ಸಹಪಾಠಿಗಳ ರ್ಯಾಗಿಂಗ್‌ಗೆ ವಿದ್ಯಾರ್ಥಿನಿ ನೇಣಿಗೆ ಶರಣು


Team Udayavani, Feb 8, 2018, 12:05 PM IST

blore-1.jpg

ಬೆಂಗಳೂರು: ಸಹಪಾಠಿಗಳ ರ್ಯಾಗಿಂಗ್‌ ನಿಂದ ಬೇಸತ್ತ ಕೆ.ಎಸ್‌.ಲೇಔಟ್‌ನ ದಯಾನಂದ ಸಾಗರ ಕಾಲೇಜಿನ ಪ್ರಥಮ ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಬುಧವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚನ್ನಸಂದ್ರದ ಶಬರಿ ಅಪಾರ್ಟ್‌ಮೆಂಟ್‌ ನಿವಾಸಿ, ಬ್ಯಾಂಕ್‌ ಉದ್ಯೋಗಿ ಚಂದ್ರಶೇಖರ್‌ ಮತ್ತು ಲತಾ ದಂಪತಿ ಪುತ್ರಿ ಮೇಘನಾ (18) ಮೃತ ವಿದ್ಯಾರ್ಥಿನಿ. ತಮ್ಮ ಮಗಳ ಸಾವಿಗೆ ಕಾಲೇಜಿನ ಸಹಪಾಠಿಗಳು ಮತ್ತು ಕಾಲೇಜಿನ ಉಪನ್ಯಾಸಕ ರಾಜಕುಮಾರ್‌ ಹಾಗೂ ಆಡಳಿತ ಮಂಡಳಿ ಕಾರಣ ಎಂದು ಮೇಘನಾ ಪೋಷಕರು ರಾಜಾರಾಜೇಶ್ವರಿನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. 

ಹುಟ್ಟು ಅಂಧರಾಗಿರುವ ಚಂದ್ರಶೇಖರ್‌ ವಿಜಯ ನಗರ ಕಾರ್ಪೋರೇಷನ್‌ ಬ್ಯಾಂಕ್‌ ವ್ಯವಸ್ಥಾಪಕರಾಗಿದ್ದು, ಪತ್ನಿ ಲತಾ ಸಹಕಾರ ಬ್ಯಾಂಕ್‌ನಲ್ಲಿ ಉದ್ಯೋಗಿ. ಇವರಿಗೆ ಭಾವನಾ ಮತ್ತು ಮೇಘನಾ ಹೆಸರಿನ ಇಬ್ಬರು ಮಕ್ಕಳಿದ್ದಾರೆ. ಮೇಘನಾ ದಯಾನಂದ ಸಾಗರ ಕಾಲೇಜಿನಲ್ಲಿ ಪ್ರಥಮ ವರ್ಷದ ಕನ್‌ಸ್ಟ್ರಕ್ಷನ್‌ ಮತ್ತು ಟೆಕ್ನಾಲಜಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಸಹೋದರಿ ಭಾವನಾ ಡಿಪ್ಲೋಮಾ ಓದುತ್ತಿದ್ದಾರೆ.

ಬುಧವಾರ ಎಂದಿನಂತೆ ಲತಾ, ಪತಿ ಚಂದ್ರಶೇಖರ್‌ರನ್ನು ಕೆಲಸಕ್ಕೆ ಬಿಟ್ಟು ತಾವು ಕೆಲಸಕ್ಕೆ ತೆರಳಿದ್ದರು. ಇತ್ತ ಭಾವನಾ ಕಾಲೇಜಿಗೆ ಹೋಗಿದ್ದರು. ಮೇಘನಾ ಕೂಡ ಕಾಲೇಜಿಗೆ ಹೋಗಿ, ವಾಪಸ್‌ 2 ಗಂಟೆಗೆ ಮನೆಗೆ ಬಂದಿದ್ದಾರೆ. 4 ಗಂಟೆ ಸುಮಾರಿಗೆ ಮನೆಗೆ ಬಂದ ಭಾವನಾ, ಮೇಘನಾ ಕೊಠಡಿ ಬಾಗಿಲು ಬಡಿದಿದ್ದಾರೆ. ಎಷ್ಟು ಕೂಗಿದರೂ ಪ್ರತಿಕ್ರಿಯೆ ಬಾರದಿದ್ದನ್ನು ನೋಡಿ, ನೆರೆಹೊರೆಯವರ ಸಹಾಯದಿಂದ ಬಾಗಿಲು ತೆರೆದಾಗ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಪೋಷಕರಿಗೆ, ಪೊಲೀಸರಿಗೆ ತಿಳಿಸಿದ್ದಾರೆ.

