ಶೌಚಕ್ಕೆ ಬಂದ ಯುವತಿಯರ ಖಾಸಗಿ ದೃಶ್ಯ ಸೆರೆ ಹಿಡಿದ ವಿದ್ಯಾರ್ಥಿ
ಶೌಚಾಲಯದೊಳಗೆ ಅಡಗಿ ಕೃತ್ಯ ಎಸಗಿದ ವಿದ್ಯಾರ್ಥಿ, 1200ಕ್ಕೂ ಹೆಚ್ಚು ವಿಡಿಯೋ
Team Udayavani, Nov 23, 2022, 12:49 PM IST
ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಮಹಿಳಾ ಶೌಚಾಲಯಕ್ಕೆ ಒಳನುಗ್ಗಿ ರಹಸ್ಯವಾಗಿ ವಿದ್ಯಾರ್ಥಿನಿಯರ ಖಾಸಗಿ ದೃಶ್ಯ ಚಿತ್ರೀಕರಿಸುತ್ತಿದ್ದ ಯುವಕ ಕೊನೆಗೂ ಗಿರಿನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆತನ ಮೊಬೈಲ್ ಪರಿಶೀಲಿಸಿದಾಗ 1,200ಕ್ಕೂ ಹೆಚ್ಚು ಯುವತಿಯರ ಖಾಸಗಿ ದೃಶ್ಯವಿರುವ ಫೋಟೋ, ವಿಡಿಯೋ ಪತ್ತೆಯಾಗಿದೆ.
ದ್ವಾರಕಾನಗರದ ನಿವಾಸಿ ಉತ್ತರ ಭಾರತ ಮೂಲದ ಶುಭಂ ಆಜಾದ್(21) ಬಂಧಿತ. ಹೊಸಕೆರೆಹಳ್ಳಿಯ ಖಾಸಗಿ ಕಾಲೇಜೊಂದರಲ್ಲಿ 5ನೇ ಸೆಮಿಸ್ಟರ್ ಬಿಬಿಎ ಎಲ್ಎಲ್ಬಿ ವ್ಯಾಸಂಗ ಮಾಡುತ್ತಿದ್ದ.
ಆರೋಪಿಯು ಕಾಲೇಜಿನ ಒಂದು ಮಹಿಳಾ ಶೌಚಾಲಯದಲ್ಲಿ ಅವಿತುಕೊಳ್ಳುತ್ತಿದ್ದ. ಶೌಚಕ್ಕಾಗಿ ವಿದ್ಯಾರ್ಥಿನಿಯರು ಬರುವ ವೇಳೆ ತಾನು ಅವಿತು ಕುಳಿತ ಪಕ್ಕದ ಶೌಚಾಲಯದ ಮೇಲೆ ಹತ್ತಿ ವಿದ್ಯಾರ್ಥಿನಿಯರ ಗಮನಕ್ಕೆ ಬಾರದಂತೆ ತನ್ನ ಮೊಬೈಲ್ನಲ್ಲಿ ವಿಡಿಯೋ ಸೆರೆ ಹಿಡಿಯುತ್ತಿದ್ದ. ನ.13ರಂದು ಸಂಜೆ ಇಬ್ಬರು ವಿದ್ಯಾರ್ಥಿನಿಯರು ಶೌಚಾಲಯಕ್ಕೆ ಹೋದ ವೇಳೆ 2 ಶೌಚಾಲಯಗಳೂ ಒಳಗಿನಿಂದ ಲಾಕ್ ಆಗಿದ್ದವು. ಹೀಗಾಗಿ ಇವರು ಕಾಯುತ್ತಿದ್ದಾಗ, ಆರೋಪಿಯು ಶೌಚಗೃಹದ ಮೇಲಿಂದ ಮೊಬೈಲ್ನಲ್ಲಿ ರಹಸ್ಯವಾಗಿ ವಿಡಿಯೋ ಸೆರೆಹಿಡಿಯುವುದನ್ನು ಗಮನಿಸಿ ಹೌಹಾರಿದ್ದರು.
