ರಾಜಧಾನಿಯಲ್ಲಿ ದಿನಪೂರ್ತಿ ಜಿಟಿಜಿಟಿ ಮಳೆ
ಏರ್ಪೋರ್ಟ್ ಸುತ್ತಮುತ್ತ 131.1 ಮಿ.ಮೀ. ಮಳೆ | ಅಂಡರ್ಪಾಸ್ಗಳಲ್ಲಿ ನೀರು: ಸವಾರರ ಪರದಾಟ
Team Udayavani, Oct 13, 2021, 1:02 PM IST
ಬೆಂಗಳೂರು: ರಾಜಧಾನಿಯಲ್ಲಿ ಸತತ ನಾಲ್ಕನೇ ದಿನವೂ ದಿನಪೂರ್ತಿ ಜಿಟಿ ಜಿಟಿ ಮಳೆ ಸುರಿದಿದ್ದು, ಕೆಲವೆಡೆ ಮಾತ್ರ ಜೋರು ಮಳೆಯಾಗಿದೆ. ಈ ಹಿನ್ನೆಲೆ ಮೂರು ಕಡೆ ಮರ ಬಿದ್ದಿದ್ದು, ಹಲವು ರಸ್ತೆಗಳಲ್ಲಿ ನೀರು ನಿಂತು ಸಾರ್ವಜನಿಕರು ಪರದಾಟ ನಡೆಸಿದರು.
ಸೋಮವಾರ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಮಳೆಯಾಗಿದೆ. ಏರ್ಪೋರ್ಟ್ ಸುತ್ತಮುತ್ತ 131.1 ಮಿ.ಮೀ. ಮಳೆಯಾಗಿದೆ. ಆದರೆ, ನಗರದಲ್ಲಿ ಜಿಟಿ ಜಿಟಿ ಮಳೆ ರಾತ್ರಿ ಪೂರ್ತಿ ಸುರಿದಿತ್ತು. ಅಲ್ಲದೆ, ಬೆಳಗ್ಗೆ ಒಂದಿಷ್ಟು ಬಿಡುವು ನೀಡಿತಾದರೂ, ಮಧ್ಯಾಹ್ನ ಒಂದು ಗಂಟೆ ಬಳಿಕ ಮತ್ತೆ ಜೋರು ಮಳೆಯಾಗಿದೆ. ಅದರಲ್ಲೂ, ನಗರದ ಕೇಂದ್ರ ಭಾಗಗಳಾದ ವಿಧಾನಸೌಧ, ಕೆ.ಆರ್.ವೃತ್ತ , ಯಶವಂತಪುರ, ಮಲ್ಲೇಶ್ವರ, ಸದಾಶಿವನಗರ, ಮತ್ತಿಕೆರೆ, ಹೆಬ್ಟಾಳ, ಯಲಹಂಕ ಸೇರಿದಂತೆ ಬೆಂಗಳೂರಿನ ಹಲವೆಡೆ ಮಧ್ಯಾಹ್ನ ಮಳೆ ಭಾರಿ ಮಳೆಯಾಗಿತ್ತು.
ಇದನ್ನೂ ಓದಿ;- ನವರಾತ್ರಿ ಪೂಜೆ; ನೆಲ್ಲೂರು ದೇವಿಗೆ 5 ಕೋಟಿ ರೂ. ಅಲಂಕಾರ
ಮಧ್ಯಾಹ್ನ 2 ಗಂಟೆಗೆ ಸುರಿನ ಜೋರು ಮಳೆಯಿಂದ ಮೆಜೆಸ್ಟಿಕ್, ಶಾಂತಿನಗರ, ಜಯನಗರ, ಬನಶಂಕರಿ, ಸಂಜ ಯನಗರ, ರಾಜರಾಜೇಶ್ವರಿನಗರ, ಮಲ್ಲೇಶ್ವರ, ಚಾಮರಾಜಪೇಟೆ, ಕೆ.ಆರ್.ಮಾರುಕಟ್ಟೆ, ಜಯನಗರ, ಬಸವನಗುಡಿ, ಎಂ.ಜಿ.ರಸ್ತೆ, ಶಿವಾಜಿನಗರ, ನಾಗರಬಾವಿ, ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಕೋರಮಂಗಲ ಸೇರಿದಂತೆ ಹಲವೆಡೆ ಮುಖ್ಯರಸ್ತೆಗಳೆಲ್ಲವೂ ನದಿಗಳಾಗಿ ಮಾರ್ಪಟ್ಟಿದ್ದವು. ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಕೆಲ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.
