ನಿಲ್ಲದ ಬೀದಿ ನಾಯಿಗಳ ಹಾವಳಿ


Team Udayavani, Sep 7, 2018, 12:18 PM IST

nillada.jpg

ಬೆಂಗಳೂರು: ಬೀದಿ ನಾಯಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಬಾಲಕ ಮೃತಪಟ್ಟ ಬೆನ್ನಲ್ಲೇ, ಶಾಲೆಗೆ ಹೋಗುತ್ತಿದ್ದ ಇಬ್ಬರು ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ಇತ್ತೀಚೆಗೆ ವಿಭೂತಿಪುರದಲ್ಲಿ ಪ್ರವೀಣ್‌ ಎಂಬ ಬಾಲಕನ ಮೇಲೆ ಹತ್ತಾರು ನಾಯಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ತೀವ್ರವಾಗಿ ಗಾಯಗೊಂಡ ಬಾಲಕ ಸಾವನ್ನಪ್ಪಿದ್ದನು. ಆ ನಂತರವೂ ಪಾಲಿಕೆಯ ಅಧಿಕಾರಿಗಳು ಎಚ್ಚೆತ್ತುಕೊಳ್ಳದ ಪರಿಣಾಮ ನಗರದಲ್ಲಿ ನಾಯಿ ದಾಳಿ ಪ್ರಕರಣಗಳು ಮರುಕಳಿಸುತ್ತಿದ್ದು, ಗುರುವಾರ ಬೀದಿ ನಾಯಿಗಳ ದಾಳಿಯಿಂದ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಜಾಜಿನಗರದ 6ನೇ ಬ್ಲಾಕ್‌ನಲ್ಲಿರುವ ಸೇಂಟ್‌ ಮಿರಾಸ್‌ ಶಾಲೆಯ ಬಳಿ ಘಟನೆ ನಡೆದಿದ್ದು, 9ನೇ ತರಗತಿಯ ಆಕಾಶ್‌ ಹಾಗೂ ಯುಕೆಜಿಯ ಸಾಯಿಸಿರಿ ಎಂಬ ಮಗು ಗಾಂಭೀರವಾಗಿ ಗಾಯಗೊಂಡಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಗುರುವಾರ ಬೆಳಗ್ಗೆ 8.30ಕ್ಕೆ ಆಕಾಶ್‌ ಆಟೋ ಇಳಿದು ಶಾಲೆಗೆ ಹೋಗುವ ವೇಳೆ ಹಿಂದಿನಿಂದ ಬಂದ ಬೀದಿ ನಾಯಿಗಳು ಆತನ ಮೇಲೆ ಎರಗಿವೆ. ಜತೆಗೆ ಸಮೀಪದಲ್ಲಿದ್ದ ಮಗು ಸಾಯಿಸರಿಯನ್ನು ಕಚ್ಚಿದ್ದು, ಸಾಯಿಸರಿಯನ್ನು ಕಾಪಾಡಲು ಮುಂದಾದ ಆಕೆಯ ಅಜ್ಜಿಯನ್ನೂ ಕಚ್ಚಿವೆ. ಇದರಿಂದ ಭಯಗೊಂಡ ಮಕ್ಕಳು ಜೋರಾಗಿ ಕಿರುಚಿದ್ದು, ಕೂಡಲೇ ಸ್ಥಳಕ್ಕೆ ಬಂದ ಶಾಲೆಯ ಭದ್ರತಾ ಸಿಬ್ಬಂದಿ ಹಾಗೂ ಸಾರ್ವಜನಿಕರು ನಾಯಿಗಳನ್ನು ಓಡಿಸಿ ಮಕ್ಕಳನ್ನು ರಕ್ಷಿಸಿದ್ದಾರೆ. 

