ಇಂದಿರಾ ಕ್ಯಾಂಟೀನ್ಗೆ ಕಲ್ಲು
Team Udayavani, May 14, 2018, 11:54 AM IST
ಬೆಂಗಳೂರು: ನಗರದಲ್ಲಿರುವ ಶ್ರಮಿಕರು, ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಆಹಾರ ನೀಡುವ ಉದ್ದೇಶದಿಂದ ಆರಂಭಿಸಿರುವ ಇಂದಿರಾ ಕ್ಯಾಂಟೀನ್ಗೆ ಕಿಡಿಗೇಡಿಗಳು ಕಲ್ಲು ಹೊಡೆದ ಘಟನೆ ನಗರದ ಚಂದ್ರಲೇಔಟ್ನ ಅತ್ತಿಗುಪ್ಪೆ ವಾರ್ಡ್ನಲ್ಲಿ ನಡೆದಿದೆ.
ಪ್ರತಿದಿನದಂತೆ ಭಾನುವಾರ ಮಧ್ಯಾಹ್ನದ ಆಹಾರ ವಿತರಣೆ ಸಮಯ ಮುಗಿದ ಬಳಿಕ ಸಿಬ್ಬಂದಿ ಕ್ಯಾಂಟೀನ್ಗೆ ಬೀಗ ಹಾಕಿ ಹೋಗಿದ್ದರು. ಈ ವೇಳೆ ಕಾರಿನಲ್ಲಿ ಬಂದ ಕೆಲ ಕಿಡಿಗೇಡಿಗಳು ಕ್ಯಾಂಟೀನ್ನತ್ತ ಕಲ್ಲು ಎಸೆದು ಕಿಟಕಿ ಗಾಜುಗಳನ್ನು ಪುಡಿಗಟ್ಟಿ ಪರಾರಿಯಾಗಿದ್ದಾರೆ.
ರಾತ್ರಿ ಊಟ ವಿತರಿಸಲು 7.30ರ ಸುಮಾರಿಗೆ ಸಿಬ್ಬಂದಿ ಕ್ಯಾಂಟೀನ್ಗೆ ಬಂದಾಗ ಗಾಜು ಒಡೆದಿರುವುದನ್ನು ಕಂಡು, ಕ್ಯಾಂಟೀನ್ಗೆ ಅಳವಡಿಸಿರುವ ಸಿಸಿಟಿವಿ ಪರಿಶೀಲಿಸಿದಾಗ ಕಿಡಿಗೇಡಿಗಳು ಕಲ್ಲುಹೊಡೆದಿರುವುದು ಕಂಡು ಬಂದಿದೆ. ಕೂಡಲೆ ಬಿಬಿಎಂಪಿ ಹಿರಿಯ ಅಧಿಕಾರಿಗಳಿಗೆ ಸಿಬ್ಬಂದಿ, ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