ಷೇರು ಆಮಿಷ: ನೂರಾರು ಕೋಟಿ ವಂಚನೆ


Team Udayavani, Jan 23, 2021, 11:32 AM IST

Stock Loss: Hundreds of crores of fraud

ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭ ಮಾಡಿಕೊಡುವ ಆಮಿಷ ನೀಡಿ ನೂರಾರು ಮಂದಿ ಟೆಕ್ಕಿಗಳಿಗೆ ವಂಚಿಸಿದ್ದ ಇಬ್ಬರು ಟೆಕ್ಕಿಗಳು, ಒಬ್ಬ ಬ್ಯಾಂಕ್‌ ಸಾಲ ಕೊಡಿಸುತ್ತಿದ್ದವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೊತ್ತನೂರಿನ ಸ್ಟೀಫ‌ನ್‌ ಜೋನ್ಸ್‌ (35), ಕಲ್ಕೆರೆ ರಾಘವೇಂದ್ರ (34) ವಿದ್ಯಾರಣ್ಯಪುರದ ಮಂಜುನಾಥ್‌ ( 35) ಬಂಧಿತರು. ಆರೋಪಿಗಳಿಂದ ದುಬಾರಿ ಮೌಲ್ಯದ ಮೂರು ಐಶಾರಾಮಿ ಕಾರುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಮೂವರು ಆರೋಪಿಗಳ ಈ ಬೃಹತ್‌ ವಂಚನೆಯಲ್ಲಿ ನೂರು ಕೋಟಿ ರೂ. ಗಳಿಗೂ ಅಧಿಕ ವಂಚನೆ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಆರೋಪಿಗಳ ಬ್ಯಾಂಕ್‌ ಖಾತೆಗಳನ್ನು ಸೀಜ್‌ ಮಾಡಿಸಲಾಗಿದೆ. ಆರೋಪಿಗಳು ಹೊಂದಿರುವ ಸ್ಥಿರಾಸ್ತಿಗಳನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಷ್ಠಿತ ಖಾಸಗಿ ಕಂಪೆನಿಯೊಂದರಲ್ಲಿ ಸ್ಟೀಫ‌ನ್‌ ಹಾಗೂ ರಾಘವೇಂದ್ರ ಈ ಹಿಂದೆ ಟೆಕ್ಕಿಗಳಾಗಿ ಕೆಲಸಮಾಡುತ್ತಿದ್ದರು. ಷೇರು ಮಾರ್ಕೆಟ್‌ ವ್ಯವಹಾರದ ಬಗ್ಗೆ ಸ್ಟೀಫ‌ನ್‌ ಪರಿಣತನಾಗಿದ್ದಾನೆ. ಐದಾರು ವರ್ಷಗಳ ಹಿಂದೆ ಕೆಲಸ ಬಿಟ್ಟಿದ್ದ ಸ್ಟೀಫ‌ನ್‌ ಮೊದಲಿಗೆ ಒಬ್ಬನೇ ಷೇರು ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿ ಲಾಭ ಗಳಿಸುತ್ತಿದ್ದ.

ಹೆಚ್ಚಿನ ಲಾಭ ಗಳಿಸಿದ ಬಳಿಕ ಸ್ನೇಹಿತ ರಾಘವೇಂದ್ರನಿಗೆ ಹಣ ಮಾಡುವ ಉದ್ದೇಶ ತಿಳಿಸಿ ಆತನೂ ಕೆಲಸಕ್ಕೆ ಗುಡ್‌ಬೈ ಹೇಳಿದ. ಬಳಿಕ ಪರಿಚಯ ಸಾಫ್ಟ್ವೇರ್‌ ಉದ್ಯೋಗಿಗಳನ್ನು ಸೇರಿಸಿಕೊಂಡು ಅವರ ಹಣವನ್ನು ಹೂಡಿಕೆ ಮಾಡಿ ಬಂದ ಲಾಭದಲ್ಲಿ ಅವರಿಗೆ ಹೆಚ್ಚಿನ ಲಾಭಾಂಶ ನೀಡುವ ಯೋಜನೆ ಹಾಕಿಕೊಂಡಿದ್ದರು. ಅದರಂತೆ, ಈ ಯೋಜನೆಗೆ ಬ್ಯಾಂಕ್‌ಗಳಿಂದ ಸಾಲ ಕೊಡಿಸುವ ಪ್ರೀ ಲ್ಯಾನ್ಸರ್‌ ಮಂಜುನಾಥ್‌ನನ್ನು ಸೇರಿಸಿಕೊಂಡಿದ್ದರು.

