ರಾಜಧಾನಿಯಲ್ಲಿ ದಿನಪೂರ್ತಿ ಜಿಟಿಜಿಟಿ ಮಳೆ

ಏರ್ಪೋರ್ಟ್‌ ಸುತ್ತಮುತ್ತ 131.1 ಮಿ.ಮೀ. ಮಳೆ | ಅಂಡರ್‌ಪಾಸ್‌ಗಳಲ್ಲಿ ನೀರು: ಸವಾರರ ಪರದಾಟ

Team Udayavani, Oct 13, 2021, 1:02 PM IST

ರಾಜಧಾನಿಯಲ್ಲಿ ದಿನಪೂರ್ತಿ ಜಿಟಿಜಿಟಿ ಮಳೆ

ಬೆಂಗಳೂರು: ರಾಜಧಾನಿಯಲ್ಲಿ ಸತತ ನಾಲ್ಕನೇ ದಿನವೂ ದಿನಪೂರ್ತಿ ಜಿಟಿ ಜಿಟಿ ಮಳೆ ಸುರಿದಿದ್ದು, ಕೆಲವೆಡೆ ಮಾತ್ರ ಜೋರು ಮಳೆಯಾಗಿದೆ. ಈ ಹಿನ್ನೆಲೆ ಮೂರು ಕಡೆ ಮರ ಬಿದ್ದಿದ್ದು, ಹಲವು ರಸ್ತೆಗಳಲ್ಲಿ ನೀರು ನಿಂತು ಸಾರ್ವಜನಿಕರು ಪರದಾಟ ನಡೆಸಿದರು.

ಸೋಮವಾರ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಮಳೆಯಾಗಿದೆ. ಏರ್ಪೋರ್ಟ್‌ ಸುತ್ತಮುತ್ತ 131.1 ಮಿ.ಮೀ. ಮಳೆಯಾಗಿದೆ. ಆದರೆ, ನಗರದಲ್ಲಿ ಜಿಟಿ ಜಿಟಿ ಮಳೆ ರಾತ್ರಿ ಪೂರ್ತಿ ಸುರಿದಿತ್ತು. ಅಲ್ಲದೆ, ಬೆಳಗ್ಗೆ ಒಂದಿಷ್ಟು ಬಿಡುವು ನೀಡಿತಾದರೂ, ಮಧ್ಯಾಹ್ನ ಒಂದು ಗಂಟೆ ಬಳಿಕ ಮತ್ತೆ ಜೋರು ಮಳೆಯಾಗಿದೆ. ಅದರಲ್ಲೂ, ನಗರದ ಕೇಂದ್ರ ಭಾಗಗಳಾದ ವಿಧಾನಸೌಧ, ಕೆ.ಆರ್‌.ವೃತ್ತ , ಯಶವಂತಪುರ, ಮಲ್ಲೇಶ್ವರ, ಸದಾಶಿವನಗರ, ಮತ್ತಿಕೆರೆ, ಹೆಬ್ಟಾಳ, ಯಲಹಂಕ ಸೇರಿದಂತೆ ಬೆಂಗಳೂರಿನ ಹಲವೆಡೆ ಮಧ್ಯಾಹ್ನ ಮಳೆ ಭಾರಿ ಮಳೆಯಾಗಿತ್ತು.

ಇದನ್ನೂ ಓದಿ;- ನವರಾತ್ರಿ ಪೂಜೆ; ನೆಲ್ಲೂರು ದೇವಿಗೆ 5 ಕೋಟಿ ರೂ. ಅಲಂಕಾರ

ಮಧ್ಯಾಹ್ನ 2 ಗಂಟೆಗೆ ಸುರಿನ ಜೋರು ಮಳೆಯಿಂದ ಮೆಜೆಸ್ಟಿಕ್‌, ಶಾಂತಿನಗರ, ಜಯನಗರ, ಬನಶಂಕರಿ, ಸಂಜ ಯನಗರ, ರಾಜರಾಜೇಶ್ವರಿನಗರ, ಮಲ್ಲೇಶ್ವರ, ಚಾಮರಾಜಪೇಟೆ, ಕೆ.ಆರ್‌.ಮಾರುಕಟ್ಟೆ, ಜಯನಗರ, ಬಸವನಗುಡಿ, ಎಂ.ಜಿ.ರಸ್ತೆ, ಶಿವಾಜಿನಗರ, ನಾಗರಬಾವಿ, ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಕೋರಮಂಗಲ ಸೇರಿದಂತೆ ಹಲವೆಡೆ ಮುಖ್ಯರಸ್ತೆಗಳೆಲ್ಲವೂ ನದಿಗಳಾಗಿ ಮಾರ್ಪಟ್ಟಿದ್ದವು. ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಕೆಲ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.‌

