Bangalore: ಖಾಸಗಿ ಕಾಲೇಜು ಆಡಳಿತ ಮಂಡಳಿ ಕಿರುಕುಳ? ವಿದ್ಯಾರ್ಥಿ ಆತ್ಮಹತ್ಯೆ
Team Udayavani, Dec 30, 2023, 2:22 PM IST
ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಖಾಸಗಿ ಕಾಲೇಜಿನ ಪ್ರಥಮ ವರ್ಷದ ಹೋಟೆಲ್ ಮ್ಯಾನೇಜ್ಮೆಂಟ್ನ ವಿದ್ಯಾರ್ಥಿಯೊಬ್ಬ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾಲೇಜಿನಲ್ಲಿ ನೀಡಿದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪಾಲಕರು ಆರೋಪಿಸಿದ್ದಾರೆ.
ನಾಗರಬಾವಿ ನಿವಾಸಿ ನಿಖಿಲ್ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.ನಿಖಿಲ್ ಮನೆಯಲ್ಲಿದ್ದ ಮಾತ್ರೆ ಗಳನ್ನು ಸೇವಿಸಿ ಅಸ್ವಸ್ಥಗೊಂಡಿದ್ದ. ಕೂಡಲೇ ಆತನನ್ನು ನಾಗರಬಾವಿಯ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡ ಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿ ರೆಳೆದಿದ್ದಾನೆ. ಇತ್ತ ಕಾಲೇಜು ಆಡಳಿತ ಮಂಡಳಿ ಕಿರು ಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ನಿಖೀಲ್ ಪಾಲಕರು ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜಿನ ಡೀನ್ ವಿರುದ್ಧ ಆಕ್ರೋಶ: ಕಾಲೇಜಿನ ಡೀನ್ ಒಬ್ಬರು ಕಿರುಕುಳ ನೀಡುತ್ತಿದ್ದ ವಿಚಾರವನ್ನು ನಿಖೀಲ್ ತಿಳಿಸಿದ್ದ. ಕಿರುಕುಳದಿಂದ ಬೇಸತ್ತು ಮನೆಯಲ್ಲಿದ್ದ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಮೂಲಕ ಕಾಲೇಜಿನವರೇ ನನ್ನ ಮಗನನ್ನು ಕೊಂದಿದ್ದಾರೆ. ಜಗಳ ಮಾಡಿರುವ ವಿಚಾರದಲ್ಲಿ ನಿಖಿಲ್ನನ್ನು ಅಮಾನತು ಮಾಡಿದ್ದರು. ಆ ವಿಚಾರದಲ್ಲಿ ಚರ್ಚಿಸಲು ಕಾಲೇಜು ಬಳಿಗೆ ತೆರಳಿದಾಗ ಪಾಲಕರ ಎದುರು ನಿಖೀಲ್ಗೆ ಅವಮಾನ ಮಾಡಿದ್ದಾರೆ ಎಂದು ವಿದ್ಯಾರ್ಥಿಯ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕಾಲೇಜಿನ ಡೀನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಿಖಿಲ್ಗೆ ಕಿರುಕುಳ ಕೊಟ್ಟವರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಲೇಜು ಎದುರು ನಿಖೀಲ್ ಮೃತದೇಹ ಇರಿಸಿ ಪಾಲಕರು ಹಾಗೂ ಕುಟುಂಬಸ್ಥರು ಪ್ರತಿಭಟನೆ ನಡೆಸಲು ಮುಂದಾದರು. ನಂತರ ಪೊಲೀಸರ ಮನವಿಗೆ ಮಣಿದು ಅದನ್ನು ಕೈಬಿಟ್ಟರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