ಅವರೇ ಸಾಲ ಕೊಡಿಸಿ ಹೂಡಿಕೆ ಮಾಡಿ ಕೊಳ್ಳುತ್ತಿದ್ದರು!:

ಪರಿಚಯಸ್ಥ ಟೆಕ್ಕಿಗಳಿಗೆ ಷೇರು ಮಾರುಕಟ್ಟೆ ಹೂಡಿಕೆ ಬಗ್ಗೆ ವಿವರಣೆ ನೀಡಿ ಶೇ.10, 15ರಷ್ಟು ಲಾಭಾಂಶ ನೀಡುವುದಾಗಿ ನಂಬಿಸುತ್ತಿದ್ದರು. ಅವರ ಬಳಿ ಕೆಲವು ಲಕ್ಷಗಟ್ಟಲೆ ಹಣ ಕಟ್ಟಿಸಿಕೊಳ್ಳುತ್ತಿದ್ದರು.

ಒಂದು ವೇಳೆ ಅವರು ಹಣವಿಲ್ಲ ಎಂದಾದರೆ ವೇತನದ ಮೇಲೆ ಬ್ಯಾಂಕ್‌ನಲ್ಲಿ ಸಾಲ ಮಾಡಿ ನಮಗೆ ನೀಡಿ. ನಾವೇ ಆ ಸಾಲಕ್ಕೆ ಇಎಂಐ ಕಟ್ಟುತ್ತೇವೆ. ಜತೆಗೆ, ಲಾಭಾಂಶ ನೀಡುತ್ತೇವೆ. ನಿಮ್ಮ ತಿಂಗಳ ವೇತನ ನಿಮಗೆ ಉಳಿಯಲಿದೆ ಎಂದು ನಂಬಿಸುತ್ತಿದ್ದರು. ಇವರ ಮಾತುಗಳಿಗೆ ಮರುಳಾಗಿ ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಕೆಲವು ಟೆಕ್ಕಿಗಳು ಮುಂದಾಗುತ್ತಿದ್ದರು. ಈ ವೇಳೆ ಮಂಜುನಾಥ, ತಾನೇ ಸಾಲ ಕೊಡಿಸುವ ಪ್ರಕ್ರಿಯೆ ನಡೆಸಿಕೊಡುತ್ತಿದ್ದ. ಒಬ್ಬ ಟೆಕ್ಕಿ ವೇತನ ಆಧಾರದಲ್ಲಿ ಆತನಿಗೆ ತಿಳಿಯದಂತೆ ಐದಾರು ಬ್ಯಾಂಕ್‌ಗಳಲ್ಲಿ ಸಾಲಕ್ಕೆ ಅರ್ಜಿ ಸಲ್ಲಿಸುತ್ತಿದ್ದರು. ಐದಾರು ಬ್ಯಾಂಕ್‌ಗಳಲ್ಲಿಯೂ ಮೂರರಿಂದ ನಾಲ್ಕು ದಿನಗಳಿಗೆ ಸಾಲ ಮಂಜೂರು ಮಾಡಿಸಿಕೊಂಡು ಸಾಲ ಮುಂಜೂರಿನ ಡಿಡಿಯನ್ನು ಪಡೆದು. ಅದನ್ನು ಸ್ಟೀಫ‌ನ್‌ ಬ್ಯಾಂಕ್‌ ಖಾತೆಗೆ ಜಮಾ ಮಾಡಿಕೊಳ್ಳುತ್ತಿದ್ದರು. ಈ ವಿಚಾರ ಟೆಕ್ಕಿಗಳಿಗೆ ಗೊತ್ತಿರಲಿಲ್ಲ.

ಇದನ್ನೂ ಓದಿ:‘ಕೃಷ್ಣ ಟಾಕೀಸ್’ ನಲ್ಲಿ ಅಜೇಯ್ ರಾವ್ ಜೊತೆ ನಾಯಕಿ ಅಪೂರ್ವ

ಆರೋಪಿಗಳು ಲಾಭಾಂಶವನ್ನು ನೀಡುತ್ತಿರಲಿಲ್ಲ. ಜತೆಗೆ, ಸಾಲ ನೀಡಿದ್ದ ಬ್ಯಾಂಕ್‌ಗಳು ಟೆಕ್ಕಿಗಳಿಗೆ ನೋಟಿಸ್‌ ನೀಡಲು ಆರಂಭವಾಯಿತು ಆಗ ಎಚ್ಚೆತ್ತುಕೊಂಡವರು. ಸ್ಟೀಫ‌ನ್‌ನನ್ನು ಪ್ರಶ್ನಿಸಿದಾಗ ಅವರು ನಾನಾ ಸಬೂಬು ಹೇಳಿದ್ದಾರೆ. ಕಡೆಗೆ ಹಣ ಕಳೆದುಕೊಂಡಿದ್ದ ಡಿ.ಪಿ.ಸತೀಶ್‌ ಎಂಬುವವರು ಚಂದ್ರಲೇಔಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣದ ತನಿಖೆ ಸಿಸಿಬಿಗೆ ವರ್ಗಾವಣೆ ಆಗಿದ್ದರಿಂದ ತನಿಖೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.