ಅಂಡರ್‌ಪಾಸ್‌ಗಳಲ್ಲಿ ನೀರು: ಮಳೆಯಿಂದಾಗಿ ಸಹಕಾರನಗರ – ಕೊಡಿಗೆಹಳ್ಳಿ ಅಂಡರ್‌ಪಾಸ್‌ನಲ್ಲಿ 4 ಅಡಿಯಷ್ಟು ನೀರುನಿಂತು ಸ್ವಿಮ್ಮಿಂಗ್‌ ಪೂಲ್‌ ಆಗಿತ್ತು. ನೀರು ತೆಗೆಯುವ ಸಾಹಸಕ್ಕೆ ಕೈ ಹಾಕಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ನಿರ್ಮಾಣ ಮಾಡಿದಾಗಿನಿಂದಲೂ ಇದೇ ಸಮಸ್ಯೆ ಎದುರಾಗಿದೆ. ಶಾಸಕರು, ಸಂಸದರು, ಬಿಬಿಎಂಪಿ ಅಧಿಕಾರಿಗಳಂತು ಇಲ್ಲಿಗೆ ಬರೋದೆ ಇಲ್ಲ ಅಂತ ಸ್ಥಳೀಯರು ಆರೋಪಿಸುತ್ತಿದ್ದಾರೆ.

ನಾಲ್ಕು ಕಡೆ ಮರ ಬಿದ್ದಿದೆ: ಆರ್‌.ಆರ್‌.ನಗರ ಐಡಿಯಲ್‌ ಹೋಂ ಬಳಿ ಒಂದು , ಮಹಾಲಕ್ಷ್ಮೀ ಲೇಔಟ್‌ನಲ್ಲಿ ಎರಡು, ಗೋವರ್ಧನ ಟಾಕೀಸ್‌ ಬಳಿ ಎರಡು ಮರ ಸೇರಿ ಒಟ್ಟು ನಾಲ್ಕು ಕಡೆ ಮರ ಬಿದ್ದಿವೆ. ಮರಗಳು ಬುಡಸಮೇತ ನೆಲಕ್ಕುರುಳಿದ್ದರಿಂದ ಕೆಲ ಕಾಲ ರಸ್ತೆಗಳಲ್ಲಿ ಸಂಚಾರಕ್ಕೆ ಅಡಚಣೆಯಾಯಿತು.

ಬಿಬಿಎಂಪಿ ಅರಣ್ಯ ವಿಭಾಗದ ಸಿಬ್ಬಂದಿ ಬಿದ್ದಿದ್ದ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಲಾಗಿದೆ ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು. ಇನ್ನು ಮಳೆಯಿಂದ ಯಾವುದೇ ಮನೆಗಳಿಗೆ ನೀರು ನುಗ್ಗಿರುವ ಕುರಿತು ದೂರು ಬಂದಿಲ್ಲ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ತಿಳಿಸಿದ್ದಾರೆ. 24 ಮಿ.ಮೀ ಮಳೆ;

 ಸಂಜೆ ಬಳಿಕ ತುಂತುರು: ಸಂಜೆ ನಂತರ ಅಲ್ಲಲ್ಲಿ ತುಂತುರು ರೂಪದಲ್ಲಿ ಸುರಿಯಿತು. ಇಡೀ ದಿನ ಬಿಸಿಲಿನ ದರ್ಶನವಾಗದೇ, ಎÇÉೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕೆಲವು ಕಡೆಗಳಲ್ಲಿ ಆಗಾಗ ಜಿಟಿ ಜಿಟಿ ಮಳೆ ಬಂದರೆ, ಹಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಿದೆ. ತಾಪಮಾನದಲ್ಲಿ ಇಳಿಕೆಯಾಗಿದ್ದರಿಂದ ನಗರಾದ್ಯಂತ ತಂಪು ಗಾಳಿ ಬೀಸುವ ಪ್ರಮಾಣ ಹೆಚ್ಚಾಗಿತ್ತು. ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌, ಗರಿಷ್ಠ 25 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ, ಒಟ್ಟಾರೆ ನಗರದಲ್ಲಿ 24 ಮಿ.ಮೀ ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.