ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳಿಗೆ ಬೆಂಬಲ
Team Udayavani, Apr 4, 2019, 3:00 AM IST
ಬೆಂಗಳೂರು: ಕರ್ನಾಟಕ ಜನತಾ ರಂಗ ಪಕ್ಷವು ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ತಿಳಿಸಿದೆ.
ಈ ಬಾರಿ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು ಕೇಂದ್ರದಲ್ಲಿ ಸರ್ಕಾರ ರಚಿಸುವುದರಲ್ಲಿ ಅನುಮಾನವಿಲ್ಲ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರಾಜ್ ಮತ್ತು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಅವರಿಗೆ ಬೆಂಬಲ ಸೂಚಿಸಲು ಪಕ್ಷ ನಿರ್ಧರಿಸಿದೆ.
ಉಳಿದ ಕಡೆಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಾಗುವುದು ಎಂದು ಕರ್ನಾಟಕ ಜನತಾ ರಂಗದ ಅಧ್ಯಕ್ಷ ಸಿ.ಕೆ.ರವಿಚಂದ್ರ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸ್ವಾಮಿನಾಥನ್ ವರದಿ ಅನುಷ್ಠಾನ, ಆಹಾರ ಪದಾರ್ಥಗಳ ಮೇಲೆ ವಿಧಿಸಿಎರುವ ಜಿಎಸ್ಟಿ ರದ್ದುಗೊಳಿಸುವುದು,
ತಾಂತ್ರಿಕ ಕೋರ್ಸ್ಗಳಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಉದ್ಯೋಗ ಸೃಷ್ಟಿ ದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಮೈತ್ರಿ ಸರ್ಕಾರವನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.