ಕುಮುದ್ವತಿ ನದಿ ಪುನರುಜ್ಜೀವನ 2.0 ಅಭಿಯಾನಕ್ಕೆ ಚಾಲನೆ

ನೀರಿನ ಸಮಸ್ಯೆ ಪರಿಹಾರ, ಜಲಸಾಕ್ಷರತೆ ಮೂಡಿಸುವ ಉದ್ದೇಶ | ಆರ್ಟ್‌ ಆಫ್ ಲಿವಿಂಗ್‌ನಿಂದ ಅಭಿಯಾನ

Team Udayavani, May 28, 2019, 1:07 PM IST

bengaluru-tdy-4..

ಬೆಂಗಳೂರು: ನೀರಿನ ಸಮಸ್ಯೆ ಪರಿಹಾರ ಹಾಗೂ ರೈತರಲ್ಲಿ ಜಲಸಾಕ್ಷರತೆ ಮೂಡಿಸುವ ಉದ್ದೇಶದಿಂದ ಆರ್ಟ್‌ ಆಫ್ ಲಿವಿಂಗ್‌ ಸಂಸ್ಥೆ ‘ಕುಮುದ್ವತಿ ಪುನರುಜ್ಜೀವನ 2.0’ ಅಭಿಯಾನವನ್ನು ಆರಂಭಿಸಿದೆ.

ಕುಮುದ್ವತಿ ನದಿಯ ಹಿದಿನ ವೈಭವವನ್ನು ಮರುಳಿಸುವಂತೆ ಮಾಡುವ ಉದ್ದೇಶದಿಂದ ಆರ್ಟ್‌ ಆಫ್ ಲಿವಿಂಗ್‌ ಸಂಸ್ಥೆಯು 2013ರಲ್ಲಿ ನದಿಯ ಪುನರುಜ್ಜೀವನ ಯೋಜನೆ ಆರಂಭಿಸಿತ್ತು. ಅದರಂತೆ ಕಳೆದ ಆರು ವರ್ಷಗಳಲ್ಲಿ 3000ಕ್ಕೂ ಹೆಚ್ಚು ಮಳೆನೀರು ಸಂಗ್ರಹ ತೊಟ್ಟಿಗಳನ್ನು ನಿರ್ಮಿಸುವ ಮೂಲಕ ಅಂತರ್ಜಲ ಮರುಪೂರಣಗೊಳ್ಳುವಂತೆ ಮಾಡಲಾಗಿದೆ.

ಇದರೊಂದಿಗೆ 460 ಚದರ ಕಿ.ಮೀ. ಪ್ರದೇಶದಲ್ಲಿ ಸಸಿಗಳನ್ನು ನೆಟ್ಟು ಪೋಷಿಸಲಾಗಿದೆ. ಪರಿಣಾಮ ಕುಮುದ್ವತಿ ಪುನರುಜ್ಜೀವನ ಯೋಜನೆಯಿಂದಾಗಿ ಕುಮುದ್ವತಿ ನದಿ ಜಲಾನಯನ ಪ್ರದೇಶದ ಅಂತರ್ಜಲ ಮಟ್ಟದಲ್ಲಿ ಶೇ.2ರಷ್ಟು ಏರಿಕೆಯಾಗಿರುವುದು ಕಂಡುಬಂದಿದೆ. ಆ ಹಿನ್ನೆಲೆಯಲ್ಲಿ ಇದೀಗ ಕುಮುದ್ವತಿ 2.0 ಯೋಜನೆಯ ಮೂಲಕ ರೈತರಲ್ಲಿ ಜಲಸಾಕ್ಷರತೆ ಮೂಡಿಸಲು ಸಂಸ್ಥೆ ಮುಂದಾಗಿದೆ.

