ಕುದೂರಲ್ಲಿ ಬೀದಿನಾಯಿ, ಕೋತಿಗಳ ಹಾವಳಿ
Team Udayavani, Jul 24, 2021, 5:14 PM IST
ಕುದೂರು: ನಗರದಲ್ಲಿ ಬೀದಿನಾಯಿ ಮತ್ತುಮಂಗಗಳು ಹೆಚ್ಚಾಗಿದ್ದು, ಸ್ಥಳೀಯರುಅಂತಕಕ್ಕೀಡಾಗಿದ್ದಾರೆ. ನಾಯಿಗಳ ಉಪಟಳಕ್ಕೆಪ್ರತಿನಿತ್ಯ ಸಾರ್ವಜನಿಕರು ತಮ್ಮ ಜೀವವನ್ನು ಕೈಯಲ್ಲಿಹಿಡಿದುಕೊಂಡು ರಸ್ತೆಯಲ್ಲಿ ಸಂಚಾರ ಮಾಡಬೇಕಾದಪರಿಸ್ಥಿತಿ ನಿರ್ಮಾಣವಾಗಿದೆ.
ಕೂಡಲೇ ಗ್ರಾಮಪಂಚಾಯಿತಿ ಅಧಿಕಾರಿಗಳು ಬೀದಿ ನಾಯಿಗಳಉಪಟಳಕ್ಕೆ ಕಡಿವಾಣ ಹಾಕಬೇಕಾಗಿ ಸಾರ್ವಜನಿಕರು ಅಗ್ರಹಿಸಿದ್ದಾರೆ.
ಕುದೂರಿನ ವಿವಿಧ ಭಾಗದಬೀದಿಗಳಲ್ಲಿ ನಾಯಿಗಳ ಉಪಟಳ ದಿನೇ ದಿನೆ ಹೆಚ್ಚಾಗುತ್ತಿದೆ. ರಸ್ತೆ ಮೇಲೆಅಲ್ಲಲ್ಲಿ ಮಲಗಿರುತ್ತವೆ ಹಾಗೂ ಓಡಾಡುತ್ತಿರುತ್ತವೆ.ಯಾರಾದರೂ ರಸ್ತೆಯಲ್ಲಿ ಓಡಾಡುತ್ತಿದ್ದರೆ, ಅವರನ್ನುಅಟ್ಟಿಸಿಕೊಂಡು ಹೋಗಿ ಕಚ್ಚುತ್ತವೆ.
ಇನ್ನು ಮಕ್ಕಳುಮನೆಯಿಂದ ಹೊರಗೆ ಬರುವಂತಿಲ್ಲ. ಜನರಿಗೆ ನಾಯಿಕಚ್ಚಿರುವ ಉದಾಹರಣೆಗಳಿವೆ.ಬೈಕ್ನಲ್ಲಿ ಯಾರಾದರೂ ಸಂಚರಿಸಿದರೇ ನಾಯಿಗಳು ಅವರನ್ನು ಅಟ್ಟಾಡಿಸಿಕೊಂಡು ಹೋಗುತ್ತವೆ. ಇಂತಹ ಸಂದರ್ಭದಲ್ಲಿ ಎಷ್ಟೋಚಾಲಕರು ಗಾಬರಿಗೊಂಡು ಬಿದ್ದು ಗಾಯಗಳಾಗಿವೆ.
ಇನ್ನೂ ರಾತ್ರಿ ವೇಳೆ ಯಾರಾದರೂ ಒಂಟಿಯಾಗಿಬಂದರೆ ಸಾಕು ನಾಯಿಗಳು ಅಕ್ರಮಣ ಮಾಡುತ್ತವೆ.ಹತ್ತಾರು ನಾಯಿಗಳು ಒಟ್ಟಿಗೆ ಓಡಾಡುವುದರಿಂದ ಯಾರಾದರೂ ಹೆದರಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.ಕಣ್ಮುಚ್ಚಿ ಕುಳಿತ ಅಧಿಕಾರಿಗಳು: ಕಳೆದ ಎರಡುವರ್ಷಗಳಿಂದ ಬೀದಿ ನಾಯಿಗಳ ಉಪಟಳಉಲ್ಬಣದಿಂದಾಗಿ ಎಲ್ಲೆಲ್ಲೂ ನಾಯಿಗಳು ಹೆಚ್ಚಾಗಿವೆ.ಇದರ ನಿಯಂತ್ರಣವನ್ನು ಅಧಿಕಾರಿಗಳು ಮಾಡದೆಕಣ್ಣಿದ್ದು, ಕುರುಡರಂತೆ ನಾಯಿಗಳ ದಂಡನ್ನುವೀಕ್ಷಿಸುತ್ತಾ ನಿಯಂತ್ರಣ ಮಾಡುವಲ್ಲಿ ಮೀನಮೇಷ ಎಸಗುತ್ತಿದ್ದಾರೆ.
