ಸಬ್‌ಅರ್ಬನ್‌ ಬೋಗಿಗಳೂಇಲ್ಲೇ ನಿರ್ಮಾಣವಾಗಲಿ


Team Udayavani, Feb 15, 2018, 11:06 AM IST

suburban-trains.jpg

ಬೆಂಗಳೂರು: ಬಹುನಿರೀಕ್ಷಿತ ಉಪನಗರ ರೈಲು ಯೋಜನೆಗೆ ಅಗತ್ಯ ವಿರುವ ಬೋಗಿಗಳು ಬಿಇಎಂಎಲ್‌ ನಲ್ಲೇ ನಿರ್ಮಾಣ ಗೊಳ್ಳಬೇಕು. ಈ ಸಂಬಂಧ ರೈಲ್ವೆ ಸಚಿವರ ಮನವೊ ಲಿಸಲಾಗುವುದು ಎಂದು ಕೇಂದ್ರ ಸಚಿವ ಅನಂತಕುಮಾರ್‌ ತಿಳಿಸಿದರು.

ನಗರದಲ್ಲಿ ಬುಧವಾರ ನಡೆದ ಮೆಟ್ರೋ ಬೋಗಿಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿ, ಉಪನಗರ ರೈಲುಗಳಿಗೆ ಅಗತ್ಯವಿರುವ ಬೋಗಿಗಳ ನಿರ್ಮಾಣದ ಹೊಣೆಯನ್ನೂ ಬಿಇಎಂಎಲ್‌ಗೆ ವಹಿಸಬೇಕು. ಈ ಸಂಬಂಧ ರೈಲ್ವೆ ಸಚಿವ ಪಿಯೂಷ್‌ ಘೋಯಲ್‌ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು. ಅಷ್ಟೇ ಅಲ್ಲ, ಮುಂದಿನ ಒಂದು ತಿಂಗಳಲ್ಲಿ ಈ ಇಬ್ಬರೂ ಸಚಿವರನ್ನು ಬಿಇಎಂಎಲ್‌ ಗೆ ಕರೆತರಲಾಗುವುದು. ಈ ನಿಟ್ಟಿನಲ್ಲಿ ನಾನು ಬಿಇಎಂಎಲ್‌ ರಾಯಭಾರಿ ಯಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಭರವಸೆ ಸಚಿವ ಅನಂತಕುಮಾರ್‌ ಭರವಸೆ ನೀಡಿದರು. 

ಕೇವಲ ಉಪನಗರ ರೈಲುಗಳ ಬೋಗಿಗಳಲ್ಲ; ಇತರೆ ಎಲ್ಲ ರೈಲುಗಳ ಬೋಗಿಗಳನ್ನೂ ಇಲ್ಲಿಯೇ ತಯಾರಿಸಬೇಕು ಎಂದು ಅಭಿಪ್ರಾಯಪಟ್ಟ ಅವರು, “ನಮ್ಮ ಮೆಟ್ರೋ’ದ ಎಲ್ಲ ಬೋಗಿಗಳೂ ಬಿಇಎಂಎಲ್‌ನಲ್ಲಿ ನಿರ್ಮಾಣಗೊಳ್ಳಬೇಕು. ರೈಲು ಬೋಗಿಗಳನ್ನು ಹೊರದೇಶಗಳಿಗೆ ರಫ್ತುಮಾಡುವ ಸಾಮರ್ಥ್ಯವೂ ನಿಗಮಕ್ಕೆ ಇದೆ. ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಹೇಳಿದರು. 

ಬಿಇಎಂಎಲ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಿ.ಕೆ. ಹೋಟಾ ಮಾತನಾಡಿ, “ಮೆಟ್ರೋ ಬೋಗಿಗಳ ಜೊತೆಗೆ ವಾರ್ಷಿಕ 800 ವಿವಿಧ ಪ್ರಕಾರದ ರೈಲ್ವೆ ಬೋಗಿಗಳನ್ನು ನಿರ್ಮಿಸುವ ಸಾಮರ್ಥ್ಯ ನಿಗಮಕ್ಕಿದೆ. ಹಾಗೊಂದು ವೇಳೆ, ನಮಗೆ ಗುತ್ತಿಗೆ ನೀಡಿದರೆ, ಉಪನಗರ ರೈಲಿಗೆ ಸಂಬಂಧಿಸಿದ ಬೋಗಿಗಳನ್ನು ಸಕಾಲದಲ್ಲಿ ಪೂರೈಸಲು ಸಿದ್ಧ,’ ಎಂದು ಸ್ಪಷ್ಟಪಡಿಸಿದರು.