ಎರಡನೇ ಹಂತ ಯೋಜನೆ ಕುರಿತು ಮಾಹಿತಿ ನೀಡಿದ ಆರ್ಟ್‌ ಆಫ್ ಲಿವಿಂಗ್‌ ನದಿ ಪುನರುಜ್ಜೀವನ ಯೋಜನೆಯ ರಾಷ್ಟ್ರೀಯ ನಿರ್ದೇಶಕರಾಗಿರುವ ಡಾ.ವೈ.ಲಿಂಗರಾಜು, ಕುಮುದ್ವತಿ ನದಿಯು ತನ್ನ ವೈಭವದ ಕಾಲದಲ್ಲಿ 278 ಹಳ್ಳಿಗಳ ಜೀವನಾಡಿಯಾಗಿತ್ತು. ಅದ್ಭುತವಾದ ಜೀವವೈವಿಧ್ಯದ ನೆಲೆಯೂ ಆಗಿತ್ತು. 45 ಕಿ.ಮೀ. ಉದ್ದದ ನದಿಯು ಅರ್ಕಾವತಿ ನದಿಯೊಂದಿಗೆ ಬೆಂಗಳೂರಿನ ಶೇ.30-40ರಷ್ಟು ನೀರಿನ ಅವಶ್ಯಕತೆಯನ್ನು ಪೂರೈಸುತ್ತಿತ್ತು. ನದಿಯನ್ನು ಪುರುಜ್ಜೀವನಗೊಳಿಸಲು ಈಗಾಗಲೇ 3000ಕ್ಕೂ ಹೆಚ್ಚು ಮರುಪೂರಣಗಳನ್ನು ನಿರ್ಮಿಸಲಾಗಿದ್ದು, ಎರಡನೇ ಹಂತದಲ್ಲಿ ರೈತರ ಹೊಲಗಳು ಹಾಗೂ ಜನವಸತಿ ಪ್ರದೇಶಗಳಿಗೆ ಯೋಜನೆ ವಿಸ್ತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ನೀರಿನ ಪ್ರಮುಖ ಮೂಲ ಮಳೆಯಾಗಿದ್ದು, ಮಳೆನೀರಿನ ಕೊಯ್ಪಿನ ಮೂಲಕ ಅಂತರ್ಜಲ ಮರು ಪೂರಣ ಮಾಡುವುದು ಅಗತ್ಯವಾಗಿದೆ. ಯೋಜನೆ ಆದ್ಯತೆ ವಿಷಯವೆಂದರೆ ರೈತರಲ್ಲಿ ಜಲಸಾಕ್ಷತೆ ಮೂಡಿಸುವುದು. ಆ ನಿಟ್ಟಿನಲ್ಲಿ ತಮ್ಮ ಹೊಲಗಳಲ್ಲಿ ನಿರ್ಮಿಸಿಕೊಳ್ಳುವ ಮರುಪೂರಣ ವ್ಯವಸ್ಥೆಯಿಂದ ಮತ್ತು ನೀರು ಸಮರ್ಪಕ ಬಳಕೆಯಿಂದ ನೀರಿನ ಸಂಗ್ರಹ ಸಾಮರ್ಥಯ ಹೆಚ್ಚಿಸಿಕೊಳ್ಳುವ ಕುರಿತು ಹಾಗೂ ಜಲಸಂರಕ್ಷಣೆಯ ವಿಷಯದಲ್ಲಿ ರೂಪಿತವಾಗಿರುವ ಸರ್ಕಾರಿ ಯೋಜನೆಗಳ ಜಾರಿಯ ಬಗ್ಗೆಯೂ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

2.0 ಯೋಜನೆಯ ಗುರಿಗಳು

2500 ಹೆಕ್ಟೆರ್‌ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆ
ಮರುಪೂರಣ ನಿರ್ಮಾಣಗಳನ್ನು ಖಾಸಗಿ ಹೊಲಗಳಲ್ಲಿ ನಿರ್ಮಿಸುವುದು ರೈತರಿಗೆ ಜಲಸಾಕ್ಷರತೆ, ಬಹು ಬೆಳೆ ಬೇಸಾಯ, ನೀರಿನ ಯೋಜಿತ ಬಳಕೆ ಕುರಿತು ತರಬೇತಿ
ಕೆರೆಗಳ ಹೂಳು ತೆಗೆದು ಸಂಗ್ರಹ ಸಾಮರ್ಥಯ ಹೆಚ್ಚಿಸುವುದು
ನಿರ್ಮಾಣಗೊಂಡಿರುವ ಮರುಪೂರಣ ವ್ಯವಸ್ಥೆಗಳನ್ನು ಸುವ್ಯವಸ್ಥಿತವಾಗಿರುವಂತೆ ನೋಡಿಕೊಳ್ಳುವುದು
ಪ್ರದೇಶದ ನೀರಿನ ಅಗತ್ಯಗಳನ್ನು ಪೂರೈಸುವ ಜಲಾನಯನ ಪ್ರದೇಶದ  ವ್ಯವಸ್ಥಾಪಕರಂತೆ ವರ್ತಿಸಲು ಪ್ರಚೋದಿಸುವುದು
ಸತತವಾಗಿ ಏರುತ್ತಿರುವ ಉತ್ಪಾದನಾ ವೆಚ್ಚ ತಗ್ಗಿಸಲು ಸಹಜ ಕೃಷಿಯ ಬಗ್ಗೆ ತರಬೇತಿ ನೀಡುವುದು
ರೈತರ ಉತ್ಪನ್ನಗಳ ಮೌಲ್ಯವರ್ಧನೆ ಮಾಡುವುದು
ರೈತರ ಸಮುದಾಯಗಳನ್ನು ರಚಿಸಿ ಅವರ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ದೊರೆಯುವಂತೆ ಮಾಡುವುದು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.