ಪತಿಯ ಕೊಲೆಗೆ ಎರಡನೇ ಪತ್ನಿಯಿಂದಲೇ ಸುಪಾರಿ!


Team Udayavani, Jul 9, 2021, 10:58 AM IST

ಪತಿಯ ಕೊಲೆಗೆ ಎರಡನೇ ಪತ್ನಿಯಿಂದಲೇ ಸುಪಾರಿ!

ಬೆಂಗಳೂರು: ಇತ್ತೀಚೆಗೆ ಕೌಟುಂಬಿಕ ವಿಚಾರಕ್ಕೆ ಟೈಲ್ಸ್‌ ಕಾರ್ಮಿಕನನ್ನು ನಡು ರಸ್ತೆಯಲ್ಲೇ ಭೀಕರವಾಗಿ ಹತ್ಯೆಗೈದಿದ್ದ ಆರು ಮಂದಿ ಆರೋಪಿಳನ್ನು ಡಿ.ಜೆ. ಹಳ್ಳಿ ಪೊಲೀಸರು ಬಂಧಿಸಿದ್ದು, ಹಂತಕರಿಗೆ ಮೃತನ ಎರಡನೇ ಪತ್ನಿಯೇ ಸುಪಾರಿ ಕೊಟ್ಟಿದ್ದಳು ಎಂಬದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಕೆ.ಜಿ. ಹಳ್ಳಿಯ ಸಮಾಧಾನ ನಗರ ನಿವಾಸಿಗಳಾದ ಆಂಥೋಣಿ, ದಿನೇಶ್‌ ಅಲಿಯಾಸ್‌ ದೀನು, ಅಜಯ್‌, ಶಿವ ಕು ಮಾರ್‌, ಸ್ಟೀಫ‌ನ್‌, ಅರುಣ್‌ ಬಂಧಿತರು.

ಆರೋಪಿಗಳು ಜು.3 ರಂದು ರಾತ್ರಿ 11 ಗಂಟೆ ಸುಮಾರಿಗೆ ಕಾವಲ್‌ ಬೈರಸಂದ್ರದ ಅಂಬೇಡ್ಕರ್‌ ಕಾಲೇಜು ಮುಂಭಾಗ ಕಾವಲ್‌ಬೈರಸಂದ್ರ ನಿವಾಸಿ ಕೃಷ್ಣಮೂರ್ತಿ (35) ಎಂಬಾತನನ್ನು ಭೀಕರವಾಗಿ ಹತ್ಯೆಗೈದಿದ್ದರು ಎಂದು ಪೊಲೀಸರು ಹೇಳಿದರು. ಸುಮಾರು ವರ್ಷಗಳಿಂದ ಟೈಲ್ಸ್‌ ಕೆಲಸ ಮಾಡಿಕೊಂಡಿದ್ದ ಕೃಷ್ಣಮೂರ್ತಿ ಕೆಲ ವರ್ ಗಳ ಹಿಂದೆ ಮೊದಲ ಪತ್ನಿ ಬಿಟ್ಟು ಹೋದ ಬಳಿಕ ಕೆ.ಜಿ. ಹಳ್ಳಿಯ ಸಮಾಧಾನ ನಗರ ನಿವಾಸಿ ರುತು ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಒಂದೂವರೆ ತಿಂಗಳ ಹಿಂದೆ ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದ್ದು, ಪತ್ನಿ ಒಂದು ಮಗುವನ್ನು ತನ್ನೊಂದಿಗೆ ತವರು ಮನೆಗೆ ಕರೆದೊಯ್ಯಿದ್ದಳು. ಮತ್ತೂಂದು ಮಗು ಕೃಷ್ಣಮೂರ್ತಿ ಬಳಿಯೇ ಇತ್ತು.

ಇದನ್ನೂ ಓದಿ:ಸಚಿವರಾದ ಬೆನ್ನಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಫೇಸ್ ಬುಕ್ ಖಾತೆ ಹ್ಯಾಕ್!

ಈ ನಡುವೆ ಕೃಷ್ಣಮೂರ್ತಿ ಮದ್ಯ ಸೇವಿಸಿ ಆಕೆಯ ತವರು ಮನೆಗೆ ಹೋಗಿ ಗಲಾಟೆ ಮಾಡಿದಲ್ಲದೆ, ಮನೆಯೊಳಗೆ ಕಲ್ಲು ಎತ್ತಿ ಹಾಕಿ ಹಲ್ಲೆ ನಡೆಸಿದ್ದ. ಅದರಿಂದ ಬೇಸರಗೊಂಡಿದ್ದ ರುತು, ಪತಿಯನ್ನು ಸರಿ ಮಾಡಲು ಸಾಕಷ್ಟು ಪ್ರಯತ್ನಿಸಿದ್ದಾಳೆ. ಆದರೂ ಕೃಷ್ಣಮೂರ್ತಿ ಬದಲಾಗಿರಲಿಲ್ಲ. ಅಲ್ಲದೆ, ನಿತ್ಯ ತವರು ಮನೆ ಬಳಿ ಬಂದು ಗಲಾಟೆ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.

2ನೇ ಪತ್ನಿಯಿಂದಲೇ ಸುಪಾರಿ: ಪತಿಯ ವರ್ತನೆಯಿಂದ ಆಕ್ರೋಶಗೊಂಡಿದ್ದ ಪತ್ನಿ ರುತು, ಅಪರಾಧ ಹಿನ್ನೆಲೆಯುಳ್ಳ ಮನೆ ಸಮೀಪದ ದಿನೇಶ್‌ನನ್ನು ಸಂಪರ್ಕಿಸಿ ಪತಿ ಕೃಷ್ಣಮೂರ್ತಿ ಹತ್ಯೆಗೆ ಐದು ತಿಂಗಳ ಹಿಂದೆಯೇ 2 ಲಕ್ಷ ರೂ. ಸುಪಾರಿ ಕೊಟ್ಟಿದ್ದಳು. ಹೀಗಾಗಿ ಆರೋಪಿ ತನ್ನ ಸಹಚರರ ಜತೆ ಸೇರಿಕೊಂಂಡು ಸತತ ಮೂರು ತಿಂಗಳ ಕಾಲ ಕೃಷ್ಣಮೂರ್ತಿ ಹತ್ಯೆಗೆ ಯತ್ನಿಸಿದ್ದಾರೆ. ಆದರೆ, ಸಾಧ್ಯವಾಗಿಲ್ಲ. ಜು. 3ರಂದು ಮದ್ಯ ಅಮಲಿನಲ್ಲಿ ಬೈಕ್‌ ನಲ್ಲಿ ಹೋಗುವಾಗ ಅಡ್ಡಗಟ್ಟಿ ಹತ್ಯೆಗೈದಿದ್ದಾರೆ. ಸುಪಾರಿ ಕೊಟ್ಟ ರುತು ಹಾಗೂ ಆಕೆಗೆ ಸಹಕಾರ ನೀಡಿದ ಆಕೆಯ ಕುಟುಂಬ ಸದಸ್ಯರು ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.