ನಾಯಿ ದಾಳಿಯಿಂದಾಗಿ ಆಕಾಶ್‌ ತೊಡೆ, ಕೈ-ಕಾಲುಗಳಿಗೆ ಗಂಭೀರ ಗಾಯವಾಗಲಿದ್ದು, ಸಾಯಿಶ್ರೀ ಎಂಬ ಇನ್ನೊಂದು ಮಗು ಹಾಗೂ ಆಕೆಯ ಅಜ್ಜಿಗೆ ಕೈಗಳಿಗೆ ಗಾಯವಾಗಿದೆ” ಎಂದು ಶಾಲೆಯ ಶಿಕ್ಷಕಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಚ್ಚಿದ ಬಳಿಕ ಕಾರ್ಯಾಚರಣೆ: ಬೀದಿ ನಾಯಿಗಳ ಹಾವಳಿಯ ಬಗ್ಗೆ ಎಷ್ಟು ದೂರು ನೀಡಿದರೂ ಕಾರ್ಯಾಚರಣೆಗೆ ಪಾಲಿಕೆಯ ಸಿಬ್ಬಂದಿ ಮುಂದಾಗದೆ, ಜನರಿಗೆ ಕಚ್ಚಿ ಸುದ್ದಿಯಾದಾಗ ಮಾತ್ರವೇ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ವಿಭೂತಿಪುರದಲ್ಲಿ ನಾಯಿ ಹಾವಳಿ ಬಗ್ಗೆ ಹಲವು ಬಾರಿ ದೂರು ನೀಡಿದರೂ ಮುಂದಾಗದ ಪಾಲಿಕೆ ಸಿಬ್ಬಂದಿ, ನಾಯಿ ದಾಳಿಯಿಂದ ಬಾಲಕ ಮೃತಪಟ್ಟ ನಂತರದಲ್ಲಿ ಅಲ್ಲಿನ ನಾಯಿಗಳನ್ನು ಸೆರೆ ಹಿಡಿದಿದ್ದಾರೆ. 

ಬಿಬಿಎಂಪಿ ಅಧಿಕಾರಿಗಳ ವಾದವೇನು?: ಪಾಲಿಕೆಯಿಂದ ನಗರದ ಎಲ್ಲ ವಲಯಗಳಲ್ಲಿ ಸಂತನಹರಣ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ. ಶಸ್ತ್ರಚಿಕಿತ್ಸೆಯ ನಂತರ ನಾಯಿಗಳು ಕಚ್ಚುವುದಿಲ್ಲ ಎಂದು ಹೇಳಲಾಗುವುದಿಲ್ಲ. ಪಾಲಿಕೆಯಿಂದ ಈಗಾಗಲೇ ರಾಜಾಜಿನಗರದಲ್ಲಿ ಮಕ್ಕಳ ಮೇಲೆ ದಾಳಿ ನಡೆಸಿದ ನಾಯಿಗಳನ್ನು ಸೆರೆ ಹಿಡಿದಿದ್ದು, ಸುತ್ತಮುತ್ತಲಿನ ನಾಯಿಗಳನ್ನು ವಶಕ್ಕೆ ಪಡೆದು ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂಬುದನ್ನು ಪರಿಶೀಲಿಸಲಾಗುವುದು ಎಂದು ಪಾಲಿಕೆಯ ಪಶುಪಾಲನ ವಿಭಾಗದ ಜಂಟಿ ಆಯುಕ್ತ ಆನಂದ್‌ ಹೇಳಿದರು.

ಈ ಮೊದಲು ಅತ್ಯಂತ ವ್ಯಾಘ್ರವಾಗಿರುವ ಹಾಗೂ ವಾಹನಗಳನ್ನು ಬೆನ್ನಟ್ಟುವಂತಹ ನಾಯಿಗಳನ್ನು ಹಿಡಿದು ನಾಯಿ ಗೂಡುಗಳಲ್ಲಿ ಇರಿಸಿ ಅವುಗಳನ್ನು ನೋಡಿಕೊಳ್ಳಲಾಗುತ್ತಿತ್ತು. ಆದರೆ, ಕೆಲವು ಪ್ರಾಣಿ ಪ್ರಿಯರು ಸುಪ್ರೀಂ ಕೋರ್ಟ್‌ ಮೊರೆ ಹೋಗಿ, ನಾಯಿಗಳನ್ನು ಕೂಡಿ ಹಾಕುವ ನಿಯಮಕ್ಕೆ ತಡೆಯಾಜ್ಞೆ ತಂದಿದ್ದರು. ಹೀಗಾಗಿ ಪಾಲಿಕೆಯಿಂದ ನಾಯಿಗಳಿಗೆ ಎಸಿಬಿ ಚಿಕಿತ್ಸೆ ಮಾಡಲಾಗುತ್ತದೆಯೇ ಹೊರತು, ಅವುಗಳನ್ನು ಕೂಡಿ ಹಾಕುತ್ತಿಲ್ಲ ಎಂದರು.

