ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್


Team Udayavani, May 5, 2024, 12:17 PM IST

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬೆಂಗಳೂರು: ಪ್ರತಿಷ್ಠಿತ ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ “ಬೆನಿಫಿಷಿಯರಿ ಕ್ಯಾಪಿಟಲ್‌ ಕಾಂಟ್ರಿಬ್ಯೂಷನ್‌’ (ಬಿಸಿಸಿ) ಶುಲ್ಕ ಹಾಗೂ “ಗ್ರೇಟರ್‌ ಬೆಂಗಳೂರು ಶುಲ್ಕ’ ವಾಪಸ್‌ ನೀಡುವ ವಿಚಾರದಲ್ಲಿ ಬೆಂಗಳೂರು ಜಲಮಂಡಳಿಗೆ ಹೈಕೋರ್ಟ್‌ನಲ್ಲಿ ರಿಲೀಫ್ ಸಿಕ್ಕಿದೆ.

ಶೋಭಾ ಡೆವಲಪರ್‌ ಸೇರಿದಂತೆ ಹಲವು ಪ್ರತಿಷ್ಠಿತ ಬಿಲ್ಡರ್‌ಗಳಿಂದ ಸಂಗ್ರಹಿಸಲಾಗಿದ್ದ ಬೆನಿಫಿಷಿಯರಿ ಕ್ಯಾಪಿಟಲ್‌ ಕಾಂಟ್ರಿಬ್ಯುಷನ್‌ (ಬಿಸಿಸಿ) ಶುಲ್ಕ ಮತ್ತು ಗ್ರೇಟರ್‌ ಬೆಂಗಳೂರು ಶುಲ್ಕವನ್ನು ವಾಪಸ್‌ ನೀಡುವಂತೆ ಬೆಂಗಳೂರು ಜಲಮಂಡಳಿಗೆ ನಿರ್ದೇಶನ ನೀಡಿ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ನೀಡಿದೆ.

ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಬೆಂಗಳೂರು ಜಲಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾ.ಬಿ.ಎಂ.ಶ್ಯಾಮ್‌ ಪ್ರಸಾದ್‌ ಮತ್ತು ನ್ಯಾ.ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠವು, ಏಕಸದಸ್ಯಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಿತು. ಅಲ್ಲದೆ, ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.

ವಿಭಾಗೀಯ ನ್ಯಾಯಪೀಠದ ಈ ಆದೇಶದಿಂದ ಸದ್ಯ ಜಲಮಂಡಳಿ ಲಕ್ಷಾಂತರ ರೂಪಾಯಿ ಶುಲ್ಕ ಮರುಪಾವತಿ ಮಾಡಬೇಕಾಗಿಲ್ಲ, ಇದರಿಂದ ಜಲಮಂಡಳಿಗೆ ದೊಡ್ಡ ರಿಲೀಫ್‌ ಸಿಕ್ಕಿದಂತಾಗಿದೆ. ಇಲ್ಲದಿದ್ದರೆ ಮಂಡಳಿ ಕೋಟ್ಯಂತರ ರೂ. ಹಣವನ್ನು ಮರುಪಾವತಿ ಮಾಡಬೇಕಾದ ಸ್ಥಿತಿ ಎದುರಾಗಿತ್ತು.