ರೈಲ್ವೆ ಸಚಿವರ ಮನವೊಲಿಸುವ ಭರವಸೆ ನೀಡಿದ ಕೇಂದ್ರ ಸಚಿವ ಅನಂತಕುಮಾರ್‌

ಭೂಸ್ವಾಧೀನದ ಅರ್ಧ ಹಣ ಭರಿಸಿ ಉಪನಗರ ರೈಲು ಯೋಜನೆಯ ಭೂಸ್ವಾಧೀನ ಪರಿಹಾರದಲ್ಲಿ ಕೇಂದ್ರ ಶೇ.50ರಷ್ಟು ವೆಚ್ಚ ಭರಿಸಬೇಕು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಮನವಿ ಮಾಡಿದರು. “ಉಪನಗರ ರೈಲು ಯೋಜನೆಯ ಶೇ.50ರಷ್ಟು ವೆಚ್ಚವನ್ನು ಭರಿಸಲು ಕೇಂದ್ರ ಒಪ್ಪಿದೆ. ಆದರೆ, ಯೋಜನೆಗೆ ಸುಮಾರು ನೂರು ಎಕರೆ ಭೂಮಿಯ ಅವಶ್ಯಕತೆ ಇದೆ.
ಭೂಸ್ವಾಧೀನಕ್ಕೆ ಅಂದಾಜು 2,075 ಕೋಟಿ ರೂ. ವೆಚ್ಚವಾಗಲಿದೆ. 

ಇದರಲ್ಲಿ ಅರ್ಧ ಹಣವನ್ನು ಕೇಂದ್ರ ಭರಿಸಿದರೆ, ರಾಜ್ಯದ ಮೇಲಿನ ಹೊರೆ ಮತ್ತಷ್ಟು ಕಡಿಮೆ ಆಗಲಿದೆ ಎಂದರು. ರಾಜ್ಯ ಸರ್ಕಾರ ಈಗಾಗಲೇ ಯೋಜನೆಗೆ 370 ಕೋಟಿ ರೂ. ಮೀಸಲಿಟ್ಟಿದೆ. ವಿಶೇಷ ಉದ್ದೇಶಿತ ವಾಹನ (ಎಸ್‌ಪಿವಿ) ಅನುಷ್ಠಾನಕ್ಕೂ ಸಹಿ ಹಾಕಲಾಗಿದೆ. ಈಗ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿ, ಎಸ್‌ಪಿವಿ ಅನುಷ್ಠಾನಗೊಳಿಸಬೇಕು  ಎಂದು ಮನವಿ ಮಾಡಿದರು.

ಕೇಂದ್ರ ಸಚಿವ ಅನಂತಕುಮಾರ್‌ ಪ್ರತಿಕ್ರಿಯಿಸಿ, “ಕೇಂದ್ರ ಸರ್ಕಾರ ಈಗಾಗಲೇ ಬಜೆಟ್‌ನಲ್ಲಿ ಯೋಜನೆ ಘೋಷಿಸಿದೆ. ಈಗ ಕೇಂದ್ರ ಸ್ಥಾಯಿ ಸಮಿತಿ ಸಭೆಗಳು, ಬಜೆಟ್‌ ಅಧಿವೇಶನ, ಹಣಕಾಸು ಮಸೂದೆಗೆ ಅನುಮೋದನೆ ಮತ್ತಿತರ ಪ್ರಕ್ರಿಯೆಗಳು ಪೂರ್ಣಗೊಳ್ಳಬೇಕು. ಇದೆಲ್ಲದಕ್ಕೂ ಏಪ್ರಿಲ್‌ವರೆಗೆ ಸಮಯ ಬೇಕಾಗುತ್ತದೆ. ತದನಂತರ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ, ಎಸ್‌ ಪಿವಿ ಸೇರಿದಂತೆ ಯೋಜನೆ ರೂಪುರೇಷೆ ಸಿದ್ಧಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು. 

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.