ಸಬ್‌ ಅರ್ಬನ್‌ ಶುರುವಾತಿಗೆ ಸಕಾಲ!


Team Udayavani, Dec 12, 2017, 12:24 PM IST

sub-urban.jpg

ಬೆಂಗಳೂರು: ಚುನಾವಣೆ ಹತ್ತಿರಾಗುತ್ತಿರುವ ಕಾರಣ ಈಗ ಕಾಮಗಾರಿಗಳ ಪರ್ವ. ನಮ್ಮ ಮೆಟ್ರೋ, ವೈಟ್‌ಟಾಪಿಂಗ್‌, ಸಿಗ್ನಲ್‌ ಫ್ರೀ ಕಾರಿಡಾರ್‌, ಮೇಲ್ಸೇತುವೆ ಸೇರಿ ಹತ್ತಾರು ಅಭಿವೃದ್ಧಿ ಕೆಲಸಗಳು ನಗರದ ಮೂಲೆ ಮೂಲೆಯನ್ನೂ ಆವರಿಸಿವೆ. ಹೀಗೆ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಸಂಚಾರ ದಟ್ಟಣೆ ತೀವ್ರವಾಗಿದೆ. ಹೀಗಾಗಿ ಟ್ರಾಫಿಕ್‌ ಕಿರಿಕಿರಿ ಅನುಭವಿಸುತ್ತಿರುವ ಜನರಿಗೆ ತಕ್ಷಣವೇ ಪರ್ಯಾಯ ಕಲ್ಪಿಸಲು ಒಂದು ಅವಕಾಶವಿದೆ. ಅದುವೇ ಉಪನಗರ ರೈಲು ಸೇವೆ.

ಹೌದು, ಸಬ್‌ ಅರ್ಬನ್‌ ರೈಲು ಸೇವೆ ವಿಸ್ತರಣೆಗೆ ಇದು ಸಕಾಲ. ರೈಲ್ವೆ ಅಧಿಕಾರಿಗಳು ಮನಸು ಮಾಡಿದರೆ, ತಕ್ಷಣದಿಂದಲೇ 8ರಿಂದ 10 ಉಪನಗರ ರೈಲುಗಳ ಸೇವೆ ಆರಂಭಿಸಬಹುದು. ಇದಕ್ಕೆ ಅಗತ್ಯ ಸೌಕರ್ಯಗಳೂ ಇವೆ. ವೈಟ್‌ಫೀಲ್ಡ್‌ ಸೇರಿ ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರದೇಶಗಳಿಗೆ ಇದು ಪರಿಹಾರವಾಗಬಲ್ಲದು ಎಂಬುದು ರೈಲ್ವೆ ಹೋರಾಟಗಾರರ ವೇದಿಕೆ ಅಭಿಪ್ರಾಯ.

ಈಗಾಗಲೇ ಬಹುನಿರೀಕ್ಷಿತ ಬೆಂಗಳೂರು-ಮೈಸೂರು ರೈಲು ಮಾರ್ಗಗಳ ವಿದ್ಯುದೀಕರಣ ಮುಗಿದಿದೆ. ಹೆಚ್ಚುವರಿ ಬೋಗಿಗಳು ಬಂದಿರುವ ಕಾರಣ ಬೋಗಿಗಳ ಕೊರತೆಯಿಲ್ಲ. ಪ್ರತ್ಯೇಕ ಸಬ್‌ ಅರ್ಬನ್‌ ಟರ್ಮಿನಲ್‌ ಪ್ಲಾಟ್‌ಫಾರಂ ಕೂಡ ಸಿದ್ಧವಿದೆ. ಈ ಅವಕಾಶಗಳ ಬಳಸಿಕೊಂಡು ರೈಲುಗಳ ಸೇವೆ ಹೆಚ್ಚಿಸಿದರೆ ಲಕ್ಷಾಂತರ ಜನರಿಗೆ ಅನುಕೂಲವಿದೆ.

ಪರ್ಯಾಯಗಳಿವು: ಚೆನ್ನೈ-ಮೈಸೂರು ಶತಾಬ್ದಿ, ಚೆನ್ನೈ-ಮೈಸೂರು ಕಾವೇರಿ ಎಕ್ಸ್‌ಪ್ರೆಸ್‌, ತಿರುಪತಿ-ಮೈಸೂರು ಪ್ಯಾಸೆಂಜರ್‌ ಸೇರಿ ನಿತ್ಯ ವೈಟ್‌ಫೀಲ್ಡ್‌ ಮಾರ್ಗವಾಗಿ ನಾಲ್ಕೈದು ರೈಲುಗಳು ನಗರಕ್ಕೆ ಬರುತ್ತವೆ. ಎಲೆಕ್ಟ್ರಿಕ್‌ ಎಂಜಿನ್‌ ಹೊಂದಿರುವ ಈ ರೈಲುಗಳು ಮೈಸೂರಿಗೆ ತೆರಳುವಾಗ ಬೆಂಗಳೂರಿನಲ್ಲಿ ಡೀಸೆಲ್‌ ಎಂಜಿನ್‌ಗೆ ಪರಿವರ್ತನೆ ಆಗಲು ಒಂದೊಂದು ರೈಲು ಕನಿಷ್ಠ ಅರ್ಧಗಂಟೆ ಕಾಯಬೇಕಿತ್ತು.

ಪ್ರಸ್ತುತ ಮೈಸೂರು ಮಾರ್ಗ ವಿದ್ಯುದೀಕರಣಗೊಂಡಿರುವ ಕಾರಣ ಆ ಕಿರಿಕಿರಿ ಇಲ್ಲ. ಇದಕ್ಕೆ ಪೂರಕವಾಗಿ ಹಾಲಿ ಇರುವ ಮೆಮು ಬೋಗಿಗಳನ್ನು ಬಳಸಿಕೊಂಡು, ವೈಟ್‌ಫೀಲ್ಡ್‌ಗೆ ಮೆಮು ರೈಲು ಸೇವೆ ಹೆಚ್ಚಿಸಲು ಅವಕಾಶವಿದೆ. “ವೈಟ್‌ಫೀಲ್ಡ್‌ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಾರಣ, ಭಾರಿ ಸಂಚಾರ ದಟ್ಟಣೆಯಾಗುತ್ತಿದ್ದು, ರೈಲು ಸೇವೆ ವಿಸ್ತರಿಸುವ ಅಗತ್ಯವಿದೆ. ಪ್ರಸ್ತುತ ಈ ಮಾರ್ಗದಲ್ಲಿ ಎಂಟು ರೈಲುಗಳ ಸೇವೆಯಿದೆ,’  ಎಂದು ಪ್ರಜಾ ರಾಗ್‌ ಸದಸ್ಯ ಸಂಜೀವ ದ್ಯಾಮಣ್ಣವರ ತಿಳಿಸುತ್ತಾರೆ.

ಸೇವೆ ವಿಸ್ತರಣೆಗೆ ಒತ್ತಾಯ: “ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಪ್ಲಾಟ್‌ಫಾರಂನಲ್ಲಿ ನಿಲ್ಲುವ ಬೆಂಗಳೂರು-ಹಿಂದೂಪುರ ರೈಲಿನ ಬೋಗಿಗಳನ್ನು ಬೆಂಗಳೂರು-ರಾಮನಗರ-ಚನ್ನಪಟ್ಟಣಕ್ಕೆ ವಿಸ್ತರಿಸಬಹುದು. ಈ ಮಾರ್ಗದಲ್ಲೂ ಮೆಟ್ರೋ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, ಹೆಚ್ಚುವರಿ ರೈಲು ಸೇವೆಯಿಂದ ಟ್ರಾಫಿಕ್‌ ಕಿರಿಕಿರಿ ತಪ್ಪುತ್ತದೆ,’ ಎನ್ನುತ್ತಾರೆ ದ್ಯಾಮಣ್ಣವರ.

ಮೈಸೂರಿಗೆ ವಿಸ್ತರಣೆ?: “ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಪ್ಯಾಸೆಂಜರ್‌ ಮತ್ತು ಎಕ್ಸ್‌ಪ್ರೆಸ್‌ ರೈಲುಗಳನ್ನು ಎಲೆಕ್ಟ್ರಿಕ್‌ ರೈಲುಗಳಾಗಿ ಪರಿವರ್ತಿಸುವುದು ನಮ್ಮ ಮೊದಲ ಆದ್ಯತೆ. ಬೆಂಗಳೂರು-ರಾಮನಗರ ನಡುವೆ ಇರುವ ಉಪನಗರ ರೈಲು ಸೇವೆಯನ್ನು ಮೈಸೂರಿನವರೆಗೆ ವಿಸ್ತರಿಸುವ ಚಿಂತನೆ ಇದೆ. ಈಚೆಗೆ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್‌ ನಡುವೆ ಈಚೆಗೆ ಒಂದು ರೈಲು ಸೇವೆ ಆರಂಭಿಸಿದ್ದು, ಇದರ ಪ್ರಗತಿ ಗಮನಿಸಿ ಹಂತ ಹಂತವಾಗಿ ಸೇವೆ ವಿಸ್ತರಿಸುವುದಾಗಿ ನೈರುತ್ಯ ರೈಲ್ವೆ ಉಪ ಪ್ರಧಾನ ವ್ಯವಸ್ಥಾಪಕಿ ಇ. ವಿಜಯಾ ಹೇಳುತ್ತಾರೆ.

