ಅಹಿಂದ ಕಲ್ಯಾಣಕ್ಕೆ ಭರಪೂರ ನೆರವು


Team Udayavani, Mar 16, 2017, 3:30 AM IST

Ahinda-15-3.jpg

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಹಿಂದ ಮಂತ್ರ ಈ ಬಜೆಟ್‌ನಲ್ಲಿಯೂ ಎದ್ದು ಕಾಣುತ್ತಿದ್ದು, ಅಹಿಂದ ವರ್ಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣ, ಸ್ವದ್ಯೋಗ ಕೈಗೊಳ್ಳಲು ಪ್ರೋತ್ಸಾಹ ಧನ, ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಜೊತೆಗೆ ಪ್ರೋತ್ಸಾಹಧನ ಹಾಗೂ ಎಸ್ಸಿ ಎಸ್ಟಿ ಸಮುದಾಯದ 2 ಲಕ್ಷ ಬಿಪಿಎಲ್‌ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸುವುದು ಸೇರಿದಂತೆ ಅಹಿಂದ ವರ್ಗದ ಸುಸ್ಥಿರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಲಕ್ಷ ಪರಿಶಿಷ್ಟ ಜಾತಿ ನಿರುದ್ಯೋಗಿಗಳಿಗೆ ತರಬೇತಿ: 2017-18ನೇ ಸಾಲಿನಲ್ಲಿ ಪ್ರಮುಖವಾಗಿ ಪ್ರತಿ ಜಿಲ್ಲೆಗೊಂದರಂತೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾರಂಭಿಸಿ, ಪಿಯುಸಿವರೆಗೂ ವಿಸ್ತರಿಸಲು ತೀರ್ಮಾನಿಸಲಾಗಿದೆ. ಒಂದು ಲಕ್ಷ ಎಸ್ಸಿ ಎಸ್ಟಿ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡುವುದು. ಎಸ್ಸಿ ಎಸ್ಟಿ ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಬುಕ್‌ ಬ್ಯಾಂಕ್‌ ಸ್ಥಾಪನೆ. ಭೂ ರಹಿತ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು 10 ಲಕ್ಷದಿಂದ 15 ಲಕ್ಷ ರೂಪಾಯಿಗೆ ನೆರವು ಹೆಚ್ಚಿಸುವುದು. ಸ್ವಉದ್ಯೋಗ ಕೈಗೊಳ್ಳಲು ಶೇ.50ರ ಸಬ್ಸಿಡಿ ದರದಲ್ಲಿ 2000 ಯುವಕರಿಗೆ 5 ಲಕ್ಷದವರೆಗೆ ಸಹಾಯಧನ ನೀಡುವುದು. 5 ಸಾವಿರ ಯುವಕರಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ಶೇ.50ರಷ್ಟು ಸಹಾಯಧನ ನೀಡುವ ಯೋಜನೆಯಡಿ 3 ಲಕ್ಷ ರೂ.ವರೆಗೆ ನೆರವು ನೀಡಲು ನಿರ್ಧರಿಸಲಾಗಿದೆ.

ಆದಿವಾಸಿಗಳ ಸಮುದಾಯ ಭವನಕ್ಕೆ15 ಕೋಟಿ ರೂ.: ಕಾನೂನು ಪದವೀಧರರ ಮಾಸಿಕ ಭತ್ಯೆಯನ್ನು 2 ಸಾವಿರ ರೂ.ನಿಂದ 5 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. ಆದಿವಾಸಿಗಳು ಹೆಚ್ಚಿರುವ ಪ್ರದೇಶಗಳಲ್ಲಿ ಸಮುದಾಯಭವನ ನಿರ್ಮಾಣಕ್ಕೆ 15 ಕೋಟಿ ರೂ. ಮೀಸಲಿಡಲಾಗಿದೆ. ಬಿಪಿಎಲ್‌ ಕುಟುಂಬಗಳ ಗೃಹ ನಿರ್ಮಾಣಕ್ಕೆ ನಿಗದಿಪಡಿಸಿದ ಮೊತ್ತವನ್ನು ಗ್ರಾಮೀಣ ಪ್ರದೇಶದಲ್ಲಿ 1.5 ಲಕ್ಷದಿಂದ 1.75 ಲಕ್ಷ ರೂ. ಹಾಗೂ ನಗರ ಪ್ರದೇಶದಲ್ಲಿ 1.8 ಲಕ್ಷದಿಂದ 2 ಲಕ್ಷ ರೂ.ಗಳಿಗೆ ಏರಿಸಲಾಗಿದೆ.

ವಿಧವೆಯರ ಪುನರ್ವಿವಾಹಕ್ಕೆ 3 ಲಕ್ಷ ರೂ.: ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ವಿಧವೆಯರು ಮರುಮದುವೆಯಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ, ಅಂತರ್ಜಾತಿ ವಿವಾಹವಾದರೆ, 2 ಲಕ್ಷ ರೂ. ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಲಾಗಿದೆ. ಜತೆಗೆ ಆ ವರ್ಗದ ಉದ್ಯಮಿಗಳಿಗೆ ಸಾಲಕ್ಕೆ ಖಾತರಿ ನೀಡಲು 100 ಕೋಟಿ ರೂ. ಮೂಲ ನಿಧಿ ಸ್ಥಾಪನೆ ಸೇರಿದಂತೆ 2017-18 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 6,363 ಕೋಟಿ ರೂ. ಮೀಸಲಿಡಲಾಗಿದೆ. 

ಹಿಂದುಳಿದ ಜಾತಿ ವಿದ್ಯಾರ್ಥಿಗಳಿಗೆ 2 ಲಕ್ಷ ರೂ.: ‘ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ಹಾಸ್ಟೆಲ್‌ಗ‌ಳಲ್ಲಿ ಡಿಜಿಟಲ್‌ ಗ್ರಂಥಾಲಯ, ಐಐಎಂ, ಐಐಟಿ ಹಾಗೂ ಐಐಎಸ್‌ಸಿಯಂತಹ  ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಒಂದು ಬಾರಿ 2 ಲಕ್ಷ ರೂ. ಸಹಾಯಧನ ನೀಡಲು  ಸರ್ಕಾರ ತೀರ್ಮಾನಿಸಿದೆ. ವಿದೇಶದಲ್ಲಿ ವ್ಯಾಸಂಗ ಮಾಡುವ 100 ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ ಮಂಜೂರು ಮಾಡಲು ಘೋಷಿಸಲಾಗಿದೆ. ಈ ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ 3,154 ಕೋಟಿ ರೂ. ಮೀಸಲಿಡಲಾಗಿದೆ.

– ಭೂರಹಿತ ಕೃಷಿಕಾರ್ಮಿಕರಿಗೆ  ಜಮೀನು ಖರೀದಿಗೆ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ನೆರವು ಹೆಚ್ಚಳ

– ಆದಿವಾಸಿಗಳ ಸಮುದಾಯ ಭವನಕ್ಕೆ 15 ಕೋಟಿ ರೂ. ನೆರವು, ವಿಧವೆಯರ ಪುನರ್ವಿವಾಹಕ್ಕೂ ಪ್ರೋತ್ಸಾಹ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.