ಕ್ಷೇತ್ರದ ಅಭಿವೃದ್ಧಿಗೆ ಕಟಿಬದ್ಧ
Team Udayavani, May 2, 2018, 3:03 PM IST
ಬೆಂಗಳೂರು: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ರವಿ, ಪ್ರಚಾರ ಕಾರ್ಯ ಚುರುಕುಗೊಳಿಸಿದ್ದಾರೆ.
ಮಂಗಳವಾರ ವಿದ್ಯಾರಣ್ಯಪುರ, ಎಚ್ಎಂಟಿ, ಬಡವಾಣೆ, ಚಿಕ್ಕಜಾಲ ಹೋಬಳಿ, ನಾಗವಾರ ಸೇರಿದಂತೆ ಹಲವು ಭಾಗಗಳಲ್ಲಿ ಮನೆ ಮನೆ ಪ್ರಚಾರ ಕಾರ್ಯ ನಡೆಸಿದರು.ಈ ವೇಳೆ ಮತದಾರರ ಸಮಸ್ಯೆಗಳ ಆಲಿಸಿದ ರವಿ, ಬದಲಾವಣೆಗಾಗಿ ಈ ಬಾರಿ ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕಟಿಬದ್ಧವಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು.
ನಾಗವಾರದಲ್ಲಿ ಸುಮಾರು 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾದರು. ಪಕ್ಷಕ್ಕೆ ಸ್ವಾಗತಿಸಿದ ಅಭ್ಯರ್ಥಿ ರವಿ, ರಾಜ್ಯದ ಹಾಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ನಂಬಿಕೆಯಿಟ್ಟು ಬಿಜೆಪಿಗೆ ಬಂದಿರುವುದು ಸಂತಸ ನೀಡಿದೆ ಎಂದರು. ಇದಲ್ಲದೆ ಸಹಕಾರ ನಗರ ವಾಸಿಗಳ ಅಸೋಸಿಯೇಷನ್ ಸೇರಿ ಕ್ಷೇತ್ರದ ಹಲವು ಸಂಘಗಳ ಮುಖಂಡರ ಜತೆ ಸಭೆ ನಡೆಸಿದರು.
ಕ್ಷೇತ್ರದಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಕಂಡಿದ್ದು ಈ ಬಾರಿ ಶಾಸಕನಾದರೆ ಜನರ ದನಿಯಾಗಿ ಕಾರ್ಯನಿರ್ವಹಿಸಲಿದ್ದೇನೆ ಎಂದರು ಭರವಸೆ ನೀಡಿದರು. ಈಗಾಗಲೇ ಕ್ಷೇತ್ರದಲ್ಲಿ ಬಿಜೆಪಿ ಪರ ಒಲವು ವ್ಯಕ್ತವಾಗಿದ್ದು, ತಾವೂ ಬೆಂಬಲಿಸಬೇಕು ಎಂದು ಸಂಘದ ಮುಖಂಡರಲ್ಲಿ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