ಇದನ್ನು ಕಂಡ ಆರೋಪಿಯು ಆತಂಕದಿಂದ ಶೌಚಾಲಯದ ಒಳಗೆ ಕುಳಿತುಕೊಂಡು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇಬ್ಬರು ಯುವತಿಯರೂ ಜೋರಾಗಿ ಬಾಗಿಲು ಬಡಿದಾಗ ಬೇರೆ ದಾರಿ ಕಾಣದೇ ಬಾಗಿಲು ತೆಗೆದು ಹೊರಗೆ ಓಡಿ ಹೋಗಿದ್ದ. ವಿದ್ಯಾರ್ಥಿನಿಯರು ಮೇಲಧಿಕಾರಿಗಳಿಗೆ ಈ ವಿಚಾರ ತಿಳಿಸಿದ್ದರು. ಕಾಲೇಜಿನ ಆಡಳಿತ ಮಂಡಳಿಯು ಮಹಿಳಾ ಶೌಚಾಲಯದ ಬಳಿ ಇರುವ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಆರೋಪಿಯ ಭಾವ ಚಿತ್ರ ಕಂಡು ಬಂದಿತ್ತು. ಈ ಭಾವಚಿತ್ರವನ್ನು ಕೂಡಲೇ ಕಾಲೇಜಿನ ಎಲ್ಲ ವಿಭಾಗಕ್ಕೂ ಕಳುಹಿಸಿ ಗುರುತಿಸುವಂತೆ ತಿಳಿಸಿದಾಗ ಬಿಬಿಎ ವಿಭಾಗದ ಮುಖ್ಯಸ್ಥರು ಆರೋಪಿ ಶುಭಂ ಆಜಾದ್ನ ವಿವರವನ್ನು ಕಾಲೇಜಿನ ಆಡಳಿತ ಮಂಡಳಿಯ ಅಧಿಕಾರಿಗಳಿಗೆ ನೀಡಿದ್ದರು. ಕೂಡಲೇ ಶುಭಂನನ್ನು ಕರೆದು ವಿಚಾರಣೆ ಮಾಡಿದಾಗ ಆತ ಸತ್ಯ ಬಾಯ್ಬಿಟ್ಟಿ ದ್ದಾನೆ. ವಿದ್ಯಾರ್ಥಿನಿಯರು ಶೌಚಾಲಯ ದೊಳಗೆ ಬಂದು ಬಟ್ಟೆ ತೆಗೆಯುವ ಸಂದರ್ಭದಲ್ಲಿ ವಿಡಿಯೋ ಮಾಡಿಕೊಂಡಿರುತ್ತೇನೆ. ಇದೇ ರೀತಿ 1,200 ವಿಡಿಯೋಗಳು ನನ್ನ ಮೊಬೈಲ್ ನಲ್ಲಿವೆ ಎಂದು ಹೇಳಿದ್ದ.
ನಂತರ ಕ್ಷಮಾಪಣಾ ಪತ್ರ ಬರೆದು ಕೊಟ್ಟಿದ್ದ. ಆತನಿಗೆ ಬುದ್ಧಿವಾದ ಹೇಳಿ ಎಚ್ಚರಿಕೆ ನೀಡಿ ಕಳುಹಿಸಲಾಗಿತ್ತು. ಇಷ್ಟಕ್ಕೆ ಸುಮ್ಮನಾಗದ ಆರೋಪಿಯು ನ.18 ರಂದು ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದಾಗ ಕಾಲೇಜಿನ ಉಪನ್ಯಾಸ ಕರು ಗಿರಿನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀ ಗ ಆರೋಪಿಯನ್ನು ಬಂಧಿಸಿ. ಆತನ ಮೊಬೈಲ್ ಜಪ್ತಿ ಮಾಡಿ ಎಫ್ಎಸ್ಎಲ್ಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