ಅಂಡರ್ಪಾಸ್ಗಳಲ್ಲಿ ನೀರು: ಮಳೆಯಿಂದಾಗಿ ಸಹಕಾರನಗರ – ಕೊಡಿಗೆಹಳ್ಳಿ ಅಂಡರ್ಪಾಸ್ನಲ್ಲಿ 4 ಅಡಿಯಷ್ಟು ನೀರುನಿಂತು ಸ್ವಿಮ್ಮಿಂಗ್ ಪೂಲ್ ಆಗಿತ್ತು. ನೀರು ತೆಗೆಯುವ ಸಾಹಸಕ್ಕೆ ಕೈ ಹಾಕಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ನಿರ್ಮಾಣ ಮಾಡಿದಾಗಿನಿಂದಲೂ ಇದೇ ಸಮಸ್ಯೆ ಎದುರಾಗಿದೆ. ಶಾಸಕರು, ಸಂಸದರು, ಬಿಬಿಎಂಪಿ ಅಧಿಕಾರಿಗಳಂತು ಇಲ್ಲಿಗೆ ಬರೋದೆ ಇಲ್ಲ ಅಂತ ಸ್ಥಳೀಯರು ಆರೋಪಿಸುತ್ತಿದ್ದಾರೆ.
ನಾಲ್ಕು ಕಡೆ ಮರ ಬಿದ್ದಿದೆ: ಆರ್.ಆರ್.ನಗರ ಐಡಿಯಲ್ ಹೋಂ ಬಳಿ ಒಂದು , ಮಹಾಲಕ್ಷ್ಮೀ ಲೇಔಟ್ನಲ್ಲಿ ಎರಡು, ಗೋವರ್ಧನ ಟಾಕೀಸ್ ಬಳಿ ಎರಡು ಮರ ಸೇರಿ ಒಟ್ಟು ನಾಲ್ಕು ಕಡೆ ಮರ ಬಿದ್ದಿವೆ. ಮರಗಳು ಬುಡಸಮೇತ ನೆಲಕ್ಕುರುಳಿದ್ದರಿಂದ ಕೆಲ ಕಾಲ ರಸ್ತೆಗಳಲ್ಲಿ ಸಂಚಾರಕ್ಕೆ ಅಡಚಣೆಯಾಯಿತು.
ಬಿಬಿಎಂಪಿ ಅರಣ್ಯ ವಿಭಾಗದ ಸಿಬ್ಬಂದಿ ಬಿದ್ದಿದ್ದ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಲಾಗಿದೆ ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು. ಇನ್ನು ಮಳೆಯಿಂದ ಯಾವುದೇ ಮನೆಗಳಿಗೆ ನೀರು ನುಗ್ಗಿರುವ ಕುರಿತು ದೂರು ಬಂದಿಲ್ಲ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ತಿಳಿಸಿದ್ದಾರೆ. 24 ಮಿ.ಮೀ ಮಳೆ;
ಸಂಜೆ ಬಳಿಕ ತುಂತುರು: ಸಂಜೆ ನಂತರ ಅಲ್ಲಲ್ಲಿ ತುಂತುರು ರೂಪದಲ್ಲಿ ಸುರಿಯಿತು. ಇಡೀ ದಿನ ಬಿಸಿಲಿನ ದರ್ಶನವಾಗದೇ, ಎÇÉೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕೆಲವು ಕಡೆಗಳಲ್ಲಿ ಆಗಾಗ ಜಿಟಿ ಜಿಟಿ ಮಳೆ ಬಂದರೆ, ಹಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಿದೆ. ತಾಪಮಾನದಲ್ಲಿ ಇಳಿಕೆಯಾಗಿದ್ದರಿಂದ ನಗರಾದ್ಯಂತ ತಂಪು ಗಾಳಿ ಬೀಸುವ ಪ್ರಮಾಣ ಹೆಚ್ಚಾಗಿತ್ತು. ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಗರಿಷ್ಠ 25 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, ಒಟ್ಟಾರೆ ನಗರದಲ್ಲಿ 24 ಮಿ.ಮೀ ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