ಸಬ್‌ಅರ್ಬನ್‌ ಡೆಮು ಸಂಚಾರ ಶುರು


Team Udayavani, Aug 19, 2017, 11:14 AM IST

sub-urban.jpg

ಬೆಂಗಳೂರು: ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್‌ ನಡುವೆ ಬಹುನಿರೀಕ್ಷಿತ “ಡೆಮು’ ರೈಲು ಸೇವೆಗೆ ಶುಕ್ರವಾರ ಚಾಲನೆ ದೊರೆಯಿತು. “ನಮ್ಮ ಮೆಟ್ರೋ’ ಕಾಮಗಾರಿ ಹಿನ್ನೆಲೆಯಲ್ಲಿ ಉಂಟಾಗಿರುವ ಸಂಚಾರದಟ್ಟಣೆ ಸಮಸ್ಯೆ ನಿವಾರಣೆಗಾಗಿ ವೈಟ್‌ಫೀಲ್ಡ್‌ನಿಂದ ನಗರಕ್ಕೆ ವಿಶೇಷ ರೈಲು ಸೇವೆಗಾಗಿ ಒತ್ತಾಯ ಕೇಳಿಬಂದಿತ್ತು. ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ರೈಲು ಸೇವೆಗೆ ಚಾಲನೆ ನೀಡಲಾಯಿತು. 

ಅತ್ತ ಹುಬ್ಬಳ್ಳಿಯಲ್ಲಿ ರೈಲ್ವೆ ಸಚಿವ ಸುರೇಶ್‌ ಪ್ರಭು ಹುಬ್ಬಳ್ಳಿಯಲ್ಲಿ ವೀಡಿಯೊ ಕಾನ್ಫರೆನ್ಸ್‌ ವಿವಿಧ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಂತೆ, ಬೈಯಪ್ಪನಹಳ್ಳಿಯಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತಕುಮಾರ್‌, ಸಂಸದರಾದ ಪಿ.ಸಿ. ಮೋಹನ್‌, ಪ್ರೊ.ಎಂ.ವಿ. ರಾಜೀವ್‌ಗೌಡ, ಶಾಸಕ ಬೈರತಿ ಬಸವರಾಜು, “ಡೆಮು’ (ಡೀಸೆಲ್‌ ಎಲೆಕ್ಟ್ರಿಕಲ್‌ ಮಲ್ಟಿಪಲ್‌ ಯೂನಿಟ್‌) ರೈಲಿಗೆ ಹಸಿರು ನಿಶಾನೆ ತೋರಿಸಿದರು. 

ರೈಲ್ವೆ ಬೋರ್ಡ್‌ ಎದುರು ಡಿಪಿಆರ್‌
ರೈಲಿಗೆ ಹಸಿರು ನಿಶಾನೆ ತೋರಿ ಮಾತನಾಡಿದ ಕೇಂದ್ರ ಸಚಿವ ಅನಂತಕುಮಾರ್‌, ಹೊಸೂರು-ಬೈಯಪ್ಪನಹಳ್ಳಿ ಮತ್ತು ಯಶವಂತಪುರ-ಬೈಯಪ್ಪನಹಳ್ಳಿ-ಚನ್ನಸಂದ್ರ ನಡುವೆ ಕೂಡ ಇದೇ ಮಾದರಿಯಲ್ಲಿ ರೈಲು ಸೇವೆ ಆರಂಭಿಸುವ ಅವಶ್ಯಕತೆ ಇದೆ. ಇದರಿಂದ ಮೊದಲ ಹಂತದ ಸಬ್‌ಅರ್ಬನ್‌ ಸೇವೆ ನಗರದ ನಾಗರಿಕರಿಗೆ ಸಿಕ್ಕಂತಾಗುತ್ತದೆ ಎಂದು ಹೇಳಿದರು. 

