ಭಾನುವಾರ ಜನಸಾಗರ


Team Udayavani, Jan 22, 2018, 11:54 AM IST

lal-jana.jpg

ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ 207ನೇ ಫ‌ಲಪುಷ್ಟ ಪ್ರದರ್ಶನಕ್ಕೆ ಭಾನುವಾರ ಜನಸಾಗರ ಹರಿದು ಬಂದಿದ್ದು, ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಜನರು ಭೇಟಿ ನೀಡಿ ಫ‌ಲಪುಷ್ಪ ಪ್ರದರ್ಶವನ್ನು ಕಣ್ತುಂಬಿಕೊಂಡಿದ್ದಾರೆ. 

ಶುಕ್ರವಾರ ಆರಂಭವಾದ ಫ‌ಲಪುಷ್ಪ ಪ್ರದರ್ಶನಕ್ಕೆ ವಾರಾಂತ್ಯದಲ್ಲಿ ಉತ್ತಮ ಸ್ಪಂದನೆ ಸಿಕ್ಕಿದ್ದು, ಲಾಲ್‌ಬಾಗ್‌ ಜನರಿಂದ ಕಿಕ್ಕಿರಿದಿತ್ತು. ಪ್ರದರ್ಶನಕ್ಕೆ ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದ್ದ ವಿಶೇಷವಾಗಿತ್ತು. 

ಗಾಜಿನಮನೆಗೆ ಹೋಗುವ ಎರಡೂ ಇಕ್ಕೆಲಗಳಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕೆತ್ತನೆ ಶಿಬಿರ ಆಕರ್ಷಣೀಯ ತಾಣವಾಗಿ ಮಾರ್ಪಟ್ಟಿದ್ದು, ಪ್ರದರ್ಶನಕ್ಕೆ ಬಂದವರು ಹತ್ತಾರು ನಿಮಿಷ ಮರಕ್ಕೆ ಕಲಾಕೃತಿಯ ರೂಪ ನೀಡುತ್ತಿರುವ ಕಾರ್ಯವನ್ನು ನೋಡುತ್ತಾ ನಿಂತಿದ್ದ ದೃಶ್ಯ ಸಾಮಾನ್ಯವಾಗಿತ್ತು. 

ಕೆತ್ತನೆ ಶಿಬಿರದಲ್ಲಿ ಮುಂಬೈ, ಬರೋಡ, ಶಾಂತಿಕೇತನ, ಹೈದರಾಬಾದ್‌ ಸೇರಿ ಸುಮಾರು 60ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಿದ್ದು, ಹಲವಾರು ಅಪರೂಪ ಕಲಾಕೃತಿಗಳ ಕೆತ್ತನೆಯಲ್ಲಿ ತೊಡಗಿದ್ದರು. ಲಾಲ್‌ಬಾಗ್‌ನಲ್ಲಿ ಮಳೆ-ಗಾಳಿಗೆ ಧರೆಗುರುಳಿರುವ ಸುಮಾರ 250 ವರ್ಷಗಳ ಹಳೆಯ ಮರಗಳನ್ನು ಸುಂದರ ಕಲಾಕೃತಿಗಳನ್ನಾಗಿಸುವ ಕಾರ್ಯದಲ್ಲಿ ಕಲಾವಿದರು ತೊಡಗಿದ್ದಾರೆ.

ಅದರಂತೆ ಮರಗಳಲ್ಲಿ ಗರುಡ, ಮೊಸಳೆ, ಪರಿವಾಳ, ಶ್ವಾನ, ಆನೆ ಹಾಗೂ ಧ್ಯಾನಮಗ್ನವಾಗಿರುವ ಗೌತಮ ಬುದ್ಧನ ಕಲಾಕೃತಿಗಳು ಮೂಡಿಸುತ್ತಿದ್ದ ದೃಶ್ಯ ನೋಡಲು ಪ್ರವಾಸಿಗರು ಮುಗಿಬಿದ್ದರು. 

ಮಲ್ಲಿಕಾರ್ಜುನ ಖರ್ಗೆ ಭೇಟಿ: ಸಸ್ಯಕಾಶಿಗೆ ಭಾನುವಾರ ಅಚ್ಚರಿಯ ಅತಿಥಿಯಾಗಿ ಲೋಕಸಭೆಯ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿ, ಬಾಹುಬಲಿ ಕೇಂದ್ರಿತವಾದ ಫ‌ಲಪುಷ್ಪ ಪ್ರದರ್ಶನ ಕಂಡು ಸಂತಸ ವ್ಯಕ್ತಪಡಿಸಿದರು.

ಜತೆಗೆ ಉದ್ಯಾನದ ಪ್ರತಿಯೊಂದು ಸ್ಥಳಕ್ಕೂ ಭೇಟಿ ಅಲ್ಲಿ ಅಳವಡಿಸಲಾಗಿದ್ದ ಹೂವುಗಳ ವಿಶೇಷತೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ತ್ಯಾಗಮೂರ್ತಿ ಬಾಹುಬಲಿಯನ್ನು ಕೇಂದ್ರವಾಗಿಸಿಕೊಂಡು ಫ‌ಲಪುಷ್ಪ ಪ್ರದರ್ಶನ ಏರ್ಪಡಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ಫ‌ಲಪುಷ್ಪ ಪ್ರದರ್ಶನ ಸುಂದರವಾಗಿ ಮೂಡಿಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

 ಇದೇ ಮಾದರಿಯ ಸಣ್ಣ ಸಣ್ಣ ಫ‌ಲಪುಷ್ಪ ಪ್ರದರ್ಶನಗಳನ್ನು ರಾಜ್ಯದ ಎಲ್ಲ ಕಡೆಗಳಲ್ಲಿ ಆಯೋಜಿಸಿದರೆ ಗ್ರಾಮೀಣ ಭಾಗದ ಜನರಿಗೂ ಪ್ರದರ್ಶನ ಕುರಿತು ಮಾಹಿತಿ ದೊರೆಯುತ್ತದೆ. ಆ ಮೂಲಕ ಯಾವ ರೀತಿಯ ತೋಟಗಾರಿಕಾ ಬೆಳೆಗಳು ಹಾಗೂ ಸುಲಭ ವಿಧಾನಗಳ ಮೂಲಕ ತೋಟಗಾರಿಕೆಯ ಮಾಡುವ ಕುರಿತು ಅವರಿಗೆ ಮಾಹಿತಿ ಲಭ್ಯವಾಗುತ್ತದೆ ಎಂದು ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದರು.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.