“ಜಿಎಸ್‌ಟಿ ತಾಂತ್ರಿಕ ಅಡಚಣೆಗೆ ಇನ್ಫೋಸಿಸ್‌ ಕಾರಣವಲ್ಲ’


Team Udayavani, Sep 17, 2017, 12:13 PM IST

16BNP-(25).jpg

ಬೆಂಗಳೂರು: “ಜಿಎಸ್‌ಟಿ ರಿಟರ್ನ್ಸ್ ಸಲ್ಲಿಕೆಗೆ ಸಂಬಂಧಿಸಿದ ಬಹುತೇಕ ತಾಂತ್ರಿಕ ಅಡಚಣೆಗಳು ಅಕ್ಟೋಬರ್‌ 30ರೊಳಗೆ ಬಗೆಹರಿಯಲಿದೆ’ ಎಂದು ಜಿಎಸ್‌ಟಿ ಅನುಷ್ಠಾನ ಕುರಿತ ಸಚಿವರ ಸಮಿತಿ ಅಧ್ಯಕ್ಷರೂ ಆಗಿರುವ ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್‌ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಜಿಎಸ್‌ಟಿಎನ್‌ ಸಾಫ್ಟ್ವೇರ್‌ ಅಭಿವೃದಿಟಛಿಪಡಿಸಿ ನಿರ್ವಹಣೆ ಮಾಡುತ್ತಿರುವ ಇನ್ಫೋಸಿಸ್‌ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಜುಲೈ 1ರಿಂದ ಜಿಎಸ್‌ಟಿ ಜಾರಿಯಾದ ನಂತರ ಎರಡೂವರೆ ತಿಂಗಳಲ್ಲಿ ಸಾಕಷ್ಟು ತಾಂತ್ರಿಕ ಅಡಚಣೆ ನಿವಾರಿಸಲಾಗಿದೆ.

ಆದರೂ ಒಂದಷ್ಟು ಸಮಸ್ಯೆ ಇರುವುದು ನಿಜ ಎಂದು ಒಪ್ಪಿಕೊಂಡರು. ಇನ್ಫೋಸಿಸ್‌ ಸಂಸ್ಥೆ ಜಿಎಸ್‌ಟಿ ಸಾಫ್ಟ್ವೇರ್‌ ನಿರ್ವಹಣೆಯಲ್ಲಿ ಉತ್ತಮ ಕೆಲಸ ಮಾಡುತ್ತಿದೆ. ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಮೋದಿ ಶ್ಲಾ ಸಿದರು.

ಜಿಎಸ್‌ಟಿ ರಿಟನ್ಸ್‌ ಸಲ್ಲಿಸಲು ಕೊನೆಯ ದಿನದವರೆಗೂ ಸುಮ್ಮನಿದ್ದು ಒಮ್ಮಿಂದೊಮ್ಮೆಲೇ ಗುಡುವು ಮುಗಿಯುವ ಕಡೆಯ ನಾಲ್ಕೈದು ದಿನಗಳಲ್ಲಿ ಸಲ್ಲಿಸಲು ವ್ಯಾಪಾರಸ್ಥರು ಮುಗಿಬೀಳುವುದರಿಂದ ಲೋಡ್‌ ಹೆಚ್ಚಾಗಿ ಸಮಸ್ಯೆಗಳು ಉದ್ಭವಿಸುತ್ತಿವೆ. ದಯವಿಟ್ಟು ಕೊನೆಯ ದಿನದವರೆಗೂ ಕಾಯದೆ ಶೀಘ್ರ ರಿಟರ್ನ್ ಸಲ್ಲಿಸಬೇಕೆಂದು ವ್ಯಾಪಾರಸ್ಥರು, ಉದ್ಯಮಿಗಳಲ್ಲಿ ಅವರು ಮನವಿ ಮಾಡಿಕೊಂಡರು.