ಶಾಲೆಗೆ ಹೋಗಲು ಆಟೋದಿಂದ ಇಳಿದ ಕೂಡಲೇ ಹಿಂದಿನಿಂದ ನಾಯಿ ಬಂದು ದಾಳಿ ನಡೆಸಿದೆ. ಕಾಲಿನ ತೊಡೆ, ಕೈ ಸೇರಿ ಕೆಲ ಭಾಗಗಳಲ್ಲಿ ನಾಯಿ ಕಚ್ಚಿದ್ದು, ಹೆಚ್ಚು ನೋವು ಅನುಭವಿಸುತ್ತಿದ್ದಾನೆ. ಆಸ್ಪತ್ರೆಯಲ್ಲಿ ರೇಬಿಸ್‌ ನಿರೋಧಕ ಚುಚ್ಚುಮದ್ದು ಹಾಕಿದ್ದು, ವಿಶಾಂತ್ರಿ ಪಡೆಯಲು ವೈದ್ಯರು ಹೇಳಿದ್ದಾರೆ. 
-ಸೆಲ್ವಿ, ಆಕಾಶ್‌ ತಾಯಿ

ಎನ್‌ಜಿಓಗಳ ವಾದವೇನು?: ಹೆಣ್ಣು ನಾಯಿಗಳು ಮರಿ ಹಾಕಿದಾಗ ತನ್ನ ಮರಿಗಳನ್ನು ರಕ್ಷಿಸಿಕೊಳ್ಳಲು ಕೋಪಗೊಳ್ಳುವುದಿದೆ. ಅದೇ ರೀತಿ ಗಂಡು-ಹೆಣ್ಣು ನಾಯಿಗಳು ಕೂಡುವ ಸಂದರ್ಭದಲ್ಲಿಯೂ ಇತರೆ ನಾಯಿಗಳು ಬಂದಾಗ ಗಂಡು ನಾಯಿಗಳು ಅತ್ಯಂತ ವ್ಯಾಘ್ರವಾಗುತ್ತವೆ. ಆದರೆ, ಸಂತಾನಹರಣ ಶಸ್ತ್ರಚಿಕಿತ್ಸೆಯಿಂದ ನಾಯಿಗಳು ತಮ್ಮ ಬಲ ಕಳೆದುಕೊಂಡು ದಾಳಿಗೆ ಮುಂದಾಗುವುದು ತೀರಾ ಕಡಿಮೆ. ಸಮರ್ಪಕ ವ್ಯವಸ್ಥೆಯಿಂದ ವ್ಯಾಘ್ರವಾಗಿರುವ ಹಾಗೂ ಬೆನ್ನಟ್ಟುವ ನಾಯಿಗಳನ್ನು ಹಿಡಿದು ಸಾಕಲು ಸರ್ಕಾರ ಕ್ರಮ ಕೈಗೊಳ್ಳಲು ನಮ್ಮದೇನು ಅಭ್ಯಂತರವಿಲ್ಲ ಎಂದು ಕ್ಯೂಪ ಸಂಸ್ಥೆಯ ಅಧ್ಯಕ್ಷೆ ಶೀಲಾರಾವ್‌ ತಿಳಿಸುತ್ತಾರೆ. 

ನಮ್ಮ ಗೋಳು ಕೇಳುವವರ್ಯಾರು?: ಬೀದಿ ನಾಯಿಗಳನ್ನು ಸಂತನ ಹರಣ ಶಸ್ತ್ರ ಚಿಕಿತ್ಸೆಗಾಗಿ ಹಿಡಿದೊಯ್ದರೆ ನಾಯಿಗಳು ಕಾಣೆಯಾಗಿವೆ ಎಂದು ಆರೋಪಿಸಿ, ಪಾಲಿಕೆಯ ಅಧಿಕಾರಿಗಳ ಮೇಲೆ ಪ್ರಾಣಿ ಪ್ರಿಯರು ದೂರು ದಾಖಲಿಸುತ್ತಾರೆ. ಇನ್ನು ನಾಯಿಗಳು ಸಾರ್ವಜನಿಕರನ್ನು ಕಚ್ಚಿದಾಗ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಾರೆ. ಎಬಿಸಿ ನಡೆಸಿದ ನಂತರವೂ ನಾಯಿಗಳು ಕಚ್ಚಿದರೆ ನಾವೇನು ಮಾಡಲು ಸಾಧ್ಯ ಎಂದು ಪಶುಪಾಲನೆ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.