ಏಪ್ರಿಲ್‌ನ‌ಲ್ಲಿ ರಿಯಲ್‌ ಎಸ್ಟೇಟ್‌ ಸಂಸ್ಥೆ ಶೋಭಾ ಲಿಮಿಟೆಡ್‌ ಮತ್ತು ಬ್ರಿಗೇಡ್‌ ಎಂಟರ್‌ಪ್ರೈಸಸ್‌ ಲಿಮಿಟೆಡ್‌ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ್ದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಬೆಂಗಳೂರು ಒಳಚರಂಡಿ ಹಾಗೂ ನೀರು ಸರಬರಾಜು ಮಂಡಳಿ ಕೆಲವು ವರ್ಷಗಳಿಂದ ವಸತಿ ಕಟ್ಟಡಗಳಿಂದ ಅವುಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಸಂಗ್ರಹಿಸುತ್ತಿರುವ “ಗ್ರೇಟರ್‌ ಬೆಂಗಳೂರು ನೀರು ಪೂರೈಕೆ ಮತ್ತು ಒಳಚರಂಡಿ ಯೋಜನಾ ಶುಲ್ಕ ಮತ್ತು ಬೆನಿಫಿಶಿಯರಿ ಕ್ಯಾಪಿಟಲ್‌ ಕಾಂಟ್ರಿಬ್ಯೂಷನ್‌ ಶುಲ್ಕ  ಕಾನೂನುಬಾಹಿರ ಎಂದು  ಮಹತ್ವದ ಆದೇಶ ನೀಡಿತ್ತು.

ಆದರೆ, ಜಲಮಂಡಳಿ ಹಾಲಿ ಬಹುಮಹಡಿಗಳಿಂದ ಸಂಗ್ರಹ ಮಾಡುತ್ತಿರುವ ಮುಂಗಡ ಪ್ರೊರೇಟಾ ಶುಲ್ಕ ಮತ್ತು ಕಟ್ಟಡಗಳ ನಿರ್ಮಾಣಕ್ಕಾಗಿ ಸಂಸ್ಕರಿತ ನೀರು ಶುಲ್ಕ ಸಂಗ್ರಹ ಕ್ರ ಮ ವನ್ನು ನ್ಯಾಯಾಲಯ ಎತ್ತಿಹಿಡಿದಿತ್ತು. ಆದರೆ, ಅರ್ಜಿದಾರರಿಂದ ಸಂಗ್ರಹಿಸಿರುವ ಬಿಸಿಸಿ ಹಾಗೂ ಗ್ರೇಟರ್‌ ಬೆಂಗಳೂರು ನೀರು ಪೂರೈಕೆ ಮತ್ತು ಒಳಚರಂಡಿ ಯೋಜನಾ ಶುಲ್ಕವನ್ನು 12 ವಾರಗಳಲ್ಲಿ ವಾಪಸ್‌ ನೀಡುವಂತೆ ನ್ಯಾಯಾಲಯ ನಿರ್ದೇಶನ ನೀಡಿತ್ತು.

ಜತೆಗೆ ರಾಜ್ಯ ಸರ್ಕಾರ ಅಥವಾ ಬೆಂಗಳೂರು ಜಲಮಂಡಳಿ, ಈ ಎರಡೂ ಶುಲ್ಕಗಳನ್ನು ವಿಧಿಸಲು ಬೆಂಗಳೂರು ನೀರು ಮತ್ತು ಒಳಚರಂಡಿ ಕಾಯ್ದೆ-1964 ಮತ್ತು ಬೆಂಗಳೂರು ನೀರು ಪೂರೈಕೆ ರೆಗ್ಯುಲೇಷನ್ಸ್‌-1965ರಡಿ ಸೂಕ್ತ ತಿದ್ದುಪಡಿ ಮಾಡಿ ಆನಂತರ ಮುಂದಿನ ಕ್ರಮ ಜರುಗಿಸಬಹುದು ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿತ್ತು.

ಟಾಪ್ ನ್ಯೂಸ್

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

8

Bengaluru Road: ಮಳೆ ನಿಂತ ನಂತರ ರಸ್ತೆ ಗುಂಡಿ ದುರಸ್ತಿ  ಶುರು 

7

ಹೊಯ್ಸಳ ಪೊಲೀಸರನ್ನು ಕಳ್ಳ ಕಳ್ಳ ಎಂದು ಬೆನ್ನಟ್ಟಿದ ಸಾರ್ವಜನಿಕರು!

6

Bengaluru: 13 ವರ್ಷದ ಅಪ್ರಾಪ್ತ ಸಹೋದರನಿಂದಲೇ 3 ತಿಂಗಳ ಗರ್ಭಿಣಿಯಾದ ತಂಗಿ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.