ ಪೊಲೀಸರಿಗೆ ವಿಶೇಷ ಭತ್ಯೆ ಬಿಡುಗಡೆ
Team Udayavani, Nov 3, 2021, 10:55 AM IST
ಬೆಂಗಳೂರು: ವಿಶೇಷ ಸಂದರ್ಭದಲ್ಲಿ ಸೇವೆ ಸಲ್ಲಿಸುವ ಪೊಲೀಸರ ಭತ್ಯೆಯನ್ನು ಹತ್ತು ದಿನದಲ್ಲಿ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಪೊಲೀಸ್ ಮುಖ್ಯ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ, ನಟ ಪುನೀತ್ ರಾಜಕುಮಾರ್ ಅಂತಿಮ ದರ್ಶನ ಹಾಗೂ ವಿದಾಯ ಸಂದರ್ಭ ದಲ್ಲಿ ಹರಿದು ಬಂದ ಜನಸಾಗರ ವನ್ನು ಅತ್ಯುತ್ತಮವಾಗಿ ನಿರ್ವಹಿಸಿ, ಸಾರ್ವಜನಿ ಕರ ಮೆಚ್ಚುಗೆಗೆ ಪಾತ್ರರಾದ ಪೊಲೀಸ್ ಸಿಬ್ಬಂದಿಯನ್ನು ಅಭಿನಂದಿಸಿದರು.
ಪುನೀತ್ ರಾಜಕುಮಾರ್ರವರ ಅನಿ ರೀಕ್ಷಿತ ನಿಧನ ಹಾಗೂ ಈ ಅವಧಿಯಲ್ಲಿ ಯೋಜನಾಬದ್ಧವಾಗಿ ರಕ್ಷಣಾ ವ್ಯವಸ್ಥೆ ನಿರ್ವಹಿಸಿದ ಎಲ್ಲಾ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದ ಕಾರ್ಯ ಶ್ಲಾಘನೀಯ ಎಂದರು. ಇದೇ ಸಂದರ್ಭದಲ್ಲಿ ತಮ್ಮ ವಿಶೇಷ ಕರ್ತವ್ಯ ನಿರ್ವಹಣೆಗೆ ನೀಡಲಾಗುವ ಭತ್ಯೆ ಹಾಗೂ ಇನ್ನಿತರ ಸವಲತ್ತುಗಳನ್ನು, ಕಾನ್ಸ್ಟೇಬಲ್ಗಳಿಗೆ, 10 ದಿನಗಳ ಒಳಗೆ ಪಾವತಿಸಲು ಕ್ರಮ ತೆಗೆದುಕೊಳ್ಳುವಂ ತೆಯೂ ಹಿರಿಯ ಅಧಿಕಾರಿಗಳಿಗೆ ಸಚಿ ವರು ಸೂಚಿಸಿದರು.
ಇದನ್ನೂ ಓದಿ;- ಅಪ್ಪು ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ಆರೋಪಿ ಸೆರೆ
ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಮಾತ ನಾಡಿ, ಪುನೀತ್ ರಾಜಕುಮಾರ್ರವರ ಅಕಾಲಿಕ ನಿಧನ ಹಾಗೂ ಅಂತಹ ಕ್ಲಿಷ್ಟ ರವಾದ ಸನ್ನಿವೇಶ ವನ್ನು, ವಿವರಿಸಿದ್ದಲ್ಲದೆ, ಎಲ್ಲಾ ಪೊಲೀಸ್ ಅಧಿಕಾರಿಗಳು ಒಂದು ತಂಡವಾಗಿ ಕರ್ತವ್ಯ ನಿರ್ವಹಿಸಿ, ಯಶಸ್ವಿ ಯಾಗಿ ನಿಭಾಯಿಸಲು ಸಾಧ್ಯವಾಯಿತು ಎಂದರು.
ಮಾದರಿ ಕೇಸ್ ಸ್ಟಡಿಯಾಗಿ ದಾಖಲಿಸಿ- ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಸಹ ನಮ್ಮ ಜೊತೆಗೆ ಪ್ರೇರಕ ಶಕ್ತಿಯಾಗಿ ನಿಂತಿದ್ದರು ಎಂದೂ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸ್ಮರಿಸಿದರು. ಅನಿರೀಕ್ಷಿತ ಹಾಗೂ ಸವಾಲಿನ ಸಂದರ್ಭವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ, ಗಳಿಸಿದ ಅನುಭವವನ್ನು ಒಂದು ‘ಮಾದರಿ ಕೇಸ್ ಸ್ಟಡಿ’ ಆಗಿ ದಾಖಲಿಸಬೇಕು ಎಂದೂ ತಿಳಿಸಿದರು. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