ಧರಂ ಸಿಂಗ್ ಸಂಬಂಧಿ ಕೊಲೆ ಪ್ರಕರಣ: ಮಲತಾಯಿಯಿಂದಲೇ ಸುಪಾರಿ!
Team Udayavani, Feb 4, 2021, 11:05 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ಧರಂ ಸಿಂಗ್ ಅವರ ದೂರದ ಸಂಬಂಧಿ ಸಿದ್ಧಾರ್ಥ್ ದೇವೇಂದರ್ ಸಿಂಗ್ (28) ಅವರ ಹತ್ಯೆಗೆ ಸುಪಾರಿ ಕೊಟ್ಟಿದ್ದ ಆತನ ಮಲತಾಯಿಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆಸ್ತಿ ವಿಚಾರವಾಗಿಯೇ ಹತ್ಯೆ ನಡೆದಿದೆ ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಹೆಬ್ಟಾಳ ನಿವಾಸಿ ಇಂದು ಚೌವ್ಹಾಣ್ಸಿಂಗ್ (45) ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿ ಯನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಾಥಮಿಕ ವಿಚಾರಣೆಯಲ್ಲಿ ಆಸ್ತಿಗಾಗಿ ಸುಪಾರಿ ಕೊಟ್ಟಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು.
ಸಿದ್ಧಾರ್ಥ್ ದೇವೇಂದರ್ ಸಿಂಗ್ ತಂದೆ ದೇವೇಂದರ್ ಸಿಂಗ್ಗೆ ಇಬ್ಬರು ಪತ್ನಿಯರಿದ್ದು, ಸಿದ್ಧಾರ್ಥ್ ಮೊದಲ ಪತ್ನಿಯ ಪುತ್ರನಾಗಿದ್ದಾನೆ. ಇಷ್ಟು ವರ್ಷ ಅಮೆರಿಕಾದಲ್ಲಿ ವಾಸವಾಗಿದ್ದ ಸಿದ್ಧಾರ್ಥ್ ಇತ್ತೀಚೆಗಷ್ಟೇ ಬೆಂಗಳೂರಿಗೆ ಬಂದು ಪ್ರತ್ಯೇಕವಾಗಿ ಅಮೃತಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು.
ಇದನ್ನೂ ಓದಿ:ಮರಕ್ಕೆ ಢಿಕ್ಕಿ ಹೊಡೆದ ಕಾರು: ಮಹಿಳೆ ಸಾವು, ಮೂವರಿಗೆ ಗಂಭೀರ ಗಾಯ
ಈ ಮಧ್ಯೆ ಹೆಬ್ಟಾಳದ ಅಪಾರ್ಟ್ಮೆಂಟ್ ವೊಂದರಲ್ಲಿ ವಾಸವಾಗಿದ್ದ ಇಂದು ಚೌವ್ಹಾಣ್ಗೆ ಇಬ್ಬರು ಮಕ್ಕಳಿದ್ದಾರೆ. ಆಸ್ತಿ ವಿಚಾರವಾಗಿ ಪತಿ ದೇವೇಂದರ್ ಮತ್ತು ಈಕೆಯ ನಡುವೆ ಪದೇ ಪದೆ ಜಗಳ ನಡೆಯುತ್ತಿತ್ತು.
ಆಸ್ತಿಯನ್ನು ತನಗೆ ಹಾಗೂ ತನ್ನ ಮಕ್ಕಳಿಗೆ ಹಸ್ತಾಂತರಿಸುವಂತೆ ಪತಿಗೆ ಪೀಡಿಸುತ್ತಿದ್ದಳು. ಈ ಮಧ್ಯೆ ಸಿದ್ಧಾರ್ಥ್ ಬಳಿಯೂ ಆಸ್ತಿ ವಿಚಾರವಾಗಿ ಆರೋಪಿ ಜತೆ ಜಗಳ ಮಾಡಿಕೊಂಡಿದ್ದಳು. ಹೀಗಾಗಿ ಸಿದ್ಧಾರ್ಥ್ ಸಿಂಗ್ ಅಮೆರಿಕಾ ದಲ್ಲಿ ವಾಸವಾಗಿದ್ದ. ಇತ್ತೀಚೆಗಷ್ಟೇ ಬೆಂಗಳೂರಿಗೆ ಬಂದು ಅಮೃತಹಳ್ಳಿಯ ಅಪಾರ್ಟ್ ಮೆಂಟ್ನಲ್ಲಿ ಒಬ್ಬನೇ ವಾಸವಾಗಿದ್ದಾನೆ.
ಇದನ್ನೂ ಓದಿ: ಪ್ರೇಯಸಿಯ ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ವ್ಯಕ್ತಿ
ಅದರಿಂದ ಆಕ್ರೋಶಗೊಂಡಿದ್ದ ಇಂದು, ತನ್ನ ಪರಿಚಯಸ್ಥ ವಿನೋದ್ ಜತೆ ಸೇರಿ ಸಿದ್ಧಾರ್ಥ್ ಹತ್ಯೆಗೆ ಸಂಚು ರೂಪಿಸಿದ್ದಳು. ಅದೇ ವೇಳೆ ಕೆಲಸ ಇಲ್ಲದೇ ಸುಮ್ಮನಿದ್ದ ಶ್ಯಾಮ್ ಸುಂದರ್ ರೆಡ್ಡಿಗೂ ಹಣದ ಆಮಿಷವೊಡ್ಡಿ ಹತ್ಯೆಗೆ ಸುಪಾರಿ ಕೊಡಲಾಗಿತ್ತು. ಸುಮಾರು 20-30 ಲಕ್ಷ ರೂ. ಸುಪಾರಿ ಕೊಟ್ಟಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣ ಏನು?
ಸಿದ್ಧಾರ್ಥ್ ಸ್ವಂತ ಉದ್ಯಮ ನಡೆಸುತ್ತಿದ್ದು, ಅಮೃತಹಳ್ಳಿಯ ದಾಸರಹಳ್ಳಿ ಯಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಒಬ್ಬರೆ ವಾಸವಾಗಿದ್ದರು. ಜ.19ರಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ತನ್ನ ತಂದೆಗೆ ವಾಟ್ಸ್ ಆ್ಯಪ್ ಮೂಲಕ “ಸ್ನೇಹಿತರನ್ನು ಭೇಟಿಯಾಗಲು ಅಮೆರಿಕಾಕ್ಕೆ ಹೋಗುತ್ತಿರುವುದಾಗಿ’ ತಿಳಿಸಿದ್ದರು. ಆದರೆ, ಅಮೆರಿಕಾಕ್ಕೂ ಹೋಗದೆ, ವಾಪಸ್ ಮನೆಗೂ ಬಂದಿಲ್ಲ. ಅದರಿಂದ ಅನುಮಾನಗೊಂಡು ಆತನಿಗೆ ಕರೆ ಮಾಡಿದಾಗ ಫೋನ್ ಸ್ವಿಚ್ಡ್ ಆಫ್ ಆಗಿತ್ತು. ಹೀಗಾಗಿ ಆತ ನಾಪತ್ತೆಯಾಗಿರುವುದಾಗಿ ದೇವೇಂದರ್ ಅಮೃತ್ಹಳ್ಳಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