ಕೇರಳ ಮಾದರಿ ಕಾಯ್ದೆ ರೂಪಿಸಲು ಹೋರಾಟ

"ಮಲೆಯಾಳ ಭಾಷೆ ಅಭಿವೃದ್ಧಿ ಮತ್ತು ಪ್ರಸಾರ ಕಾಯ್ದೆ' ಮಾದರಿಯಲ್ಲಿ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿಗೆ ಕಾಯ್ದೆ ರೂಪಿಸಲು ಮನವಿ

Team Udayavani, Jan 3, 2021, 1:20 PM IST

ಕೇರಳ ಮಾದರಿ ಕಾಯ್ದೆ ರೂಪಿಸಲು ಹೋರಾಟ

ಬೆಂಗಳೂರು: ರಾಜ್ಯ ಸರ್ಕಾರ ಈ ವರ್ಷವನ್ನು ಕಾಯಕ ವರ್ಷ ಎಂದು ಘೋಷಣೆ ಮಾಡಿರುವ ಬೆನ್ನಲ್ಲೇ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ರಾಜ್ಯದಲ್ಲಿ “ಮಲೆಯಾಳ ಭಾಷೆ ಅಭಿವೃದ್ಧಿ ಮತ್ತು ಪ್ರಸಾರ ಕಾಯ್ದೆ’ ಮಾದರಿಯಲ್ಲಿ ರಾಜ್ಯದಲ್ಲೂ ಕಾಯ್ದೆ ರೂಪಿಸಬೇಕು ಎಂಬ ಹೋರಾಟ ರೂಪಿಸಲು ಕನ್ನಡಪರ ಹೋರಾಟಗಾರರು, ಸಾಹಿತಿಗಳು ಸಜ್ಜಾಗುತ್ತಿದ್ದಾರೆ.

ಮಲೆಯಾಳ ಭಾಷೆಯ ಸಮಗ್ರ ಅಭಿವೃದ್ಧಿ ಪಣತೊಟ್ಟಿರುವ ಕೇರಳಸರ್ಕಾರ ಈಗಾಗಲೇ ಮಲೆಯಾಳ ಭಾಷೆ ಅಭಿವೃದ್ಧಿ ಮತ್ತುಪ್ರಸಾರಕಾಯ್ದೆ ಜಾರಿಗೆ ತಂದಿದೆ. ಇದರಿಂದಾಗಿ ಭಾಷೆ ಅಭಿವೃದ್ಧಿ, ಉದ್ಯೋಗ,ತಂತ್ರಜ್ಞಾನ ಸೇರಿ ಇನ್ನಿತರ ಭಾಷಾ ಕಾರ್ಯಕ್ಕೆ ಸಂಬಂಧಿಸಿದಂತೆ ಹಲವುಇಲಾಖೆಗಳು ಒಂದೇ ಸೂರಿನಡಿ ಕೆಲಸ ಮಾಡಲು ಸಹಕಾರಿ ಆಗಲಿದೆ.ಭಾಷೆಯ ಸಮಗ್ರ ಅಭಿವೃದ್ಧಿಗೂ ಮತ್ತಷ್ಟು ಪೂರಕವಾಗಲಿದೆ. ಕರ್ನಾಟಕದಲ್ಲೂ ಕನ್ನಡಕ್ಕೆ ಸಂಬಂಧಿಸಿದಂತೆ ಹಲವು ಇಲಾಖೆಗಳು ಕಾರ್ಯ ನಿರ್ವಹಿಸುತ್ತಿವೆ. ಆದರೆ, ಅವೆಲ್ಲವೂ ಒಂದೇ ಸೂರಿನಡಿ ಕೆಲಸ ಮಾಡುತ್ತಿಲ್ಲ. ಹೀಗಾಗಿ ಭಾಷಾ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅನೇಕ ಅಡೆ-ತಡೆ ಉಂಟಾಗಿವೆ. ಕನ್ನಡ ನಾಮಫ‌ಲಕ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶಗಳು ಪಾಲನೆ ಆಗುತ್ತಿಲ್ಲ. ಹೀಗಾಗಿ ಕೇರಳ ಮಾದರಿಯ ಕಾಯ್ದೆ ಅಗತ್ಯ ಎಂಬುದು ಕನ್ನಡಪರ ಹೋರಾಟಗಾರರು ಹಾಗೂ ಸಾಹಿತಿಗಳವಾದ.