ಕಾಡಿಗೆ ನಾಯಿಗಳು: ಮೂರು ವರ್ಷಗಳ ಹಿಂದೆಗ್ರಾಮ ಪಂಚಾಯಿತಿ ಅಧಿಕಾರಿಗಳು ನಾಯಿಗಳನ್ನುಹಿಡಿದು ಚುಚ್ಚು ಮದ್ದು ನೀಡಿ, ನಾಯಿಗಳನ್ನುಕಾಡಿಗೆಬಿಡುವ ಮೂಲಕ ನಿಯಂತ್ರಣ ಮಾಡಲಾಗಿತ್ತು.ಇತ್ತೀಚೆಗೆ ನಡೆಯುತ್ತಿಲ್ಲ.ರಾತ್ರಿ ನಿದ್ದೆಗೆ ತೊಂದರೆ: ಗ್ರಾಮದೆಲ್ಲೆಡೆ ನಾಯಿಗಳಸಂಖ್ಯೆ ಉಲ್ಬಣಗೊಂಡಿದ್ದು, ಇಡೀ ರಾತ್ರಿಬೊಗಳುವುದರಿಂದ ರಾತ್ರಿ ನಿದ್ದೆ ಮಾಡದೆಪರಿತಪಿಸುವಂತಹ ವಾತಾವರಣ ನಾಯಿಗಳಿಂದ ನಿರ್ಮಾಣವಾಗಿದೆ.
ಮಂಗಗಳ ಹಾವಳಿ: ಮನೆಗಳ ಚಾವಣಿ ಮೇಲೆಹಾರುವ ಮಂಗಗಳು ಅಲ್ಲಿರುವ ಡಿಟಿಎಚ್ ಸೆಟ್ಗಳನ್ನು ಹಾಳುಮಾಡುತ್ತಿವೆ. ಮನೆ ಹೆಂಚುಗಳನ್ನುಒಡೆದು ಹಾನಿ ಮಾಡುತ್ತಿರುವ ಈ ಮಂಗಗಳ ಉಪಟಳದಿಂದಲೂ ಸ್ಥಳೀಯರು ಬೇಸತ್ತು ಹೋಗಿದ್ದಾರೆ.ಇಂತಹ ಹಲವಾರು ಸಂದರ್ಭದಲ್ಲಿ ದುರ್ಘಟನೆಗಳು ನಡೆಯುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ, ಉದಾಸೀನ ತೋರುತ್ತಿದ್ದಾರೆ.
ಇನ್ನು ನಾಯಿಗಳನ್ನು ಕೊಲ್ಲಲುಮುಂದಾದರೆ ಅವರ ಮೇಲೆ ಪ್ರಾಣಿ ದಯಾಸಂಘದವರು ಪ್ರಕರಣ ದಾಖಲಿಸುತ್ತಾರೆ ಎಂದುಇಲಾಖೆ ಅಧಿಕಾರಿಗಳು ನಾಯಿಗಳ ನಿಯಂತ್ರಣಕ್ಕೆಕಡಿವಾಣ ಹಾಕುವಲ್ಲಿ ಹಿಂದೇಟು ಹಾಕುತ್ತಿದ್ದಾರೆ.ಕೂಡಲೇ ನಾಯಿಗಳು ಮತ್ತು ಕೋತಿಗಳ ಉಪಟಳಕ್ಕೆಕಡಿವಾಣ ಹಾಕಬೇಕು ಎಂಬುಂದು ಸಾರ್ವಜನಿಕರಅಗ್ರಹವಾಗಿದೆ.
ಕೆ.ಎಸ್.ಮಂಜುನಾಥ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು