ಉಚಿತವಾಗಿ ಊರಿಗೆ ಕರೆದೊಯ್ದರೆ ಮೊಕದ್ದಮೆ
Team Udayavani, Apr 2, 2019, 5:00 AM IST
ಬೆಂಗಳೂರು: ಮತದಾನಕ್ಕಾಗಿ ಊರಿಗೆ ತೆರಳುವವರಿಗೆ ಬೇಕಾಬಿಟ್ಟಿ ಪ್ರಯಾಣ ದರ ವಿಧಿಸುವುದು ಮಾತ್ರವಲ್ಲ; ಪ್ರತ್ಯೇಕ ಖಾಸಗಿ ವಾಹನ ಮಾಡಿ, ಮತದಾರರನ್ನು ಉಚಿತವಾಗಿ ಕರೆದೊಯ್ಯುವುದು ಕೂಡ ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಅಂತಹ ವಾಹನಗಳ ಮಾಲಿಕರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಆಯುಕ್ತ ವಿ.ಪಿ.ಇಕ್ಕೇರಿ ಎಚ್ಚರಿಸಿದರು.
ಅತಿ ಹೆಚ್ಚು ದರ ವಿಧಿಸುವುದಕ್ಕಿಂತ ಮತದಾನಕ್ಕಾಗಿ ಜನರನ್ನು ಉಚಿತವಾಗಿ ಕರೆದೊಯ್ಯುವುದು ಗಂಭೀರ ಪ್ರಕರಣವಾಗಿದೆ. ಅಂತಹ ವಾಹನಗಳ ಮೇಲೆ ನಿಗಾ ಇಡಲು ಪ್ರತ್ಯೇಕ ಕಾರ್ಯಾಚರಣೆ ತಂಡ ರಚಿಸಲಾಗಿದೆ. ಅನುಮಾನ ಬಂದ ವಾಹನಗಳನ್ನು ತಪಾಸಣೆಗೆ ಒಳಪಡಿಸಿ, ದಂಡ ವಿಧಿಸುವುದು, ಮೊಕದ್ದಮೆ ದಾಖಲಿಸುವುದು ಸೇರಿದಂತೆ ಹಲವು ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಯಾವುದೇ ಪ್ರಕಾರದ ವಾಹನಗಳಲ್ಲಿ ಮತದಾರರನ್ನು ಉಚಿತವಾಗಿ ಕರೆದೊಯ್ಯುವುದು ಪ್ರಲೋಭನೆ ಮಾಡಿದಂತಾಗುತ್ತದೆ. ಈ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿ ಮೊಕದ್ದಮೆ ದಾಖಲಿಸಲು ಅವಕಾಶ ಇದೆ ಎಂದ ಅವರು, ಉಚಿತವಾಗಿ ಜನರನ್ನು ಕರೆದೊಯ್ದ ಪ್ರಕರಣಗಳು ಕಂಡುಬಂದರೆ ತಕ್ಷಣ ಸಾರಿಗೆ ಇಲಾಖೆಗೆ ದೂರು ಸಲ್ಲಿಸಬಹುದು ಎಂದರು.
ಬೆಂಗಳೂರಿನಿಂದ ಬೇರೆ ಬೇರೆ ಕಡೆಗೆ ಮತದಾನಕ್ಕಾಗಿ ತೆರಳುವವರ ಸಂಖ್ಯೆಯೇ ಹೆಚ್ಚಿದೆ. ಈ ಮಧ್ಯೆ ಖಾಸಗಿ ಮತ್ತು ಸರ್ಕಾರಿ ಬಸ್ಗಳನ್ನು ಈಗಾಗಲೇ ಚುನಾವಣಾ ಸೇವೆಗೆ ಪಡೆಯಲಾಗಿದೆ. ವಾಹನಗಳ ಕೊರತೆಯಿಂದ ಪ್ರಯಾಣಿಕರಿಗೆ ಅನನುಕೂಲ ಆಗಬಹುದು ಎಂದು ಇಕ್ಕೇರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