ಕಾರ್ಖಾನೆಗಳಲ್ಲಿ, ಸಾಫ್ಟ್ವೇರ್‌ ಕಂಪನಿಗಳಲ್ಲಿ ಕನ್ನಡಿಗರಿಗೆಉದ್ಯೋಗ ನೀಡುವ ವಿಚಾರ ಕೂಡ ಹೀಗೆಯೇ ಆಗಿದೆ.ತಂತ್ರಾಂಶ ಅಭಿವೃದ್ಧಿಯೂ ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯವಾಗಿದೆ. ಆದರೆ, ಈ ಬಗ್ಗೆ ಎಲ್ಲಾ ಇಲಾಖೆಗಳು ಒಗ್ಗೂಡಿ ಕೆಲಸ ನಿರ್ವಹಿಸುತ್ತಿಲ್ಲ. ಕೇರಳ ಸರ್ಕಾರ ಮಲೆಯಾಳ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ “ಮಲೆಯಾಳ ಭಾಷೆಅಭಿವೃದ್ಧಿ ಮತ್ತು ಪ್ರಸಾರ ಕಾಯ್ದೆ’ ಜಾರಿಗೆ ತಂದಿದೆ. ಅದರಿಂದ ಅಲ್ಲಿನ ಸ್ಥಳೀಯ ಭಾಷಿಗರಿಗೆ ಉದ್ಯೋಗ ದೊರಕುವ ಜತೆಗೆ ಭಾಷೆ ಬೆಳವಣಿಗೆಗೂ ಪೂರಕವಾಗಿದೆ ಎಂದು ಕನ್ನಡಪರ ಚಿಂತಕ ರಾ.ನಂ.ಚಂದ್ರಶೇಖರ್‌ ಹೇಳುತ್ತಾರೆ.

ಕಾಯ್ದೆಯಲ್ಲಿ ಅನುಪಮ ವಿಚಾರ: ಕೇರಳ ಸರ್ಕಾರ ಈಗಾಗಲೇಅನುಷ್ಠಾನಕ್ಕೆ ತಂದಿರುವ ಭಾಷೆ ಅಭಿವೃದ್ಧಿ ಮತ್ತು ಪ್ರಸಾರ ಕಾಯ್ದೆಯಲ್ಲಿರುವ ಅಂಶಗಳ ಬಗ್ಗೆ ಓದಿದ್ದೇನೆ. ಅದರಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವುದು, ನಾಮಫ‌ಲಕಗಳ ಅಳವಡಿಕೆ, ಭಾಷಾ ಅಭಿ ವೃದ್ಧಿ ತಂತ್ರಾಂಶ ಸೇರಿ ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲಲಾಗಿದೆ.ನಮ್ಮಲ್ಲಿ ನಾಮಫ‌ಲಕ ಅಳವಡಿಕೆ ಸಂಬಂಧ ದಂಡ ಹಾಕುವುದೇಒಂದು ಇಲಾಖೆ, ಭಾಷೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಒಂದುಇಲಾಖೆ, ಹಾಗೆಯೇ ಉದ್ಯೋಗ, ತಂತ್ರಾಂಶ ಅಭಿವೃದ್ಧಿಗೆ ಮತ್ತೂಂದು ಇಲಾಖೆ ಕಾರ್ಯ ನಿರ್ವಹಿಸು ತ್ತಿದೆ. ಕನ್ನಡ ಕಾಯಕಕ್ಕೆಸಂಬಂಧಿಸಿದಂತೆ ಎಲ್ಲಾ ಇಲಾಖೆಗಳು ಒಂದೇ ಸೂರಿನಡಿ ಬಂದರೆ ಭಾಷೆ ಬೆಳವಣಿಗೆಗೆ ಮತ್ತಷ್ಟು ಅನು ಕೂಲವಾಗಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಸಾಹಿತಿ ಎಲ್‌.ಹನುಮಂತಯ್ಯತಿಳಿಸಿದ್ದಾರೆ.

ಶೀಘ್ರ ಸಿಎಂ ಬಳಿಗೆ ನಿಯೋಗ :  ಸಮಗ್ರ ಭಾಷಾ ಅಭಿವೃದ್ಧಿ ಕಾಯ್ದೆ ಜಾರಿಗೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಮತ್ತು ಸಾಹಿತಿ ಎಲ್‌.ಹನುಮಂತಯ್ಯ ಅವರ ನೇತೃತ್ವದಲ್ಲಿ ಕನ್ನಡಪರ ಚಿಂತಕರ ಮತ್ತು ಸಾಹಿತಿಗಳ ನಿಯೋಗ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಭಾಷೆ ಬೆಳವಣಿಗೆ ಮತ್ತು ಸ್ಥಳೀಯರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಕೇರಳ ಸರ್ಕಾರ ಜಾರಿಗೆ ತಂದಿರುವ ಹೊಸ ಕಾಯ್ದೆ ಮಾದರಿಕಾಯ್ದೆ ಅವಶ್ಯಕತೆ ಬಗ್ಗೆ ಮನವರಿಕೆ ಮಾಡಿಕೊಡಲು ತೀರ್ಮಾನಿ ಸಿದೆ. ಅದಕ್ಕಾಗಿ “ಮಲೆಯಾಳ ಭಾಷೆ ಅಭಿವೃದ್ಧಿ ಮತ್ತು ಪ್ರಸಾರ ಕಾಯ್ದೆ ‘ಯಲ್ಲಿರುವ ಪೂರಕ ಅಂಶಗಳನ್ನು ಕನ್ನಡಕ್ಕೆ ಭಾಷಾಂತರಿಸುವ ಕೆಲಸ ಕೂಡ ಈಗಾಗಲೇ ನಡೆದಿದೆ.

 

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.