ಮಕ್ಕಳ ಕಳ್ಳ ಎಂದು ಭಾವಿಸಿ ಕೂಲಿ ಕಾರ್ಮಿಕನ ಮೇಲೆ ಹಲ್ಲೆ


Team Udayavani, Aug 28, 2018, 12:46 PM IST

halle.jpg

ಬೆಂಗಳೂರು: ಮಕ್ಕಳ ಕಳ್ಳ ಎಂದು ಭಾವಿಸಿ ಮಧ್ಯಪ್ರದೇಶ ಮೂಲದ ಕೂಲಿ ಕಾರ್ಮಿಕನನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹೆಣ್ಣೂರಿನ ಸಾರಾಯಿಪಾಳ್ಯದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಕೂಲಿ ಕಾರ್ಮಿಕ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಗೊಳಗಾದ ಕಾರ್ಮಿಕ ಹಾಗೂ ಈತನ ಸಹೋದರ ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದು, ಹೆಣ್ಣೂರಿನ ಸಾರಾಯಿಪಾಳ್ಯದಲ್ಲಿ ವಾಸವಾಗಿದ್ದಾರೆ. ಇಬ್ಬರೂ ಪೇಟಿಂಗ್‌ ಕೆಲಸ ಮಾಡುತ್ತಾರೆ. ಭಾನುವಾರ ಸಂಜೆ ಕಂಠಪೂರ್ತಿ ಮದ್ಯ ಸೇವಿಸಿದ ಯುವಕ ಸಾರಾಯಿಪಾಳ್ಯದ ಮುಖ್ಯರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.

ಆ ವೇಳೆ ಮೂರು ವರ್ಷದ ಮಗುವೊಂದು ರಸ್ತೆ ಬದಿ ಅಳುತ್ತಾ ಕುಳಿತಿತ್ತು. ಮಗು ಕಂಡ ಯುವಕ, ಸಮಾಧಾನ ಮಾಡಲು ಹೋಗಿದ್ದಾನೆ. ಇದನ್ನು ಗಮನಿಸಿದ ಮಗುವಿನ ಪೋಷಕರು ಅನುಮಾನಗೊಂಡು ಪ್ರಶ್ನಿಸಿದ್ದಲ್ಲದೆ, ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲೇ ಇದ್ದ ಸಾರ್ವಜನಿಕರು ಮಕ್ಕಳ ಕಳ್ಳ ಎಂದು ಭಾವಿಸಿ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ.

ಠಾಣೆಗೆ ಕರೆತಂದು ವಿಚಾರಿಸಿದಾಗ, ಮದ್ಯದ ಅಮಲಲ್ಲಿದ್ದ ಯುವಕ, ಮಗುವನ್ನು ಮಾತನಾಡಿಸಲು ಹೋಗಿದ್ದ. ಆತ ಮಕ್ಕಳ ಕಳ್ಳನಲ್ಲ, ಕೂಲಿ ಕಾರ್ಮಿಕ ಎಂದು ಗೊತ್ತಾಗಿದೆ. ಹಲ್ಲೆಗೊಳಗಾದ ಯುವಕನ ಸಹೋದರ ಕೂಡ ಠಾಣೆಗೆ ಬಂದು ಹೇಳಿಕೆ ದಾಖಲಿಸಿದ್ದಾನೆ. ಬಳಿಕ ಇಬ್ಬರಿಗೂ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ ಎಂದು ಹೆಣ್ಣೂರು ಠಾಣೆ ಪೊಲೀಸರು ತಿಳಿಸಿದ್ದಾರೆ.

ಕೆಲ ತಿಂಗಳ ಹಿಂದೆ ಘಟನೆ: ಮೇ ತಿಂಗಳು ಚಾಮರಾಜಪೇಟೆಯಲ್ಲಿ ರಾಜಸ್ಥಾನ ಮೂಲದ ಕಾಲುರಾಮ್‌ ಬಚ್ಚನ್‌ರಾಮ್‌(26) ಎಂಬಾತನ ಮೇಲೆ ಜನರು ಮನಬಂದಂತೆ ಹಲ್ಲೆ ನಡೆಸಿ ಕೊಂದಿದ್ದರು. ಈ ಸಂಬಂಧ ಚಾಮರಾಜಪೇಟೆ ಪೊಲೀಸರು ಸುಮಾರು 15 ಹೆಚ್ಚು ಮಂದಿಯನ್ನು ಬಂಧಿಸಿದ್ದರು. ಕಾಲುರಾಮ್‌ ಉದ್ಯೋಗ ಅರಸಿಕೊಂಡು ನಗರಕ್ಕೆ ಬಂದಿದ್ದು, ಉದ್ದವಾದ ಕೂದಲು ಹಾಗೂ ಗಡ್ಡ ಬಿಟ್ಟಿದ್ದ ಎಂಬ ಕಾರಣಕ್ಕೆ ಮಕ್ಕಳ ಕಳ್ಳ ಎಂದು ಭಾವಿಸಿ ಹಲ್ಲೆ ನಡೆಸಲಾಗಿತ್ತು.

ಪೊಲೀಸರಿಂದ ಅರಿವು: ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸರು ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿ ವರ್ಧಕ ಹಾಗೂ ಕರಪತ್ರಗಳ ಮೂಲಕ, ಸಾಮಾಜಿಕ ಜಾಲತಾಣ ಫೇಸ್‌ಬುಕ್‌, ಟ್ವಿಟರ್‌ಗಳಲ್ಲಿ ಮಕ್ಕಳ ಕಳ್ಳರು ನಗರಕ್ಕೆ ಬಂದಿಲ್ಲ. ಇದು ವದಂತಿ ಅಷ್ಟೇ.

ಇದಕ್ಕೆ ಕಿವಿಗೊಡಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು. ಒಂದು ವೇಳೆ ಅಂತಹ ವ್ಯಕ್ತಿಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು. ಕಾನೂನು ಉಲ್ಲಂ ಸಬಾರದು ಎಂದು ಕಠಿಣ ಆದೇಶ ನೀಡಿದ್ದರು. ಆದರೂ ಇಂತಹ ಘಟನೆ ನಡೆದಿರುವುದು ಪೊಲೀಸರಲ್ಲಿ ತಲೆನೋವು ತಂದಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.