ಜೂನ್ ಅಂತ್ಯದೊಳಗೆ ಕೆರೆಗಳ ವಿಸ್ತೀರ್ಣ ಸರ್ವೆ ಮಾಡಿ ತಂತಿಬೇಲಿ ಹಾಕಿ
Team Udayavani, May 27, 2017, 12:47 PM IST
ಬೆಂಗಳೂರು: ಜೂನ್ ಅಂತ್ಯದೊಳಗಾಗಿ ಮಹದೇವಪುರ ವಲಯದ ನೆಲ್ಲೂರಹಳ್ಳಿ, ಸಿದ್ದಾಪುರ ಹಾಗೂ ಶೀಲವಂತ ಕೆರೆಗಳ ಸರ್ವೆ ನಡೆಸಿ ತಂತಿಬೇಲಿ ಆಳವಡಿಸುವಂತೆ ಅಧಿಕಾರಿಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಆದೇಶಿಸಿದ್ದಾರೆ.
ಶುಕ್ರವಾರ ವೈಟ್ಫೀಲ್ಡ್ ವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲಿಸಿದ ನಂತರ ಸ್ಥಳೀಯರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಮೂರು ಕೆರೆಗಳು ಸಂಪೂರ್ಣವಾಗಿ ಕಲುಷಿತಗೊಂಡಿದ್ದು, ಹೆಚ್ಚಿನ ಪ್ರಮಾಣದ ತ್ಯಾಜ್ಯ ಸುರಿಯಲಾಗುತ್ತಿದೆ ಎಂದು ಆರೋಪಿಸಿದರು.
ಇದಕ್ಕೆ ಸ್ಪಂದಿಸಿದ ಜಾರ್ಜ್ ಅವರು, ಮೂರು ಕೆರೆ ಪ್ರದೇಶಗಳಲ್ಲಿ ತ್ಯಾಜ್ಯ ಸುರಿಯುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜತೆಗೆ ಜೂನ್ ವೇಳೆಗೆ ಕೆರೆಯ ಅಳತೆಯನ್ನು ಸರ್ವೆ ನಡೆಸಿ ತಂತಿಬೇಲಿ ಅಳವಡಿಕೆಗೆ ಮುಂದಾಗಬೇಕು ಎಂದರು.
ವಿಬ್ಗಯಾರ್ ರಸ್ತೆ ಮತ್ತು ನಾರಾಯಣಪುರ ರಸ್ತೆಗಳ ವಿಸ್ತರಣೆಯ ಕುರಿತು ಪಾಲಿಕೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ರಸ್ತೆ ವಿಸ್ತರಣೆಗೆ ಹೆಚ್ಚುವರಿ ಜಾಗದ ಅಗತ್ಯವಿದ್ದು, ಭೂ ಸ್ವಾಧೀನ ಪ್ರಕ್ರಿಯೆ ವಿಳಂಬವಾಗಿದೆ ಎಂದ ಅವರು, ಪಾಲಿಕೆಯ ವಿಶೇಷ ಆಯುಕ್ತರಿಗೆ, ಟಿ.ಡಿ.ಆರ್ಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿ ಜೂನ್ ಅಂತ್ಯದೊಳಗೆ ಕಾಮಗಾರಿ ಪ್ರಾರಂಭಿಸುವಂತೆ ಆದೇಶಿಸಿದರು.
ಪಾಲಿಕೆಯಿಂದ ಹೋಪ್ ಫಾರ್ಮ್ ಬಳಿ ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆಗೆ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ವಿಳಂವಾಗುವ ಬಗ್ಗೆ ಸ್ಥಳೀಯರ ಪ್ರಶ್ನೆಗೆ ಉತ್ತರಿಸಿದ ಜಾರ್ಜ್, ಉಂಟಾಗಿರುವ ಸಮಸ್ಯೆಗಳನ್ನು ಅತ್ಯಂತ ಶೀಘ್ರವಾಗಿ ಬಗೆಹರಿಸಿ ಏಕಕಾಲದಲ್ಲಿ ಹೂಡಿ, ಕುಂದಲಹಳ್ಳಿ ಹಾಗೂ ಹೋಪ್ ಫಾರ್ಮ್ ಸ್ಥಳಗಳಲ್ಲಿ ಕಾಮಗಾರಿ ಆರಂಭಿಸಬೇಕು ಎಂದು ಆದೇಶಿಸಿದರು.
ಪಾಲಿಕೆಯಿಂದ ಹೊಸದಾಗಿ ಚಾಲನೆ ನೀಡಿರುವ ಸ್ವಯಂ ಚಾಲಿತ ರಸ್ತೆ ಗುಡಿಯುವ ಯಂತ್ರಗಳಲ್ಲಿ ಒಂದು ಯಂತ್ರವನ್ನು ಮಹದೇವಪುರ ಭಾಗದಲ್ಲಿನ ಸ್ವತ್ಛತಾ ಕಾರ್ಯಕ್ಕೆ ನಿಯೋಜನೆ ಮಾಡಬೇಕು ಎಂದು ಮನವಿ ಮಾಡಿದರು. ಅದಕ್ಕೆ ಸ್ಪಂದಿಸಿದ ಸಚಿವರು, ಕೆಲವೇ ದಿನಗಳಲ್ಲಿ ಯಂತ್ರ ಕಾರ್ಯಾರಂಭ ಮಾಡಲಿದ್ದು, ವಾಹನ ನಿಲುಗಡೆ ಸ್ಥಳ ನಿಯೋಜನೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ ಮಾತನಾಡಿದ ಅವರು, ಸಂವಾದ ಸಭೆಯಲ್ಲಿ ಕೈಗೊಂಡಿರುವ ನಿರ್ಣಯಗಳು ಹಾಗೂ ಅಧಿಕಾರಿಗಳಿಗೆ ನೀಡಲಾಗಿರುವ ಆದೇಶಗಳ ಕುರಿತು 45 ದಿನಗಳ ನಂತರ ಮತ್ತೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು. ಸಂವಾದದಲ್ಲಿ ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಆರ್ಷದ್, ಪಾಲಿಕೆ ವಿಶೇಷ ಆಯುಕ್ತ (ಹಣಕಾಸು) ಮನೋಜ್ ಕುಮಾರ್ ಸೇರಿದಂತೆ ಪ್ರಮುಖರು ಹಾಜರಿದ್ದರು.
ಬೆಳ್ಳಂದೂರು ಬಳಿ ನಿರ್ಮಾಣವಾಗುತ್ತಿರುವ ತ್ಯಾಜ್ಯ ನೀರು ಶುದ್ದೀಕರಣ ಘಟಕ ಜುಲೈನಿಂದಲೇ ಕಾರ್ಯಾರಂಭವಾಗಲಿದ್ದು, ಕೆರೆಯಲ್ಲಿನ ಜೊಂಡು ತೆರವುಗೊಳಿಸುವ ಕಾರ್ಯಾಚರಣೆ ವೇಗ ಪಡೆದುಕೊಂಡಿದೆ. ಬೆಳ್ಳಂದೂರು ಕೆರೆ ಸ್ವತ್ಛಗೊಳಿಸುವ ಕಾರ್ಯ ಮುಗಿದ ನಂತರ ವರ್ತೂರು ಕೆರೆಯನ್ನು ಸ್ವತ್ಛಗೊಳಿಸಲಾಗುವುದು.
-ರಾಕೇಶ್ ಸಿಂಗ್, ಬಿಡಿಎ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