ಬಿಎಸ್ವೈ ಭೇಟಿ ಮಾಡಿದ ಶ್ರೀರಾಮುಲು
Team Udayavani, Apr 3, 2018, 7:20 AM IST
ಬೆಂಗಳೂರು:ಬಳ್ಳಾರಿ ಸಂಸದ ಹಾಗೂ ಜನಾರ್ಧನರೆಡ್ಡಿ ಆಪ್ತ ಶ್ರೀರಾಮುಲು ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಜನಾರ್ಧನರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದರಿಂದ ಆತಂಕಗೊಂಡಿರುವ ಶ್ರೀರಾಮುಲು ದಿಢೀರ್ ಬೆಂಗಳೂರಿಗೆ ಆಗಮಿಸಿ ಯಡಿಯೂರಪ್ಪ ಜತೆ ಸುಮಾರು ಒಂದು ಗಂಟೆ ಕಾಲ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.
ಜನಾರ್ಧನರೆಡ್ಡಿ ಅವರು ಬಳ್ಳಾರಿಯಷ್ಟೇ ಅಲ್ಲದೆ ರೆಡ್ಡಿ ಸಮುದಾಯ ಇರುವ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದರೆ ಕಷ್ಟವಾಗುತ್ತದೆ ಎಂದು ಶ್ರೀರಾಮುಲು ಯಡಿಯೂರಪ್ಪ ಅವರ ಬಳಿ ಅವಲತ್ತುಕೊಂಡರು.
ಜನಾರ್ಧನರೆಡ್ಡಿ ವಿರುದ್ಧದ ಆರೋಪಗಳಲ್ಲೂ ಕೆಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಕ್ಲೀನ್ಚಿಟ್ ಸಿಕ್ಕಿವೆ. ಪಕ್ಷಕ್ಕೆ ಅವರಿಂದ ಶಕ್ತಿ ತುಂಬಲಿದೆ. ರಾಷ್ಟ್ರೀಯ ಅಧ್ಯಕ್ಷರು ಬಹಿರಂಗವಾಗಿಯೇ ಈ ರೀತಿ ಹೇಳಿರುವುದು ಬೆಂಬಲಿಗರಲ್ಲೂ ಗೊಂದಲ ಮೂಡಿದೆ ಎಂದು ಹೇಳಿದರು ಎನ್ನಲಾಗಿದೆ.
ಆದರೆ, ಶ್ರೀರಾಮುಲು ಅವರನ್ನು ಸಮಾಧಾನಪಡಿಸಿದ ಯಡಿಯೂರಪ್ಪ, ಪ್ರಸಕ್ತ ಸನ್ನಿವೇಶದಲ್ಲಿ ಅಮಿತ್ ಶಾ ಅವರು ಆ ರೀತಿ ಹೇಳಲೇಬೇಕಿದೆ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ನಿಮ್ಮಷ್ಟಕ್ಕೆ ನೀವು ಪಕ್ಷದ ಕೆಲಸ ಮಾಡಿ ಎಂದು ಹೇಳಿ ಕಳುಹಿಸಿದರು ಎಂದು ಹೇಳಲಾಗಿದೆ.
ಯಡಿಯೂರಪ್ಪ ಭೇಟಿ ನಂತರ ಸುದ್ದಿಗಾರರ ಜತೆ ಮಾತನಾಡಿದ ಶ್ರೀರಾಮುಲು. ಅಮಿತ್ ಶಾ ಪ್ರವಾಸ ರದ್ದಾಗಿರುವ ಬಗ್ಗೆ ಯಡಿಯೂರಪ್ಪ ಅವರ ಜತೆ ಮಾತನಾಡಲು ಬಂದಿದ್ದೇನೆ. ಜನಾರ್ಧನರೆಡ್ಡಿ ಬಗ್ಗೆ ಅಮಿತ್ ಹೇಳಿಕೆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು