ಬಾಲಕನ ಮೇಲೆ ದಾಳಿ ಮಾಡಿದ ನಾಯಿಗಳು
Team Udayavani, Oct 3, 2022, 11:46 AM IST
ಬೆಂಗಳೂರು: ನಗರದ ಹೊರಮಾವು ಬಳಿಯ ರಾಜಣ್ಣ ಲೇಔಟ್ನಲ್ಲಿ ವಿದ್ಯಾರ್ಥಿಯ ಮೇಲೆ 5 ನಾಯಿಗಳು ದಾಳಿ ಮಾಡಿವೆ.
ಬಾಲಕನಿಗೆ ಕುತ್ತಿಗೆ ಭಾಗದಲ್ಲಿ ದೊಡ್ಡದಾದ ಗಾಯ ಸೇರಿ ಒಟ್ಟು 10ಕ್ಕೂ ಅಧಿಕ ಭಾಗಗಳಲ್ಲಿ ಗಾಯಗಳಾಗಿವೆ. ಕೊಪ್ಪಳ ಮೂಲದ ಈರಣ್ಣ ಎನ್ನುವ ಕೂಲಿ ಕಾರ್ಮಿಕನ ಪುತ್ರ ಯಶವಂತ (8) ನಾಯಿಗಳ ದಾಳಿಗೆ ತುತ್ತಾದವ. ಭಾನುವಾರ ಶಾಲೆಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಮುಗಿಸಿ 11.30ರ ಸುಮಾರಿಗೆ ಮನೆಗೆ ವಾಪಸಾಗುವಾಗ ನಾಲ್ಕೈದು ನಾಯಿಗಳು ಬಾಲಕನ ಮೇಲೆ ದಾಳಿ ಮಾಡಿವೆ. ಬಾಲಕನ ಚೀರಾಟವನ್ನು ಕೇಳಿದ ಸ್ಥಳೀಯರು ನಾಯಿಗಳಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ನರ್ಸರಿಯಲ್ಲಿ ಕೂಲಿ ಕೆಲಸಕ್ಕೆ ತೆರಳಿದ್ದ ಈರಣ್ಣನಿಗೆ ಮಾಹಿತಿ ತಿಳಿಸಿದ್ದು, ಅವರು ಬಂದು ಮಗನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ದರು.
ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯ: ಬಾಲಕನ ಎಡ ಕಿವಿಯ ಕೆಳಗಡೆ ಕುತ್ತಿಗೆ ಭಾಗದಲ್ಲಿ ಆಳವಾದ ಗಾಯವಾಗಿದ್ದು, ನಾಲ್ಕಕ್ಕೂ ಹೆಚ್ಚಿನ ಹೊಲಿಗೆ ಹಾಕಲಾಗಿದೆ. ನಾಯಿ ಕಡಿತದಿಂದ ನರಗಳು ಹಾಗೂ ತಲೆಯೊಳಗೆ ಗಾಯವಾಗಿರುವ ಬಗ್ಗೆ ತಿಳಿಯಲು ಸ್ಕ್ಯಾನಿಂಗ್ ಮಾಡಿಸುವಂತೆ ವೈದ್ಯರು ಸೂಚಿಸಿದ್ದಾರೆ. ಉಳಿದಂತೆ ತಲೆ, ಹೊಟ್ಟೆ, ತೊಡೆ, ಕಾಲು ಸೇರಿ ವಿವಿಧೆಡೆ ನಾಯಿ ಕಚ್ಚಿದ ಹಲ್ಲಿನ ಗುರುತುಗಳು ಆಳವಾಗಿ ಮೂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