ಕೊಳವೆ ಬಾವಿ ದುರಂತ ತಪ್ಪಿಸಲು ಅಧ್ಯಾದೇಶ: ಎಚ್.ಕೆ. ಪಾಟೀಲ್
Team Udayavani, Apr 28, 2017, 3:45 AM IST
ಬೆಂಗಳೂರು: ಕೊಳವೆ ಬಾವಿ ದುರಂತ ತಪ್ಪಿಸುವ ಉದ್ದೇಶ ದಿಂದ ತೆರೆದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಅದಕ್ಕೆ ಕೊಳವೆ ಬಾವಿ ಕೊರೆಯುವ ಸಂಸ್ಥೆಗಳು ಮತ್ತು ಕೊಳವೆ ಬಾವಿ ಕೊರೆಸುವ ಮಾಲಕರನ್ನೇ ಹೊಣೆಗಾರರನ್ನಾಗಿ ಮಾಡಿ ಅಧ್ಯಾದೇಶ ಹೊರಡಿಸಲು ಸರಕಾರ ನಿರ್ಧರಿಸಿದೆ.
ಈ ನಿಟ್ಟಿನಲ್ಲಿ ಕಾಯ್ದೆ ತಿದ್ದುಪಡಿಗೆ ಸರಕಾರ ಮುಂದಾಗಿದೆ. ಆದರೆ, ಅದಕ್ಕೆ ವಿಧಾನ ಮಂಡಲದ ಅನು ಮೋದನೆ ಬೇಕಾಗಿರುವುದರಿಂದ ವಿಳಂಬವಾಗುತ್ತದೆ. ಹೀಗಾಗಿ ತತ್ಕ್ಷಣದಿಂದಲೇ ಕ್ರಮ ಕೈಗೊಳ್ಳುವ ಉದ್ದೇಶದಿಂದ ಅಧ್ಯಾದೇಶ ಹೊರ ಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಪತ್ರಕರ್ತರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಸರಕಾರಿ ಮತ್ತು ಖಾಸಗಿ ಸ್ವಾಮ್ಯದ ತೆರೆದ ಕೊಳವೆ ಬಾವಿಗಳು ಮತ್ತು ಇನ್ನಿತರ ನಿರುಪಯುಕ್ತ ಗುಂಡಿಗಳಿದ್ದರೆ ಅದನ್ನು ತತ್ಕ್ಷಣ ಮುಚ್ಚುವಂತೆ ಎಲ್ಲ ಜಿಲ್ಲಾ, ತಾಲೂಕು ಮತ್ತು ಗ್ರಾ. ಪಂ.ಗಳಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