54 ಕಿ.ಮೀ. ಉದ್ದದ ಹೊಸೂರು-ಬೈಯಪ್ಪನಹಳ್ಳಿ ಮಾರ್ಗದ ಜೋಡಿ ಹಳಿಗಳ ನಿರ್ಮಾಣ, ವಿದ್ಯುದ್ದೀಕರಣ ಮತ್ತು ಅಟೋಮೆಟಿಕ್‌ ಸಿಗ್ನಲ್‌ಗ‌ಳ ಅಳವಡಿಕೆಗೆ ಸಂಬಂಧಿಸಿದಂತೆ “ಸಮಗ್ರ ಯೋಜನಾ ವರದಿ’ (ಡಿಪಿಆರ್‌) ಪೂರ್ಣಗೊಂಡಿದ್ದು, ವರದಿಯನ್ನು ರೈಲ್ವೆ ಮಂಡಳಿಗೆ ಕಳುಹಿಸಲಾಗಿದೆ ಎಂದು ತಿಳಿಸಿದರು. ಸಬ್‌ಅರ್ಬನ್‌ ರೈಲು ನಿರ್ವಹಣಾ ಕಾರ್ಯಗಳಿಗೆ 40 ಎಕರೆ ಭೂಮಿಯ ಅವಶ್ಯಕತೆ ಇದೆ. ಇದು ಬಾಣಸವಾಡಿಯ ಎನ್‌ಜಿಇಎಫ್ ಬಳಿ ಲಭ್ಯವಿದ್ದು, ಈ ಭೂಮಿ ಕಲ್ಪಿಸಲು ರಾಜ್ಯ ಸರ್ಕಾರ ಮನಸ್ಸು ಮಾಡಬೇಕು ಎಂದು ಮನವಿ ಮಾಡಿದರು. 

ಮುಂಬೈ ಮಾದರಿಯಲ್ಲಿ ಸಬ್‌ಅರ್ಬನ್‌ ರೈಲ್ವೆ ಜಾಲ ವಿಸ್ತರಿಸಲು “ಬಿ-ರೈಡ್‌’ (ಬೆಂಗಳೂರು ರೈಲ್ವೆ ಇನ್‌ಫ್ರಾಸ್ಟ್ರಕ್ಚರ್‌ ಡೆವಲಪ್‌ಮೆಂಟ್‌ ಎಂಟರ್‌ಪ್ರೈಸಸ್‌) ವಿಶೇಷ ಉದ್ದೇಶಕ್ಕಾಗಿ ನಿಗಮ ಸ್ಥಾಪಿಸಬೇಕು. ಅದರಡಿ ಯೋಜನೆ ಕೈಗೆತ್ತಿಕೊಳ್ಳಬೇಕು. ಇದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲುದಾರಿಕೆ ಇರಬೇಕು. ಇದಕ್ಕೆ ಕೇಂದ್ರದ ಇನ್ನಷ್ಟು ಅನುದಾನ, ಪ್ರೋತ್ಸಾಹದ ಅವಶ್ಯಕತೆ ಇದೆ.

ಈ ನಿಟ್ಟಿನಲ್ಲಿ ರೈಲ್ವೆ ಸಚಿವರೊಂದಿಗೆ ಚರ್ಚಿಸಲು ಸಿದ್ಧ ಎಂದರು. ಕೆ.ಜೆ. ಜಾರ್ಜ್‌ ಮಾತನಾಡಿ, ಸಬ್‌ಅರ್ಬನ್‌ ಯೋಜನೆ ಅನುಷ್ಠಾನಕ್ಕೆ ಕೇಂದ್ರ ರೂಪಿಸಿರುವ ನೀತಿ ಸಮಾಧಾನಕರವಾಗಿಲ್ಲ. ದೆಹಲಿ, ಮುಂಬೈನಲ್ಲಿ ಕೇಂದ್ರ ಸರ್ಕಾರವೇ ಸಬ್‌ಅರ್ಬನ್‌ ಜಾರಿಗೊಳಿಸಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ರಾಜ್ಯದ ಮೇಲೆ ಹೊರೆ ಹಾಕುತ್ತಿರುವುದು ಸರಿ ಅಲ್ಲ ಎಂದು ಬೇಸರ ವ್ಯಕ್ತಪಡಿಸಿದರು.  

ಪ್ರೊ.ಎಂ.ವಿ. ರಾಜೀವ್‌ಗೌಡ ಮಾತನಾಡಿ, ಸಬ್‌ಅರ್ಬನ್‌ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ರೂಪಿಸಿರುವ ನೀತಿ ತೃಪ್ತಿಕರವಾಗಿಲ್ಲ ಎಂದರು. ಕಾರ್ಯಕ್ರಮದಲ್ಲಿ ಶಾಸಕರಾದ ಎಸ್‌. ರಘು, ನಾರಾಯಣಸ್ವಾಮಿ, ಪಾಲಿಕೆ ಸದಸ್ಯೆ ರೇಖಾ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಆರ್‌.ಎಸ್‌. ಸಕ್ಸೇನಾ ಉಪಸ್ಥಿತರಿದ್ದರು. 

