ವಿದ್ಯಾರ್ಥಿಗಳ ಸೆಲ್ಫಿ ವಿತ್‌ ಬಸ್‌ಪಾಸ್‌


Team Udayavani, Sep 1, 2018, 6:00 AM IST

btmc-bus.jpg

ಬೆಂಗಳೂರು: ಯಾಕೋ ಈ ಬಾರಿ ವಿದ್ಯಾರ್ಥಿಗಳಿಗೆ ರಿಯಾಯ್ತಿ ಪಾಸು ಗಳಿಸುವ ಅದೃಷ್ಟ ಇದ್ದಂತಿಲ್ಲ. ಆರಂಭದಲ್ಲಿ ಸರ್ಕಾರದ ಉಚಿತ ಪಾಸಿನ ನಿರೀಕ್ಷೆ ಹುಸಿಯಾಯಿತು. ನಂತರ ಬಿಎಂಟಿಸಿ ಪರಿಚಯಿಸಿದ ಹೊಸ ವ್ಯವಸ್ಥೆಯಿಂದ ತಡವಾಯಿತು. ಈಗ ಸ್ವತಃ ವಿದ್ಯಾರ್ಥಿಗಳ ಸೆಲ್ಫಿ ಗೀಳು ತೊಡಕಾಗಿದೆ!

ಪ್ರಸಕ್ತ ಸಾಲಿನಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸ್ಮಾರ್ಟ್‌ಕಾರ್ಡ್‌ ರೂಪದಲ್ಲಿ ವಿದ್ಯಾರ್ಥಿಗಳ ಪಾಸು ವಿತರಣೆಗೆ ನಿರ್ಧರಿಸಿದ್ದು, ಅದಕ್ಕೆ ಪೂರಕವಾಗಿ ಆನ್‌ಲೈನ್‌ನಲ್ಲೇ ಫೋಟೋ ಸಹಿತ ಅರ್ಜಿ ಸಲ್ಲಿಸಲು ಸೂಚಿಸಿದೆ. ಆದರೆ, ವಿದ್ಯಾರ್ಥಿಗಳು ಪಾಸ್‌ಪೋರ್ಟ್‌ ಫೋಟೋ ಹಾಕಬೇಕಾದ ಜಾಗದಲ್ಲಿ ತಮ್ಮ ನೆಚ್ಚಿನ ನಾಯಕ ಅಥವಾ ನಾಯಕಿ ಜತೆ ಒಂದು ಸೆಲ್ಫಿ, ಪಾರ್ಕ್‌ನಲ್ಲಿ ಸ್ನೇಹಿತರೊಂದಿಗೆ ಜಾಲಿಮೂಡ್‌ನ‌ಲ್ಲಿರುವ ಫೋಟೋ, ಬೈಕ್‌ನಲ್ಲಿ ಕುಳಿತ ವಿವಿಧ ಭಂಗಿಗಳು, ಸೆಲ್ಫಿ ವಿತ್‌ ಫ್ಯಾಮಿಲಿ ಫೋಟೋಗಳನ್ನು ಅಪ್‌ಲೋಡ್‌ ಮಾಡಿದ್ದಾರೆ. ಅದೇ ಈಗ ಉಚಿತ ಪಾಸ್‌ಗೆ ವಿತರಣೆಗೆ ಅಡ್ಡಿಯಾಗಿದೆ.

