15 ದಿನಗಳೊಳಗೆ ಕ್ರಿಯಾ ಯೋಜನೆ ಸಲ್ಲಿಸಿ: ಡಿಸಿಎಂ
Team Udayavani, Jan 20, 2021, 12:50 AM IST
ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯ, ಕಾಲೇಜುಗಳ ನ್ಯಾಕ್ ಮಾನ್ಯತೆ, ಎನ್ಐಆರ್ಎಫ್ ರ್ಯಾಂಕ್ ಪಡೆಯುವ ಸಂಬಂಧ 15 ದಿನದೊಳಗೆ ಕ್ರಿಯಾ ಯೋಜನೆ ಸಲ್ಲಿಸುವಂತೆ ಎಲ್ಲ ಕುಲಪತಿಗಳಿಗೆ ಉಪ ಮುಖ್ಯಮಂತ್ರಿಯಾದ ಉನ್ನತ ಶಿಕ್ಷಣ ಸಚಿವ ಡಾ| ಸಿ. ಎನ್. ಅಶ್ವತ್ಥನಾರಾಯಣ ನಿರ್ದೇಶನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸರಕಾರದ ಎಲ್ಲ ವಿಶ್ವವಿದ್ಯಾನಿಲಯಗಳ ಕುಲಪತಿಗಳ ಸಭೆ ನಡೆಸಿ ಸಚಿವರು ಈ ಸೂಚನೆ ನೀಡಿದರು.
ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯು ಎನ್ಐಆರ್ಎಫ್ ರ್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಮೈಸೂರು ವಿವಿ-27, ಬೆಂಗಳೂರು ವಿವಿ-68, ಶಿವಮೊಗ್ಗದ ಕುವೆಂಪು ವಿವಿ-73 ಹಾಗೂ ಬೆಳಗಾವಿಯ ವಿಟಿಯು-80ನೇ ಸ್ಥಾನದಲ್ಲಿವೆ. ಮುಂದಿನ ಬಾರಿ ರ್ಯಾಂಕಿಂಗ್ ಪಟ್ಟಿ ಸಿದ್ಧವಾಗುವ ಹೊತ್ತಿಗೆ ಮೈಸೂರು ವಿವಿ-20ರೊಳಗೆ ಹಾಗೂ ಬೆಂಗಳೂರು ವಿವಿ 50 ರೊಳಗಿನ ಸ್ಥಾನಕ್ಕೆ ಬರಬೇಕು. ವಿಟಿಯು ಕೂಡ ಉತ್ತಮ ಸ್ಥಾನಕ್ಕೆ ಬರಬೇಕು. ತುಮಕೂರು ಮತ್ತು ಮಂಗಳೂರು ವಿವಿಗಳು 150ರೊಳಗಿವೆ. ಉಳಿದ ಯಾವ ವಿವಿಗೂ ಈ ರ್ಯಾಂಕ್ ಸಿಕ್ಕಿಲ್ಲ ಎಂದರು.
3 ವಿವಿಗಳಿಗೆ ಅರ್ಹತೆಯೇ ಇಲ್ಲ :
ರಾಜ್ಯದ ಸರಕಾರಿ ಸ್ವಾಮ್ಯದ 19 ವಿವಿಗಳ ಪೈಕಿ ಎನ್ಐಆರ್ಎಫ್ ರ್ಯಾಂಕಿಂಗ್ ಪಟ್ಟಿಯಲ್ಲಿ ಎ-ಅದಕ್ಕಿಂತ ಮೇಲ್ಪಟ್ಟು ಸ್ಥಾನದಲ್ಲಿ 6 ವಿವಿ, ಬಿ-ಸಿ ಹಂತದಲ್ಲಿ 4 ವಿವಿಗಳಿದ್ದರೆ, ಮಾನ್ಯತೆ ಪಡೆದ 9 ವಿವಿಗಳಿವೆ. ಉಳಿದಂತೆ ಇನ್ನೆರಡು ವಿವಿಗಳು ಅರ್ಜಿ ಹಾಕಿವೆ. 3 ವಿವಿಗಳು ಎನ್ಐಆರ್ಎಫ್ ರ್ಯಾಂಕಿಂಗ್ಗೆ ಅರ್ಹತೆಯನ್ನೇ ಹೊಂದಿಲ್ಲ ಎಂದು ಡಾ| ಅಶ್ವತ್ಥನಾರಾಯಣ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