ಪ್ರಸ್ತುತ ಸೇವೆಗಳು: ಪ್ರಸ್ತುತ ಬೆಂಗಳೂರಿನಿಂದ ತುಮಕೂರಿಗೆ 3, ಹೊಸೂರಿಗೆ 3, ವೈಟ್‌ಫೀಲ್ಡ್‌ಗೆ 8, ರಾಮನಗರಕ್ಕೆ 4 ರೈಲುಗಳ ಸೇವೆ ಲಭ್ಯವಿದೆ. ಬೆಳಗಿನಜಾವ ಬೆಂಗಳೂರಿನಿಂದ ಮತ್ತು ತಡರಾತ್ರಿ ರಾಮನಗರದಿಂದ ಕಾರ್ಯಾಚರಣೆ ಮಾಡುವ ರೈಲಿಗೆ ಅಷ್ಟೇನೂ ಬೇಡಿಕೆಯಿಲ್ಲ. ಹಾಗೇ ತುಮಕೂರು-ಬೆಂಗಳೂರು ನಡುವೆ ಸಂಜೆ 6ರ ನಂತರ ರೈಲು ಸೇವೆಯೇ ಇಲ್ಲ. 

ಫ‌ಲನೀಡಿದ ಒಪ್ಪಂದ: ರಾಜ್ಯ ಸರ್ಕಾರ ಮತ್ತು ರೈಲ್ವೆ ಇಲಾಖೆ ನಡುವೆ 2017ರ ಜನವರಿಯಲ್ಲಿ ಬೋಗಿಗಳ ಖರೀದಿ, ಸಿಗ್ನಲ್‌ಗ‌ಳನ್ನು ಮೇಲ್ದರ್ಜೆಗೇರಿಸುವುದೂ ಸೇರಿ ಹಲವು ಯೋಜನೆಗಳ ಅನುಷ್ಠಾನಕ್ಕೆ ಒಪ್ಪಂದವಾಗಿತ್ತು. ಈ ಒಪ್ಪಂದದಡಿ ಈಗಾಗಲೇ ಬೋಗಿಗಳ ಖರೀದಿ ಆಗಿದೆ.

ಇದಕ್ಕೆ ರಾಜ್ಯ ಸರ್ಕಾರ ರೈಲ್ವೆ ಇಲಾಖೆಯಲ್ಲಿ ಹಣ ಠೇವಣಿ ಇಡಲಿದ್ದು, ಪ್ರತಿಯಾಗಿ ಬೋಗಿಗಳನ್ನು ತಯಾರಿಸುವುದು, ಸೇವೆ, ಪ್ರಯಾಣ ದರ, ಅದರಿಂದಾಗಬಹುದಾದ ಲಾಭ-ನಷ್ಟ ಸೇರಿದಂತೆ ಎಲ್ಲವನ್ನೂ ರೈಲ್ವೆ ಇಲಾಖೆ ನೋಡಿಕೊಳ್ಳುತ್ತದೆ. ಪ್ರಸ್ತುತ ಎರಡು ತಿಂಗಳಲ್ಲಿ 3 ಬೋಗಿಗಳ ಖರೀದಿಯಾಗಿದೆ.

ಹಾಗೇ ಒಡಂಬಡಿಕೆ ಭಾಗವಾಗಿ ಕಂಟೋನ್ಮೆಂಟ್‌ ರೈಲು ನಿಲ್ದಾಣದಿಂದ ವೈಟ್‌ಫೀಲ್ಡ್‌ ನಡುವಿನ ಸಿಗ್ನಲ್‌ಗ‌ಳ ಅಟೋಮೇಷನ್‌ ಕಾರ್ಯ ಚುರುಕಾಗಬೇಕು ಎಂಬ ಒತ್ತಾಯ ರೈಲ್ವೆ ಹೋರಾಟಗಾರರಿಂದ ಕೇಳಿಬರುತ್ತಿದೆ. ಈ ಮಧ್ಯೆ ಉಪನಗರ ರೈಲು ಯೋಜನೆ ಸಂಬಂಧ ಎಸ್‌ಪಿವಿ (ವಿಶೇಷ ಉದ್ದೇಶ ವಾಹನ) ಸ್ಥಾಪನೆಯು ಪಾಲುದಾರಿಕೆ ಗೊಂದಲದಿಂದ ನೆನೆಗುದಿಗೆ ಬಿದ್ದಿದೆ.

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.