ಶಂಕಿತ ನಿಪ ಪ್ರಕರಣ:ಇಂದು ಪ್ರಯೋಗಾಲಯ ವರದಿ ಕೈಸೇರುವ ಸಾಧ್ಯತೆ
Team Udayavani, May 31, 2018, 6:20 AM IST
ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯ ಮೂವರು ಅರೆವೈದ್ಯ ಸಿಬ್ಬಂದಿಯಲ್ಲಿ ನಿಪ ಲಕ್ಷಣಗಳು ಕಂಡು
ಬಂದಿರುವ ಶಂಕೆ ಹಿನ್ನೆಲೆಯಲ್ಲಿ ಪ್ರಯೋಗಾಲಯದ ವರದಿ ಗುರುವಾರ ಆರೋಗ್ಯ ಇಲಾಖೆಗೆ ಲಭ್ಯವಾಗುವ ಸಾಧ್ಯತೆ ಇದೆ.
15 ದಿನಗಳ ಹಿಂದೆ ಕೇರಳಕ್ಕೆ ತೆರಳಿ ವಾಪಸ್ಸಾಗಿದ್ದ ಮೂವರು ಅರೆವೈದ್ಯ ಸಿಬ್ಬಂದಿಯಲ್ಲಿ ಜ್ವರ, ತಲೆನೋವು ಕಾಣಿಸಿಕೊಂಡು ನಿಪ ರೋಗದ ಲಕ್ಷಣಗಳು ಕಂಡು ಬಂದಿದ್ದವು. ತಕ್ಷಣವೇ ಅವರಿಗೆ ಪ್ರತ್ಯೇಕ ನಿಗಾ ವ್ಯವಸ್ಥೆ ಕಲ್ಪಿಸಲಾಗಿತ್ತು.ಅವರ ರಕ್ತದ ಮಾದರಿ, ಮೂಗು ಮತ್ತು ಗಂಟಲಿನ ದ್ರವವನ್ನು ಮಣಿಪಾಲ್ ಆಸ್ಪತ್ರೆಯ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಪ್ರಯೋಗಾಲಯದ ವರದಿ ಗುರುವಾರ ಕೈಸೇರುವ ಸಾಧ್ಯತೆ ಇದೆ. ವರದಿ ಯನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಗೂ ಕಳುಹಿಸುವ ಬಗ್ಗೆ ಚಿಂತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