ಟರ್ಫ್ ಕ್ಲಬ್‌ ಯಥಾಸ್ಥಿತಿಗಾಗಿ ಸುಪ್ರೀಂ ಮೊರೆ


Team Udayavani, Nov 22, 2019, 10:06 AM IST

bng-tdy-2

ಬೆಂಗಳೂರು: ನಗರದ ಹೃದಯ ಭಾಗದ ಟರ್ಫ್ ಕ್ಲಬ್‌ ಅನ್ನು ಡಿ.2ರ ನಂತರ ಸ್ಥಗಿತಗೊಳಿಸಲು ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಶಿಫಾರಸ್ಸು ಮಾಡಿದೆ. ಆದರೆ, ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿರುವುದರಿಂದ ಪ್ರಕರಣ ಇತ್ಯರ್ಥವಾಗುವವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರದ ಅಡ್ವೊಕೇಟ್‌ ಜನರಲ್‌ ಅವರೇ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿಕೊಂಡಿರುವ ಮಾಹಿತಿ ಬೆಳಕಿಗೆ ಬಂದಿದೆ.

2009ರಲ್ಲೇ ರೇಸ್‌ಕೋರ್ಸ್‌ಗೆ ನೀಡಿದ್ದ ಗುತ್ತಿಗೆ ಅವಧಿ ಮುಕ್ತಾಯವಾಗಿದ್ದರಿಂದ ಅದನ್ನು ವಾಪಸ್‌ ಪಡೆದುಕೊಳ್ಳಲು ಸರ್ಕಾರ ಮುಂದಾಗಿದ್ದಾಗ ಟರ್ಫ್  ಕ್ಲಬ್‌ನವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಆ ವೇಳೆ ರಾಜ್ಯ ಸರ್ಕಾರದ ಅಡ್ವೋಕೆಟ್‌ ಜನರಲ್‌ ಅಶೋಕ್‌ ಹಾರ್ನಳ್ಳಿ ಅವರು 2010 ರ ಸೆ.7 ರಂದು ಸುಪ್ರೀಂ ಕೋರ್ಟ್‌ ದ್ವಿಸದಸ್ಯ ಪೀಠದ ಎದುರು ರಾಜ್ಯ ಸರ್ಕಾರದ ಪರ ಹಾಜರಾಗಿ ಈ ಪ್ರಕರಣ ಇತ್ಯರ್ಥವಾಗುವವರೆಗೂ ಉಭಯ ಕಕ್ಷಿದಾರರು ಯಥಾ ಸ್ಥಿತಿ ಕಾಯ್ದುಕೊಳ್ಳುತ್ತಾರೆ ಎಂದು ಕೋರ್ಟ್‌ಗೆ ಹೇಳಿಕೆ ನೀಡಿದ್ದರು.

ಅಡ್ವೋಕೆಟ್‌ ಜನರಲ್‌ ಅವರು ಸುಪ್ರೀಂ ಕೋರ್ಟ್‌ಗೆ ಮಾಡಿಕೊಂಡ ಮನವಿ ಪ್ರತಿ “ಉದಯವಾಣಿ’ಗೆ ಲಭ್ಯವಾಗಿದೆ. ಟರ್ಫ್ ಕ್ಲಬ್‌ ಪ್ರಕರಣ ಇತ್ಯರ್ಥವಾಗುವವರೆಗೂ ರಾಜ್ಯ ಸರ್ಕಾರವೇ ಯಥಾ ಸ್ಥಿತಿ ಕಾಯ್ದುಕೊಳ್ಳುವ ಬಗ್ಗೆ ಸುಪ್ರಿಂ ಕೋರ್ಟ್‌ ಮುಂದೆ ಹೇಳಿಕೆ ನೀಡಿರುವುದನ್ನು ಎಚ್‌. ಕೆ.ಪಾಟೀಲ್‌ ನೇತೃತ್ವದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಗಮನಿಸಿದ್ದು, ಈ ಬಗ್ಗೆ ಕಳೆದ 9 ವರ್ಷಗಳಿಂದ ಕಾನೂನು ಇಲಾಖೆ ತಡೆಯಾಜ್ಞೆ ತೆರವುಗೊಳಿಸಲು ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಡಿ.2 ರೊಳಗೆ ಸುಪ್ರೀಂ ಕೋರ್ಟ್‌ನಲ್ಲಿನ ತಡೆಯಾಜ್ಞೆ ತೆರವಿಗೆ ವಿಶೇಷ ವಕೀಲರನ್ನು ನೇಮಿಸುವಂತೆ ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ.