30 ಸಾವಿರಕ್ಕೂ ಅಧಿಕ ಸೆಲ್ಫಿ!
ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಹೀಗೆ ಬಂದಿರುವ ಫೋಟೋಗಳು 30 ಸಾವಿರಕ್ಕೂ ಹೆಚ್ಚು. ಆದರೆ, ಈ ರೀತಿಯ ಫೋಟೋಗಳನ್ನು ಸ್ಮಾರ್ಟ್‌ಕಾರ್ಡ್‌ ಸಾಫ್ಟ್ವೇರ್‌ ಸ್ವೀಕರಿಸುತ್ತಿಲ್ಲ. ಜತೆಗೆ ಹೋಲಿಕೆಯಾಗದೇ ತಿರಸ್ಕೃತಗೊಳ್ಳುತ್ತಿವೆ. ಇದು ಸಿಬ್ಬಂದಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಶಾಲಾ ವಿದ್ಯಾರ್ಥಿಗಳ ಫೋಟೋಗಳಲ್ಲಿ ಅಷ್ಟಾಗಿ ಈ ಸಮಸ್ಯೆ ಇಲ್ಲ. ಕಾಲೇಜು ವಿದ್ಯಾರ್ಥಿಗಳಲ್ಲೇ ಈ ಸಮಸ್ಯೆ ಹೆಚ್ಚಿದೆ. ಪರಿಣಾಮ ಪಾಸುಗಳ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಹೆಸರು ಹೇಳಲಿಚ್ಛಿಸದ ಬಿಎಂಟಿಸಿ ಅಧಿಕಾರಿಯೊಬ್ಬರು ಅಸಹಾಯಕತೆ ವ್ಯಕ್ತಪಡಿಸುತ್ತಾರೆ.

ತಾಂತ್ರಿಕ ಕಾರಣದಿಂದ ಹಿನ್ನಡೆ:
ಶಾಲೆಗಳಿಂದ ಅಪ್‌ಲೋಡ್‌ ಆಗಿರುವ ಅರ್ಜಿಗಳ ಫೋಟೋಗಳು ಬಹುತೇಕ ಸರಿಯಾಗಿವೆ. ಕಾಲೇಜು ವಿದ್ಯಾರ್ಥಿಗಳು ಅಪ್‌ಲೋಡ್‌ ಮಾಡಿರುವ ಫೋಟೋಗಳೇ ಅಸಮರ್ಪಕವಾಗಿವೆ. ಅದರಲ್ಲಿ ತಂದೆಯೊಂದಿಗೆ, ಕುಟುಂಬದ ಸದಸ್ಯರು, ಸ್ಟಾರ್‌ಗಳೊಂದಿಗೆ ತೆಗೆದುಕೊಂಡ ಸೆಲ್ಫಿ ಹೆಚ್ಚಿನ ಸಂಖ್ಯೆಯಲ್ಲಿವೆ. ಇನ್ನು ಹಲವು ಫೋಟೋಗಳು ಉತ್ತಮ ಗುಣಮಟ್ಟದ್ದಾಗಿಲ್ಲ. ಕೆಲವು ಅಸ್ಪಷ್ಟವಾಗಿದ್ದು, ಒಂದಕ್ಕೊಂದು ಹೋಲಿಕೆಯೂ ಆಗುತ್ತಿಲ್ಲ. ಈ ರೀತಿಯ ತಾಂತ್ರಿಕ ಕಾರಣಗಳಿಂದ ಸ್ವಲ್ಪ ಹಿನ್ನಡೆ ಆಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಪೊನ್ನುರಾಜ್‌ ಸ್ಪಷ್ಟಪಡಿಸುತ್ತಾರೆ.

ಅಸ್ಪಷ್ಟವಾದ ಫೋಟೋ ಅಪ್‌ಲೋಡ್‌ ಮಾಡಿರುವ ಅಭ್ಯರ್ಥಿಗಳಿಗೆ ತಕ್ಷಣ ಬದಲಿ ಫೋಟೋ ತಲುಪಿಸುವಂತೆ ಮೆಸೇಜ್‌ ಮಾಡಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವವರು ಸ್ವೀಕೃತಿ ಪ್ರತಿ ಮತ್ತು ಶಿಕ್ಷಣ ಸಂಸ್ಥೆಯು ನೀಡಿರುವ ಗುರುತಿನಚೀಟಿ ತೋರಿಸಿ ಬಸ್‌ಗಳಲ್ಲಿ ಸಂಚರಿಸಬಹುದು.
– ವಿ. ಪೊನ್ನುರಾಜ್‌,  ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ

– ವಿಜಯಕುಮಾರ ಚಂದರಗಿ
 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.