ಜಾಗೃತಿ ಗೀತೆ ರಚಿಸಿದ ಸುಬ್ರಹ್ಮಣ್ಯಗೆ ಬಹುಮಾನ
Team Udayavani, Aug 23, 2018, 11:19 AM IST
ಬೆಂಗಳೂರು: ಸರಗಳ್ಳರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ವಿಡಿಯೋ ಗೀತೆ ರಚಿಸಿದ್ದ ಬೈಯ ಪ್ಪನಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಸುಬ್ರಹ್ಮಣ್ಯ ಶಾನುಭೋಗ ಅವರ ಕಾರ್ಯಕ್ಕೆ ಇಲಾಖೆಯ ಉನ್ನತ ಅಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದೇ ವೇಳೆ ನಗರವನ್ನು ಕಾಡುತ್ತಿರುವ “ಡ್ರಗ್ ಮಾಫಿಯಾ’ ಕುರಿತು ಜಾಗೃತಿ ವಿಡಿಯೋ ಗೀತೆ ಒಂದನ್ನು ರಚಿಸುವಂತೆ ನಗರ ಪೊಲೀಸ್ ಆಯುಕ್ತರು ಸುಬ್ರಹ್ಮಣ್ಯ ಅವರಿಗೆ ಸೂಚಿಸಿದ್ದಾರೆ.
ಸುಬ್ರಹ್ಮಣ್ಯ ಅವರೇ ಜಾಗೃತಿ ಗೀತೆ ರಚಿಸಿ ಹಾಡಿದ ಕುರಿತು “ಉದಯವಾಣಿ’ ವರದಿ ಪ್ರಕಟಿಸಿತ್ತು. ಬಳಿಕ ಸುಬ್ರಹ್ಮಣ್ಯ ಅವರ ಕಾರ್ಯ ವನ್ನು ಮುಕ್ತ ಕಂಠದಿಂದ ಶ್ಲಾಘಿಸಿರುವ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ಕುಮಾರ್, ಸುಬ್ರಹ್ಮಣ್ಯ ಅವರಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡಿ ಅಭಿನಂದಿಸಿದ್ದಾರೆ. ಜತೆಗೆ ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಗಳ ಕುರಿತ ವಿಡಿಯೋ ಗೀತೆ ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.
ನಗರ ಪೊಲೀಸ್ ಆಯುಕ್ತರು, ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಕಾರ್ಯೋನ್ಮುಖರಾಗಿರುವ ಸುಬ್ರಹ್ಮಣ್ಯ, ಇದೀಗ ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಗೀತೆ ರಚಿಸಲು ಸಿದ್ಧತೆ ನಡೆಸಿದ್ದಾರೆ.
ರಾಜಧಾನಿಗೆ ಪಿಡುಗಾಗಿ ಪರಿಣಮಿಸಿರುವ “ಡ್ರಗ್ ಮಾಫಿಯಾ’ ಕುರಿತು ಜನರಲ್ಲಿ, ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸಾಮಾಜಿಕ ಸಂದೇಶವುಳ್ಳ ಗೀತೆ ರಚಿಸಿ ವಿಡಿಯೋ ಸಿದ್ಧಪಡಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸುಬ್ರಹ್ಮಣ್ಯ ಅವರಿಗೆ ಸೂಚಿಸಿದ್ದಾರೆ. ಮುಖ್ಯವಾಗಿ ಮಾದಕ ವಸ್ತು ಮಾರಾಟಗಾರರ ಕಾರ್ಯಶೈ ಲಿ, ಮಾದಕ ವಸ್ತು ಸೇವನೆಗೆ ದಾಸರಾಗಿ ಸಂಕಷ್ಟಕ್ಕೆ ಸಿಲುಕುವುದು, ಬಳಿಕ ವ್ಯಸನ ಮುಕ್ತ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವಂತಾಗುವುದು, ಹೀಗೆ ಎಲ್ಲ ಆಯಾಮಗಳನ್ನು ಗೀತೆ ಒಳಗೊಂಡಿ ರಬೇಕು ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಮಾದಕ ವಸ್ತುಗಳ ಸೇವನೆಯಿಂದ ಮಕ್ಕಳನ್ನು ದೂರ ಇರಿಸುವ ಬಗ್ಗೆ ಪೋಷಕರು ವಹಿಸಬೇಕಾದ ಎಚ್ಚರಿಕೆ ಕ್ರಮಗಳು. ದಂಧೆ ನಿಯಂತ್ರಿಸಲು ಸಾರ್ವಜನಿಕರು ಪೊಲೀಸ್ ಇಲಾಖೆ ಜತೆ ಕೈ ಜೋಡಿಸುವ ಅವಕಾಶಗಳು. ಶಾಲೆ, ಕಾಲೇಜುಗಳು ವಹಿಸಬೇಕಾದ ಕ್ರಮಗಳ ಬಗ್ಗೆಯೂ ಗೀತೆಯಲ್ಲಿ ಮಾಹಿತಿ ಇರಲಿದೆ ಎನ್ನಲಾಗಿದೆ.
ಇಲಾಖೆಯಿಂದಲೇ ವೆಚ್ಚ: ಮಾದಕ ವಸ್ತು ಮಾರಾಟ ಜಾಲದ ಬಗ್ಗೆ ಸುಬ್ರಹ್ಮಣ್ಯ ಅವರು ಸಿದ್ಧಪಡಿಸುವ ವಿಡಿಯೋ ಗೀತೆಯ ಚಿತ್ರೀಕರಣ, ಆಡಿಯೋ ರೆಕಾರ್ಡಿಂಗ್ ಸೇರಿ ಎಲ್ಲ ವೆಚ್ಚವನ್ನು ನಗರ ಪೊಲೀಸ್ ವಿಭಾಗವೇ ಭರಿಸಲಿದೆ. ಅಲ್ಲದೆ, ಈ ಗೀತೆಯನ್ನು ಇಲಾಖೆ ವತಿಯಿಂದಲೇ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಉದಯವಾಣಿ ವಿಶೇಷ ವರದಿ ಪ್ರಕಟಿಸಿತ್ತು
ನಗರದ ಜನತೆಗೆ ತಲೆನೋವಾಗಿ ಪರಿಣಮಿಸಿರುವ ಸರಗಳ್ಳರ ಹಾವಳಿ, ಕಳ್ಳರ ಅಪರಾಧ ಶೈಲಿ, ಸಾರ್ವಜನಿಕರು ವಹಿಸಬೇಕಾದ ಜಾಗರೂಕತೆ ಕುರಿತು ಸುಬ್ರಹ್ಮಣ್ಯ ಅವರು ಸಾಹಿತ್ಯ ಬರೆದು ಸ್ವತಃ ಹಾಡಿದ ವಿಡಿಯೋ ಗೀತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಕುರಿತು ಆ.20 ರಂದು “ಸರಗಳ್ಳರಿದ್ದಾರೆ ಜೋಕೆ; ನೀವು ಹುಷಾರಾ ಗಿದ್ರೆ ಓಕೆ’ ಎಂಬ ಶೀರ್ಷಿಕೆಯಡಿ “ಉದಯವಾಣಿ’ ವಿಶೇಷ ವರದಿ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.