ಧರ್ಮಗ್ರಂಥಗಳ ಅಧ್ಯಯನ ಅವಶ್ಯ: ಶ್ರೀ
Team Udayavani, Apr 28, 2019, 3:00 AM IST
ಬೆಂಗಳೂರು: ಸನಾತನ ಧರ್ಮ ಹಾಗೂ ಧರ್ಮ ಗ್ರಂಥಗಳು ಮನುಷ್ಯನ ಆತ್ಮಸ್ಥೈರ್ಯ ಇಮ್ಮಡಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಸುರಾನ ಶಿಕ್ಷಣ ಸಂಸ್ಥೆ ಆಯೋಜಿಸಿದ್ದ “ಬೆಳ್ಳಿ ಹಬ್ಬ ಆಚರಣೆ ಹಾಗೂ “2ನೇ ಪಾರದರ್ಶಕ ನಾಯಕತ್ವ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ’ ಉದ್ಘಾಟಿಸಿ ಮಾತನಾಡಿದರು.
ಸನಾತನ ಧರ್ಮ ರಾಮಾಯಣ, ಮಹಾಭಾರತ, ವೇದ, ಉಪನಿಷತ್ತುಗಳ ಮಾರ್ಗದಂತೆ ನಡೆಯುತ್ತಿದೆ. ಇವುಗಳ ಅಧ್ಯಯನದಿಂದ ಮನುಷ್ಯನ ಆತ್ಮಶಕ್ತಿ ಹಾಗೂ ಚಿಂತನೆಗಳನ್ನು ಇಮ್ಮಡಿಗೊಳಿಸುತ್ತವೆ ಎಂದರು.
ದೈನಂದಿನ ನಿರ್ವಹಣೆಯಲ್ಲಿ ಯೋಗ, ಆಧ್ಯಾತ್ಮಿಕತೆ, ರಾಜನೀತಿ, ಶಿಕ್ಷಣ ನೀತಿ, ಅರ್ಥಶಾಸ್ತ್ರ, ಸತ್ಯ ಧರ್ಮ ಪಾಲನೆ, ಆಸ್ತಿಕ ಭಾವ, ತಾಳ್ಮೆ ಅಗತ್ಯತೆ ಹೆಚ್ಚಾಗಬೇಕಿದೆ. ಪ್ರತಿಯೊಬ್ಬರಿಗೆ ತನ್ನದೇ ಆದ ಕರ್ತವ್ಯಗಳಿರುತ್ತವೆ.
ಬದುಕಿನಲ್ಲಿ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವ ಮೂಲಕ ಆ ಕರ್ತವ್ಯಗಳನ್ನು ಯಶಸ್ವಿಯಾಗಿ ಪೂರೈಸಬಹುದು. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕರಲ್ಲಿರುವ ಸೃಜನಾತ್ಮಕತೆ ಹಾಗೂ ಅವರಲ್ಲಿರುವ ಹೊಸ ಆಲೋಚನೆಗಳನ್ನು ಸದುಪಯೋಗಪಡಿಸಿಕೊಳ್ಳುತ್ತಿಲ್ಲ ಎಂದು ಬೇಸರಿಸಿದರು.
ಇದೇ ವೇಳೆ ಬೆಳ್ಳೆ ಹಬ್ಬ ಆಚರಣೆ ಅಂಗವಾಗಿ ಕಾಫಿ ಟೇಬಲ್ ಪುಸ್ತಕ ಬಿಡುಗಡೆಗೊಳಿಸಲಾಯಿತು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ಅವರಿಗೆ ಜಿ.ಸಿ.ಸುರಾನಾ ಪ್ರಶಸ್ತಿ ಹಾಗೂ ಇಸ್ರೋ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್ರಿಗೆ ಜಿ.ಸಿ.ಸುರಾನಾ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು