ಆಸ್ತಿ ವಿವರ ಸಲ್ಲಿಕೆ ಸರ್ಕಾರಿ ನೌಕರರಿಗೂ ಅನ್ವಯ


Team Udayavani, Jan 4, 2018, 6:45 AM IST

Lokayukta-03.jpg

ಬೆಂಗಳೂರು: ಲೋಕಾಯುಕ್ತ ನಿಯಮಗಳಿಗೆ ತಿದ್ದುಪಡಿ ಮಾಡುವ ಮೂಲಕ ಆಸ್ತಿ ವಿವರ ಸಲ್ಲಿಸುವ ವೇಳೆ ಸರ್ಕಾರಿ ಸೇವಕರ ಜತೆಗೆ ಅವರ ಅವಲಂಬಿತರ ಆಸ್ತಿ ವಿವರಗಳನ್ನು ಸಲ್ಲಿಸಬೇಕು ಎಂದು ಸರ್ಕಾರ ತೀರ್ಮಾನಿಸಿದ್ದರೂ ಸರ್ಕಾರಿ ನೌಕರರು ಕೂಡ ಅದರ ವ್ಯಾಪ್ತಿಗೆ ಬರಲಿದ್ದಾರೆ.

ಸರ್ಕಾರಿ ನೌಕರರು ಅವರ ಇಲಾಖೆ ಮುಖ್ಯಸ್ಥರಿಗೆ ತಮ್ಮ ಆಸ್ತಿ ವಿವರ ಸಲ್ಲಿಸುತ್ತಾರೆ. ಈ ಸಂದರ್ಭದಲ್ಲಿ ಸರ್ಕಾರಿ ನೌಕರರು ತನ್ನ ಆಸ್ತಿ ವಿವರ ಮಾತ್ರ ಸಲ್ಲಿಸುತ್ತಾರೆ. ಕುಟುಂಬ ಸದಸ್ಯರು ಅಥವಾ ಅವಲಂಬಿತರ ಆಸ್ತಿ ವಿವರ ಸಲ್ಲಿಸುವುದಿಲ್ಲ. ಹೀಗಾಗಿ ಸರ್ಕಾರಿ ಸೇವಕರು ಆಸ್ತಿ ವಿವರ ಸಲ್ಲಿಸುವ ಕುರಿತಂತೆ ಇದ್ದ “ಕರ್ನಾಟಕ ಲೋಕಾಯುಕ್ತ ನಿಯಮಗಳು-1985ರ ನಿಯಮ 7ರಡಿ ನಿಗದಿಪಡಿಸಿರುವ ನಮೂನೆ-4ಕ್ಕೆ ತಿದ್ದುಪಡಿ’ಯಲ್ಲಿ ಸರ್ಕಾರಿ ನೌಕರರು ಕೂಡ ಸರ್ಕಾರಿ ಸೇವಕರು ಎಂದು ಪರಿಗಣಿಸಿ ಅವರನ್ನು ಸೇರ್ಪಡೆ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಸರ್ಕಾರಿ ಸೇವಕರು ಎಂದರೆ ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಮತ್ತು ಸರ್ಕಾರಿ ನೌಕರರು ಎಂದು ವ್ಯಾಖ್ಯಾನಿಸಲಾಗಿದೆ. ಜನಪ್ರತಿನಿಧಿಗಳಲ್ಲಿ ಶಾಸಕರು (ವಿಧಾನಸಭೆ ಮತ್ತು ವಿಧಾನ ಪರಿಷತ್‌ ಸದಸ್ಯರು) ಲೋಕಾಯುಕ್ತರಿಗೆ ತಮ್ಮ ಆಸ್ತಿ ವಿವರ ಸಲ್ಲಿಸಿದರೆ, ಸರ್ಕಾರಿ ನೌಕರರು ತಮ್ಮ ಇಲಾಖಾ ಮುಖ್ಯಸ್ಥರಿಗೆ ಆಸ್ತಿ ವಿವರ ಸಲ್ಲಿಸುತ್ತಾರೆ. ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸುವಾಗ ಪತಿ/ಪತ್ನಿ ಮತ್ತು ಮಕ್ಕಳ ಆಸ್ತಿ ವಿವರ ಸಲ್ಲಿಸುತ್ತಾರಾದರೆ ಸರ್ಕಾರಿ ನೌಕರರು ತಮ್ಮ ಆಸ್ತಿ ವಿವರ ಮಾತ್ರ ಸಲ್ಲಿಸುತ್ತಾರೆ.
ಇದೀಗ ಹೊಸ ತಿದ್ದುಪಡಿಯಂತೆ ಶಾಸಕರು ಲೋಕಾಯುಕ್ತರಿಗೆ ಆಸ್ತಿ ವಿವರ ಸಲ್ಲಿಸುವಂತೆ ಸರ್ಕಾರಿ ನೌಕರರು ಕೂಡ ತಮ್ಮ ಆಸ್ತಿ ವಿವರ ಸಲ್ಲಿಸುವಾಗ ಜತೆಗೆ ಪತಿ/ಪತ್ನಿ, ಮಕ್ಕಳು, ತಂದೆ-ತಾಯಿಯರ ಆಸ್ತಿ ವಿವರವನ್ನೂ ಇಲಾಖಾ ಮುಖ್ಯಸ್ಥರಿಗೆ ಸಲ್ಲಿಸಬೇಕಾಗುತ್ತದೆ. ಅದಕ್ಕಾಗಿ ಆಸ್ತಿ ವಿವರ ಸಲ್ಲಿಸುವ ನಮೂನೆ ನಾಲ್ಕರಲ್ಲಿ ಸರ್ಕಾರಿ ನೌಕರರ ಜತೆಗೆ ಪತಿ/ಪತ್ನಿ, ಮಕ್ಕಳು, ತಂದೆ-ತಾಯಿಯರ ಕಲಂಗಳನ್ನೂ ಸೇರಿಸಲಾಗಿದೆ.

ಯಾವಾಗ ಉಪಯೋಗಕ್ಕೆ ಬರುತ್ತದೆ?:
ಸರ್ಕಾರಿ ನೌಕರರು ಪ್ರತಿ ವರ್ಷ ಆಸ್ತಿ ವಿವರ ಸಲ್ಲಿಸುತ್ತಾರಾದರೂ ಅದರಲ್ಲಿ ಆಗುವ ಹೆಚ್ಚಳ ಮತ್ತಿತರೆ ಅಂಶಗಳನ್ನು ಯಾರೂ ಗಮನಿಸುವುದಿಲ್ಲ. ಆದರೆ, ಲೋಕಾಯುಕ್ತ ಅಥವಾ ಎಸಿಬಿ ಅಧಿಕಾರಿಗಳು ಸರ್ಕಾರಿ ನೌಕರರ ಮನೆ ಮೇಲೆ ದಾಳಿ ನಡೆಸಿದಾಗ ಸಿಗುವ ಆಸ್ತಿಯಲ್ಲಿ ಅಕ್ರಮ ಆಸ್ತಿ ಎಷ್ಟು ಎಂಬುದನ್ನು ತಿಳಿದುಕೊಳ್ಳಲು ಆ ನೌಕರ ಇಲಾಖೆ ಮುಖ್ಯಸ್ಥರಿಗೆ ನೀಡಿದ ಆಸ್ತಿ ವಿವರ ತರಿಸಿಕೊಂಡು ಪರಿಶೀಲಿಸುತ್ತಾರೆ. ಅದರಲ್ಲಿರುವ ಆಸ್ತಿ ವಿವರಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದರೆ ಅದನ್ನು ಅಕ್ರಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ನೌಕರರ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಮಾತ್ರ ಅದು ಅನುಕೂಲಕ್ಕೆ ಬರುತ್ತದೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.