ಬೆಂಗಳೂರು ನಗರದ ವರೆಗೆ ವಿಸ್ತರಿಸಲು ಆಗ್ರಹ 
ವೈಟ್‌ಫೀಲ್ಡ್‌-ಬೈಯಪ್ಪನಹಳ್ಳಿ ನಡುವಿನ ಡೆಮು ರೈಲು ಸೇವೆಯನ್ನು ಕಂಟೋನ್‌ಮೆಂಟ್‌ ಅಥವಾ ಹೆಬ್ಟಾಳದವರೆಗೆ ವಿಸ್ತರಣೆ ಹಾಗೂ ಸೇವೆಗಳನ್ನು ಹೆಚ್ಚಿಸಬೇಕು ಎಂಬ ಒತ್ತಾಯ ಇದೇ ವೇಳೆ ಕೇಳಿಬಂತು.  ಸಂಸದ ಪಿ.ಸಿ. ಮೋಹನ್‌ ಮಾತನಾಡಿ, ಬೆಳಿಗ್ಗೆ ಬೈಯಪ್ಪನಹಳ್ಳಿಯಿಂದ ಹೊರಡುವ ರೈಲು, ಸಂಜೆ ವೈಟ್‌ಫೀಲ್ಡ್‌ನಿಂದ ಬೈಯಪ್ಪನಹಳ್ಳಿಗೆ ವಾಪಸ್‌ ಆಗುತ್ತದೆ. ಕೊನೆಪಕ್ಷ ಇದು ಎರಡು-ಮೂರು ಬಾರಿಯಾದರೂ ಹೋಗಿ-ಬರುವಂತಾಗಬೇಕು ಎಂದು ಒತ್ತಾಯಿಸಿದರು. 

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ಥಳೀಯರು, “ಕೇವಲ ಬೈಯಪ್ಪನಹಳ್ಳಿಗೆ ಈ ಸೇವೆ ಸೀಮಿತವಾಗಿದೆ. ನಗರಕ್ಕೆ ತೆರಳಲು ಮತ್ತೆ ಬಸ್‌ ಅಥವಾ ಮೆಟ್ರೋ ಏರಬೇಕು. ಹಾಗಾಗಿ, ಈ ಪ್ರಯಾಣ ಜನರಿಗೆ ದುಬಾರಿ ಆಗಲಿದೆ. ಕಂಟೋನ್‌ಮೆಂಟ್‌ ರೈಲು ನಿಲ್ದಾಣ ಅಥವಾ ಹೆಬ್ಟಾಳದವರೆಗೆ ಇದನ್ನು ವಿಸ್ತರಿಸಬೇಕು. ಇದರಿಂದ ಹೆಚ್ಚು ಪ್ರಯಾಣಿಕರಿಗೆ ಅನುಕೂಲ ಆಗಲಿದೆ. ಅಷ್ಟೇ ಅಲ್ಲ, ಸಂಜೆ 7ರ ನಂತರ ಈ ಮಾರ್ಗದಲ್ಲಿ ರೈಲು ಸೇವೆಯೇ ಇಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು. 

ಘೋಷಣೆಗಳ ಪೈಪೋಟಿ
ಡೆಮು ರೈಲು ಸೇವೆ ಚಾಲನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌-ಬಿಜೆಪಿ ಪಕ್ಷಗಳ ಕಾರ್ಯಕರ್ತರು ಘೋಷಣೆಗಾಗಿ ಪೈಪೋಟಿಗಿಳಿದರು. ವೇದಿಕೆಯಲ್ಲಿ ಎರಡೂ ಪಕ್ಷಗಳ ನಾಯಕರಿದ್ದರು. ಅದೇ ರೀತಿ, ಕಾರ್ಯಕ್ರಮದಲ್ಲಿ ಆಯಾ ನಾಯಕರ ಬೆಂಬಲಿಗರೂ ಇದ್ದರು. ಮಾತಿಗಿಳಿದ ಅತಿಥಿಗಳು, ವೇದಿಕೆಯಲ್ಲಿದ್ದ ನಾಯಕರ ಹೆಸರು ಪ್ರಸ್ತಾಪಿಸುತ್ತಿದ್ದಂತೆ ಬೆಂಬಲಿಗರು ಮತ್ತು ಕಾರ್ಯಕರ್ತರು ಪಕ್ಷ ಹಾಗೂ ನಾಯಕರ ಪರ ಘೋಷಣೆ ಹಾಕಿದರು. 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.