ಸೂಪರ್‌ ಸೇಲ್‌ನ ಲಕ್ಕಿಗ್ರಾಹಕರಿಗೆ ಬಹುಮಾನ


Team Udayavani, Mar 26, 2018, 1:45 PM IST

blore-7.jpg

ಬೆಂಗಳೂರು: ಗೃಹೋಪಯೋಗಿ ವಸ್ತುಗಳ ಮಾರಾಟ ಕ್ಷೇತ್ರದ ಪ್ರಮುಖ ಸಂಸ್ಥೆಯಾಗಿರುವ ಪೈ ಇಂಟರ್‌ನ್ಯಾಷನಲ್‌ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌, ಹೊಸ ವರ್ಷದ ಅಂಗವಾಗಿ ಹಮ್ಮಿಕೊಂಡಿದ್ದ ಸೂಪರ್‌ ಸೇಲ್‌ ಲಕ್ಕಿ ಗ್ರಾಹಕರಿಗೆ ಬಹುಮಾನ ವಿತರಣೆ ಮಾಡಲಾಯಿತು.

ನಗರದ ಜಯಮಹಲ್‌ ಪ್ಯಾಲೇಸ್‌ ಹೋಟೆಲಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದ ಸೂಪರ್‌ ಸೇಲ್‌ ಲಕ್ಕಿ ವಿಜೇತ ಗ್ರಾಹ ಕರಿಗೆ ಪ್ರಥಮ ಬಹುಮಾನವಾಗಿ 1 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ದ್ವಿತೀಯ ಬಹುಮಾನ ವಿಜೇತರಿಗೆ 50 ಸಾವಿರ ರೂ. ಮೌಲ್ಯದ ಚಿನ್ನ ವಿತರಿಸಲಾಯಿತು. ಪೈ ಸಹೋದರರ ಶಾಲಾ, ಕಾಲೇಜು ದಿನಗಳ ಶಿಕ್ಷಕತ್ರಯರಾದ ಫೆಡ್ರಿಕ್‌, ವಿಕ್ಟರ್‌ ಮತ್ತು ಅಮಲ್‌ ದಾಸ್‌ ಅವರು ಮುಖ್ಯ ಅಥಿತಿಗಳಾಗಿ ಭಾಗವಹಿಸಿ ವಿಜೇತರಿಗೆ ಬಹುಮಾನ ವಿತರಿಸಿದರು.

ನಂತರ ಮಾತನಾಡಿದ ಅವರು, ನೆಚ್ಚಿನ ಶಿಷ್ಯರಾದ ರಾಜ್‌ಕುಮಾರ್‌ ಪೈ, ಉತ್ತರಕುಮಾರ್‌ ಪೈ, ಗುರುಪ್ರಸಾದ್‌ ಪೈ,  ಅಜಿತ್‌ಕುಮಾರ್‌ ಪೈ ಅವರ ಶಿಸ್ತು, ಸಂಯಮ, ಹಸನ್ಮುಖತೆ ಹಾಗೂ ನಡವಳಿಕೆ ಬಗ್ಗೆ ಕೊಂಡಾಡಿದರಲ್ಲದೆ, ಪೈ ಇಂಟರ್‌ ನ್ಯಾಷನಲ್‌ ಈ ಎತ್ತರಕ್ಕೆ ಬೆಳೆಯಲು ಪೈ ಸಹೋದರರ ಈ ಗುಣಗಳೇ ಕಾರಣ ಎಂದರು. 

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ.ವಿ. ರಾಜ್‌ಕುಮಾರ್‌ ಪೈ ಮಾತನಾಡಿ, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶ ಪೈ ಇಂಟರ್‌ ನ್ಯಾಷನಲ್‌ ಮಳಿಗೆಗಳಲ್ಲಿ ಡಿಸೆಂಬರ್‌ 2017 ರಿಂದ 2018ರ ಜ. 31ರವರೆಗೆ ಅಯೋಜಿಸಿದ್ದ ಹೊಸ ವರ್ಷದ ಸೂಪರ್‌ ಮಾರಾಟದಲ್ಲಿ ಗ್ರಾಹಕರು ಖರೀದಿಸಿದ ವಸ್ತುಗಳ ಜತೆಗೆ ಲಕ್ಕಿ ಡ್ರಾ ಕೂಪನ್‌ ನೀಡಲಾಗಿತ್ತು. ಅದೃಷ್ಟ ಪರೀಕ್ಷೆಯಲ್ಲಿ ವಿಜೇತರಾದ 100 ಮಂದಿಗೆ ಪ್ರಥಮ ಬಹುಮಾನವಾಗಿ ಒಂದು ಲಕ್ಷರೂ. ಬೆಲೆಯ ಚಿನ್ನ ಹಾಗೂ 100 ಮಂದಿಗೆ 50 ಸಾವಿರ ಬೆಲೆಯ ಚಿನ್ನ ವಿತರಿಸಲಾಗಿದೆ. ಬೆಂಗಳೂರು ಭಾಗದ ವಿಜೇತರಿಗೆ ಇಂದು ಬಹುಮಾನ ವಿತರಿಸಲಾಗಿದೆ ಎಂದು ಹೇಳಿದರು. 

ಸಂಸ್ಥೆಯಿಂದ ವರ್ಷದಲ್ಲಿ ಎರಡು ಬಾರಿ ಲಕ್ಕಿ ಡ್ರಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಡಿಸೆಂಬರ್‌ ನಿಂದ ಜನವರಿ ಅಂತ್ಯದವರೆಗೆ ನ್ಯೂ ಇಯರ್‌ ಸೂಪರ್‌ ಸೇಲ್‌, ವರ್ಷಾಂತ್ಯದ ಸೆಪ್ಟೆಂಬರ್‌, ಅಕ್ಟೋ ಬರ್‌ ಮತ್ತು ಡಿಸೆಂಬರ್‌ನಲ್ಲಿ ಮೆಗಾ ಸೂಪರ್‌ ಸೇಲ್‌ ನಡೆಯುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮೀರಾ ರಾಜ್‌ಕುಮಾರ್‌ ಪೈ, ನಿವೃತ್ತ ಎಸಿಪಿ ವೆಂಕಟಸ್ವಾಮಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.