ಯಾವುದೇ ಒಂದು ವ್ಯವಸ್ಥೆ ಜಾರಿಯಾದ ನಂತರ ಸರಿದಾರಿಗೆ ಬರಬೇಕಾದರೆ ಸಮಯ ಬೇಕಾಗುತ್ತದೆ. ಜಿಎಸ್‌ಟಿ ವಿಚಾರದಲ್ಲಿ ಎಲ್ಲವೂ ಶೇ.100ಕ್ಕೆ 100ರಷ್ಟು ತಾಂತ್ರಿಕ ಅಡಚಣೆ ಬಗೆಹರಿಸಲಾಗಿದೆ ಎಂದು ನಾವು ಹೇಳುತ್ತಿಲ್ಲ. ಆದರೆ, ಸಮಸ್ಯೆ ನಿವಾರಣೆಯ ಪ್ರಾಮಾಣಿಕ ಪ್ರಯತ್ನವಂತೂ ಆಗುತ್ತಿದೆ. ಅ.30ರೊಳಗೆ ಬಹುತೇಕ ಅಡಚಣೆಗಳು ನಿವಾರಣೆಯಾಗಲಿವೆ. ಇನ್ಫೋಸಿಸ್‌ ಸಹ ಈ ಕುರಿತು ಆಶ್ವಾಸನೆ ನೀಡಿದೆ ಎಂದರು.

ಉಪ ಸಮಿತಿಯು ಪ್ರತಿ 15 ದಿನಗಳಿಗೊಮ್ಮೆ ಸಭೆ ಸೇರಿ ತಾಂತ್ರಿಕ ಅಡಚಣೆಗಳ ಬಗ್ಗೆ ಪರಿಶೀಲಿಸಲಿದೆ. ವ್ಯಾಪಾರಸ್ಥರಿಂದ ವ್ಯಕ್ತವಾಗುವ ಅಭಿಪ್ರಾಯ, ಮಾರುಕಟ್ಟೆಯಲ್ಲಿನ ವಾಸ್ತವ ಸ್ಥಿತಿ, ಗ್ರಾಹಕರ ಸ್ಪಂದನೆ ಎಲ್ಲವನ್ನೂ ಅಧ್ಯಯನ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಲಿದೆ ಎಂದು ತಿಳಿಸಿದರು.

ಜಿಎಸ್‌ಟಿ ಜಾರಿಯಾದ ನಂತರ 62.25 ಲಕ್ಷ ವ್ಯಾಪಾರಸ್ಥರು ಹಳೇ ವ್ಯವಸ್ಥೆಯಿಂದ ಜಿಎಸ್‌ಟಿಗೆ ವರ್ಗಾವಣೆಗೊಂಡಿದ್ದಾರೆ. 23.18 ಲಕ್ಷ ವ್ಯಾಪಾರಸ್ಥರು ಹೊಸದಾಗಿ ನೋಂದಣಿ ಮಾಡಿಕೊಂಡಿದ್ದಾರೆ. 85 ಲಕ್ಷದಷ್ಟು ಜಿಎಸ್‌ಟಿ ನೆಟ್‌ವರ್ಕ್‌ಗೆ ಬಂದಂತಾಗಿದೆ ಎಂದು ವಿವರಿಸಿದರು.

ಗಡುವು
ವಿಸ್ತರಿಸುವುದಿಲ್ಲ

ಕಂದಾಯ ಕಾರ್ಯದರ್ಶಿ ಹಸುಖ್‌ ಆಧಿಯಾ ಮಾತನಾಡಿ, ಜುಲೈ ವಹಿವಾಟಿಗೆ ಸಂಬಂಧಿಸಿದಂತೆ ರಿಟರ್ನ್ ಮತ್ತು ತೆರಿಗೆ
ಸಲ್ಲಿಕೆಗೆ ನೀಡಲಾಗಿರುವ ಅ.10ರ ಗುಡುವು ಮತ್ತೆ ಯಾವುದೇ ಕಾರಣಕ್ಕೂ ವಿಸ್ತರಿಸಲಾಗುವುದಿಲ್ಲ. ಆ ನಂತರ ತಿಂಗಳುಗಳಿಗೂ ನಿಗದಿತ ಕಾಲಮಿತಿಯಲ್ಲೇ ಸಲ್ಲಿಸಬೇಕಾಗುತ್ತದೆ. ಗುಡುವು ವಿಸ್ತರಿಸುವ ನಿರೀಕ್ಷೆ ಬೇಡ ಎಂದು ಹೇಳಿದರು. ಜುಲೈ ವಹಿವಾಟಿಗೆ ಸಂಬಂಧಿಸಿದಂತೆ 47 ಲಕ್ಷ ಡೀಲರ್‌ಗಳು 3 ಬಿ ರಿಟರ್ನ್ಸ್ ಸಲ್ಲಿಸಿದ್ದಾರೆ. ಕಡೆಯ ದಿನಕ್ಕಾಗಿ ಕಾಯುತ್ತಿರುವುದರಿಂದ ಸಮಸ್ಯೆ ಉಂಟಾಗಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.