ಅಧಿಕಾರಿಗಳ ಮಟ್ಟದಲ್ಲೇ ತೀರ್ಮಾನ: ರಾಜ್ಯ ಸರ್ಕಾರ ಟರ್ಫ್ ಕ್ಲ ಬ್‌ಗ ನೀಡಿದ ಗುತ್ತಿಗೆ ಅವಧಿ 1989ಕ್ಕೆ ಅಂತ್ಯವಾಗಿತ್ತು. ಆ ನಂತರ 1995ರವರೆಗೆ ಲೋಕೋಪಯೋಗಿ ಇಲಾಖೆ ಯಾಗಲಿ, ಸರ್ಕಾರವಾಗಲಿ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯವನ್ನು 2005 ರಲ್ಲಿ ಅಂದಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಕೆ.ಎಸ್‌.ಈಶ್ವರಪ್ಪ ನೇತೃತ್ವದ ಸಮಿತಿ ಗಂಭೀರ ಪರಿಗಣಿಸಿ, ಸರ್ಕಾರದ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು.

1998ರಲ್ಲಿ ಟರ್ಫ್ ಕ್ಲಬ್‌ಗ ಮಾಸಿಕ 30 ಲಕ್ಷ ರೂ. ಬಾಡಿಗೆ ನಿಗದಿಪಡಿಸಬಹುದೆಂದೂ ಲೋಕೋಪಯೋಗಿ ಇಲಾಖೆ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೇ ಶೇ.50 ಬಾಡಿಗೆ ಹೆಚ್ಚಿಸಲು ಶಿಫಾರಸು ಮಾಡಿದೆ. ಆದರೆ, 1998 ಆ.19ರಂದು ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಕಚೇರಿಯಲ್ಲಿ ಅಧಿಕಾರಿಗಳೇ ಸಭೆ ನಡೆಸಿ, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ವಾರ್ಷಿಕ 10 ಲಕ್ಷ ರೂ.ಗಳಂತೆ 10 ವರ್ಷಗಳವರೆಗೆ ಬಾಡಿಗೆ ತೆಗೆದುಕೊಳ್ಳಲು ತೀರ್ಮಾನ ಕೈಗೊಂಡಿದ್ದಾರೆ. ಲೋಕೋಪಯೋಗಿ ಸಚಿವರು ಹಾಗೂ ಯಾವುದೇ ಸಚಿವರ ಗಮನಕ್ಕೆ ತಾರದೇ ಅಧಿಕಾರಿಗಳೇ ತೀರ್ಮಾನ ತೆಗೆದುಕೊಂಡಿರುವುದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಗಮನಕ್ಕೆ ಬಂದಿದ್ದು, ಅಧಿಕಾರಿಗಳ ಈ ನಿರ್ಧಾರದಿಂದ ವಾರ್ಷಿಕ 7.5 ಕೋಟಿಯಂತೆ 67.50 ಕೋಟಿ ರೂ. ನಷ್ಟವಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಿದರೂ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದನ್ನು ಪಿಎಸಿ ಬೆಳಕಿಗೆ ತಂದಿದೆ. ಕಳೆದ 13 ವರ್ಷಗಳಿಂದ ಟಫ್ì ಕ್ಲಬ್‌ ಬಗ್ಗೆ ಅಧಿಕಾರಿಗಳು ಯಾವುದೇ ಮಾಹಿತಿಯನ್ನು ಸಾರ್ವಜನಿಕ ಲೆಕ್ಕ ಪತ್ರ ಸಮಿತಿಗೆ ನೀಡದೇ ಮೌನ ವಹಿಸಿದ್ದು, ಸಮಿತಿ ಅಧಿಕಾರಿಗಳ ಮೌನದ ಬಗ್ಗೆ ಪ್ರಶ್ನೆ ಮಾಡಿದೆ. ಇದರ ಹಿಂದಿರುವ ಕೈಗಳ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದಾರೆನ್ನಲಾಗಿದೆ.

 

-ಶಂಕರ ಪಾಗೋಜಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.