ಸ್ವಾಮಿನಾಥನ್ ನೇತೃತ್ವದಲ್ಲಿ ಕಾವೇರಿ ವಿವಾದಕ್ಕೆ ಇತಿಶ್ರೀ
Team Udayavani, Jan 19, 2018, 6:15 AM IST
ಬೆಂಗಳೂರು: ಕೃಷಿ ವಿಜ್ಞಾನಿ ಪ್ರೊ. ಸ್ವಾಮಿನಾಥನ್ ಅವರ ನೇತೃತ್ವದಲ್ಲಿ ತಮಿಳುನಾಡು ಹಾಗೂ ಕರ್ನಾಟಕದ ರೈತರೊಂದಿಗೆ ಮಾತುಕತೆ ನಡೆಸಿ ಕಾವೇರಿ ವಿವಾದ ಬಗೆ ಹರಿಸಲು ಪ್ರಯತ್ನಿಸಲಾಗುವುದು ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನದಿ ನೀರಿನ ಹಂಚಿಕೆ ವಿಚಾರವಾಗಿ ರಾಜಕೀಯ ಬದಿಗಿಟ್ಟು ಎರಡೂ ರಾಜ್ಯಗಳ ರೈತರು ಕುಳಿತು ಮಾತುಕತೆ ನಡೆಸಿದರೆ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಅದಕ್ಕಾಗಿ ಕೃಷಿ ತಜ್ಞ ಸ್ವಾಮಿನಾಥನ್ ಅವರ ನೇತೃತ್ವದಲ್ಲಿಯೇ ರೈತರೊಂದಿಗೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನ ಆರಂಭಿಸಲಾಗುವುದು ಎಂದು ಹೇಳಿದರು. ಅದೇ ರೀತಿ ಮಹದಾಯಿ ವಿವಾದವನ್ನೂ ಮಾತುಕತೆಯ ಮೂಲಕವೇ ಬಗೆ ಹರಿಸಿಕೊಳ್ಳಬಹುದು. ಪ್ರಧಾನಿ ನರೇಂದ್ರ ಮೋದಿ ಈ ವಿಷಯದಲ್ಲಿ ಮೌನವಾಗಿರುವುದು ಬೇಸರ ತಂದಿದೆ.
ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ರೈತ ಪರ ಹೋರಾಟ ಆರಂಭಿಸಿದ್ದು, ಅವರ ನೇತೃತ್ವದಲ್ಲಿ ಮಹದಾಯಿ ಹೋರಾಟವನ್ನು ಮುಂದುವರೆಸಿ, ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸಲಾಗುವುದು ಎಂದು ಹೇಳಿದರು. ಹಿಂದೆ ಇಂದಿರಾ ಗಾಂಧಿ, ವಾಜಪೇಯಿ ಪ್ರಧಾನಿಯಾಗಿದ್ದಾಗ ನದಿ ನೀರಿನ ಹಂಚಿಕೆ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಿದ್ದಾರೆ. ಅದೇ ರೀತಿ ಪ್ರಧಾನಿ ನರೇಂದ್ರ ಮೋದಿ ಮಹದಾಯಿ ವಿವಾದವನ್ನು ಬಗೆ ಹರಿಸಬೇಕೆಂದು ಸ್ವಾಮೀಜಿ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್