ಎಚ್‌ಒಡಿ, ಸಹಪಾಠಿಗಳೇ ಕಾರಣ: ತಮ್ಮ ಪುತ್ರಿ ಸಾವಿಗೆ ಸಹಪಾಠಿಗಳು ,ಕಾಲೇಜಿನ ಆಡಳಿತ ಮಂಡಳಿ ಹಾಗೂ ಎಚ್‌ಒಡಿ ರಾಜಕುಮಾರ್‌ ನಿರ್ಲಕ್ಷ್ಯವೇ ಕಾರಣ ಎಂದು ಮೇಘನಾ ಪೋಷಕರು ಆರೋಪಿಸಿದ್ದಾರೆ. ಕೆಲ ದಿನಗಳ ಹಿಂದೆ ಮೇಘನಾ ಕಾಲೇಜಿನಲ್ಲಿ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಹೀಗಾಗಿ ಎದುರು ಗುಂಪಿನ ವಿದ್ಯಾರ್ಥಿಗಳು ಮೇಘನಾ ಜತೆ ಜಗಳವಾಡಿ, ದೂರವಿಟ್ಟಿದ್ದರು. ಜತೆಗೆ ಯಾವುದೇ ಅಸೈನ್‌ಮೆಂಟ್‌ ಕೊಡದೆ, ಕೆಟ್ಟ ರೀತಿಯ ಸಂದೇಶಗಳನ್ನು ಕಳುಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಮೇಘನಾ ಬೇಸರದಿಂದ ಮನೆಯಲ್ಲೇ ಇರುತ್ತಿದ್ದಳು ಎಂದು ತಿಳಿಸಿದ್ದಾರೆ.

ನಿರ್ಲಕ್ಷ್ಯ: ಸಹೋದರಿ ಭಾವನಾ ಕಾಲೇಜಿಗೆ ಹೋಗಿ ಸಹಪಾಠಿಗಳಲ್ಲಿ ಸಾಮರಸ್ಯ ತರಲು ಯತ್ನಿಸಿದ್ದರು. ಆದರೆ ಮೇಘನಾ ಸಹಪಾಠಿಗಳು ಗರ್ವದಿಂದ ಮಾತನಾಡಿದ್ದರು. ಈ ಕುರಿತು ಎಚ್‌ಒಡಿ ರಾಜ ಕುಮಾರ್‌ ಗಮನಕ್ಕೆ ತಂದರೆ,ಅವರು ನಿರ್ಲಕ್ಷ್ಯ ವಹಿಸಿದ್ದರು ಎಂದು ಪೋಷಕರು ದೂರಿದ್ದಾರೆ. 

ಮೇಘನಾಳ ಮಾನಸಿಕ ಸ್ಥಿತಿ ಕಂಡು ಧೈರ್ಯ ತುಂಬಿದ್ದ ತಾಯಿ ಲತಾ ಹಾಗೂ ಸಹೋದರಿ ಭಾವನಾ ಇಷ್ಟವಿಲ್ಲದಿದ್ದರೆ ಕಾಲೇಜು ಬಿಡುವಂತೆ ಸೂಚಿಸಿದ್ದರು. ಇಲ್ಲವಾದರೆ ಒಂದು ವಾರ ಕಾಲೇಜಿಗೆ ಹೋಗುವುದು ಬೇಡ ಎಂದು ಸಲಹೆ ನೀಡಿದ್ದರು. ಆದರೆ, ಆಕೆ ಓದಲು ಹಠ ಹಿಡಿದು ಕಾಲೇಜಿಗೆ ಹೋದ ಮೇಘನಾ ಸಾವಿನ ದಾರಿ ಹಿಡಿದಿದ್ದಾಳೆ. ಇದಕ್ಕೆ ಆಕೆಯ ಸಹಪಾಠಿಗಳು ಹಾಗೂ ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ತಂದೆ ಚಂದ್ರಶೇಖರ್‌ ಆರೋಪಿಸಿದರು.

ಕೌನ್ಸೆಲಿಂಗ್‌ ಮಾಡಿದ್ದರೂ ಸರಿ ಹೋಗಿಲ್ಲ  ನಮ್ಮ ಕಾಲೇಜಿನಲ್ಲಿ ಚುನಾವಣೆ, ಶ್ರೀಮಂತರ ಮಕ್ಕಳು ಮತ್ತು ಮೆರಿಟ್‌ ವಿದ್ಯಾರ್ಥಿಗಳೆಂಬ ಬೇದಭಾವವಿಲ್ಲ. ವಿದ್ಯಾರ್ಥಿಗಳು ತರಗತಿಯಲ್ಲಿ ಯಾವುದೇ ಗಲಾಟೆ ಮಾಡಿಕೊಂಡಿಲ್ಲ. ಕಾಲೇಜಿನ ಕ್ಯಾಂಪಸ್‌ನಿಂದ ಹೊರಗಡೆ ಮಾಡಿಕೊಂಡ ಜಗಳಕ್ಕೆ ನಾವು ಹೊಣೆ ಅಲ್ಲ. ವಿದ್ಯಾರ್ಥಿನಿ ಮೇಘನಾ 1ನೇ ಸೆಮಿಸ್ಟರ್‌ನಲ್ಲಿ 2 ವಿಷಯದಲ್ಲಿ ಅನುತ್ತೀರ್ಣಗೊಂಡಿದ್ದಾರೆ. ಹೀಗಾಗಿ ಆಕೆಗೆ ಕೌನ್ಸೆಲಿಂಗ್‌ ಕೂಡ ಮಾಡಲಾಗಿತ್ತು. ಆದರೆ, ಆಕೆ ಸರಿ ಹೋಗಿಲ್ಲ. ಎಚ್‌ಒಡಿ ರಾಜಕುಮಾರ್‌ 31 ವರ್ಷದಿಂದ ಇಲ್ಲಿಯೇ ಕೆಲಸ ಮಾಡುತ್ತಿದ್ದು, ಸಣ್ಣ ಆರೋಪವೂ ಅವರ ಮೇಲೆ ಇಲ್ಲ ಎಂದು ದಯಾನಂದ ಸಾಗರ ಕಾಲೇಜು ಪ್ರಾಂಶುಪಾಲ ಡಾ.ಸಿ.ಪಿ.ಎಸ್‌. ಪ್ರಕಾಶ್‌ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.