ರಸ್ತೆಗಳ ಸ್ವಚ್ಛತೆಗೆ ಸ್ವೀಪಿಂಗ್‌ ಮೆಷಿನ್‌


Team Udayavani, Oct 7, 2017, 12:09 PM IST

sweeping.jpg

ಬೆಂಗಳೂರು: ರಾಜಧಾನಿಯಲ್ಲಿ ಶೇ.60ಕ್ಕಿಂತ ಹೆಚ್ಚು ವಾಹನಗಳು ಸಂಚರಿಸುವ 1,180 ಕಿ.ಮೀ. ಪ್ರಮುಖ ರಸ್ತೆಗಳು ಹಾಗೂ ನೂರಾರು ಕಿ.ಮೀ.  ಮೇಲ್ಸೇತುವೆ, ಕೆಳಸೇತುವೆಗಳ ಸ್ವಚ್ಛತೆಗೆ ಬಿಬಿಎಂಪಿ ಯಾಂತ್ರಿಕ ಕಸ ಗುಡಿಸುವ (ಮೆಕ್ಯಾನಿಕಲ್‌ ಸ್ವೀಪಿಂಗ್‌ ಮೆಷಿನ್‌) ವಾಹನಗಳ ಮೊರೆ ಹೋಗಿದೆ. 

ಪಾಲಿಕೆಯ ಎಂಟು ವಲಯಗಳಲ್ಲಿ ಪ್ರಾಯೋಗಿಕವಾಗಿ ಈ ಹಿಂದೆ ನಿಯೋಜಿಸಲಾದ ಮೆಕ್ಯಾನಿಕಲ್‌ ಸ್ವೀಪಿಂಗ್‌ ವಾಹನಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ಸ್ವಚ್ಛತೆ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆ ವ್ಯಾಪಕ ಬಳಕೆಗೆ ಮತ್ತೆ 34 ವಾಹನಗಳ ಖರೀದಿಗೆ ಮುಂದಾಗಿದೆ. ಪೌರಕಾರ್ಮಿಕರ ನಿಯೋಜನೆ ಗಿಂತಲೂ ಯಂತ್ರಗಳು ಆರ್ಥಿಕ ಮಿತವ್ಯಯಕಾರಿ ಹಾಗೂ ಸ್ವಚ್ಛತೆಗೂ ಪರಿಣಾಮಕಾರಿ ಎಂಬ ಕಾರಣದಿಂದ ಪಾಲಿಕೆ ಈ ನಿರ್ಧಾರ ಕೈಗೊಂಡಿದೆ.

ನಗರದ ರಸ್ತೆಗಳಲ್ಲಿ ಸ್ವಚ್ಛತೆ ಕಾಪಾಡಲು ಸರ್ಕಾರ ಈ ಹಿಂದೆ 9 ವಾಹನಗಳನ್ನು ಖರೀದಿತ್ತು. ಅದರಂತೆ ಪ್ರತಿ ವಲಯಕ್ಕೆ ಒಂದರಂತೆ ವಾಹನವನ್ನು ಕಾರ್ಯಾಚರಣೆಗೆ ನೀಡಲಾಗುತ್ತು. ಪಾಲಿಕೆಯ ಎಲ್ಲ ವಲಯಗಳಲ್ಲಿ ವಾಹನಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದ್ದು, ಇದೀಗ ಎಲ್ಲ ವಲಯಗಳ ಆರ್ಟಿರಿಯಲ್‌, ಸಬ್‌ ಆರ್ಟಿರಿಯಲ್‌ ಹಾಗೂ ಮೇಲ್ಸೇತುವೆ ರಸ್ತೆಗಳನ್ನು ಸ್ವಚ್ಛಗೊಳಿಸಲು ವಾಹನಗಳ ಖರೀದಿಗೆ ಟೆಂಡರ್‌ ಕರೆಯಲು ಅಗತ್ಯ ಸಿದ್ಧತೆ ನಡೆಸಿದೆ.

ಮೇ ತಿಂಗಳಲ್ಲಿಯೇ ವಾಹನಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರಾದರೂ, ಸಾರಿಗೆ ಇಲಾಖೆಯಲ್ಲಿ ವಾಹನಗಳ ನೋಂದಣಿಯಾಗದ ಕಾರಣ  ಮೊದಲ ಒಂದು ತಿಂಗಳು ಸೇವೆ ಲಭ್ಯವಾಗಿರಲಿಲ್ಲ. ಆದರೆ, ಕಳೆದ ಮೂರು ತಿಂಗಳಿಂದ 9 ವಾಹನಗಳು ಕಾರ್ಯ ನಿರ್ವಹಿಸುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ತೊಂದರೆಗಳು ಎದುರಾಗಿಲ್ಲ ಎಂದು ಪಾಲಿಕೆಯ ಅಧಿಕಾರಿ ತಿಳಿಸಿದ್ದಾರೆ.

“ನಗರದ ಪ್ರಮುಖ ರಸ್ತೆಗಳಲ್ಲಿ ಪೌರಕಾರ್ಮಿಕರು ಅಪಾಯದ ನಡುವೆ ರಸ್ತೆಗಳನ್ನು ಸ್ವಚ್ಛಗೊಳಿಸಬೇಕಾಗುತ್ತದೆ. ಇಂತಹ ರಸ್ತೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಧೂಳು, ಮಣ್ಣಿರುವುದರಿಂದ ಕಸಗುಡಿಸುವಾಗ ಅವರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುತ್ತದೆ. ಇನ್ನು ಕಾರ್ಮಿಕರನ್ನು ರಾತ್ರಿ ಪಾಳಿಯಲ್ಲಿ ರಸ್ತೆ ಸ್ವಚ್ಛಗೊಳಿಸಲು ಬಳಸಲು ಸಾಧ್ಯವಾಗುವುದಿಲ್ಲ. ಆದರೆ, ವಾಹನಗಳ ಮೂಲಕ ಪ್ರಮುಖ ರಸ್ತೆಗಳನ್ನು ಸುಲಭವಾಗಿ ಸ್ವಚ್ಛಗೊಳಿಸ ಬಹುದಾಗಿದೆ” ಎಂದು ಪಾಲಿಕೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಯಂತ್ರಗಳು ಕಾರ್ಯನಿರ್ವಹಿಸುತ್ತಿವೆ: ಬಿಬಿಎಂಪಿ ವತಿಯಿಂದ ಖರೀದಿಸಿರುವ 9 ಯಾಂತ್ರಿಕ ಕಸ ಗುಡಿಸುವ ವಾಹನಗಳು ಶೆಡ್‌ಗಳಲ್ಲಿ ಇರಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಆದರೆ, ಎಂಟು ವಲಯಗಳಲ್ಲಿಯೂ ಯಂತ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿದ್ದು, ವಾಹನಗಳು ಕೆಲಸ ಮಾಡುವ ಎಲ್ಲ ಮಾಹಿತಿಯನ್ನು ಪಾಲಿಕೆಯ ವೆಬ್‌ಸೈಟ್‌ನಲ್ಲಿ ಹಾಕಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. 

ಕ್ಷಣ ಕ್ಷಣದ ಮಾಹಿತಿ ಲಭ್ಯ: ಪಾಲಿಕೆಯಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ವಾಹನಕ್ಕೂ ಜಿಪಿಎಸ್‌ ಸಾಧನ, ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಇದರಿಂದಾಗಿ ವಾಹನಗಳು ನಿತ್ಯ ಎಲ್ಲಿ ಎಷ್ಟು ಸಮಯ ಕೆಲಸ ಮಾಡಿವೆ, ದೂರ ಕ್ರಮಿಸಿವೆ ಎಂಬ ಸಂಪೂರ್ಣ ಮಾಹಿತಿ ಪಾಲಿಕೆಯ ಅಧಿಕಾರಿಗಳಿಗೆ ದೊರೆಯಲಿದೆ. ಜತೆಗೆ ವಾಹನಗಳು ಕೆಲಸ ಮಾಡದೆ ನಿಂತಿರುವುದು ಸೇರಿ ಕ್ಷಣ ಕ್ಷಣದ ಮಾಹಿತಿ ಪಾಲಿಕೆಗೆ ಲಭ್ಯವಾಗಲಿದ್ದು, ಸುಳ್ಳು ದಾಖಲೆಗಳನ್ನು ನೀಡಿ ಬಿಲ್‌ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. 

ಪಾಲಿಕೆಗೆ ಉಳಿತಾಯ: 100 ಮಂದಿ ಪೌರಕಾರ್ಮಿಕರು ಮಾಡುವ ಕೆಲಸ ಒಂದು ವಾಹನ ಮಾಡಲಿದ್ದು, ಇದರಿಂದ ಸಮಯ ಉಳಿತಾಯವಾಗಲಿದೆ. ಒಂದು ಯಂತ್ರಕ್ಕೆ ಪಾಲಿಕೆಯಿಂದ ತಿಂಗಳಿಗೆ 6 ಲಕ್ಷ ರೂ. ನೀಡಲಾಗುತ್ತಿದ್ದು, ಅದೇ 100 ಪೌರಕಾರ್ಮಿಕರಿಂದ ಆ ಕೆಲಸವನ್ನು ಮಾಡಿಸಿದರೆ 17 ಲಕ್ಷ ವೆಚ್ಚವಾಗುತ್ತದೆ. ಇದರೊಂದಿಗೆ ಪೌರಕಾರ್ಮಿಕರು ವಾಹನ ದಟ್ಟಣೆಯ ನಡುವೆ ಕೆಲಸ ಮಾಡಲು ಕಷ್ಟವಾಗುತ್ತದೆ. ಹಾಗಂತ ಪೌರಕಾರ್ಮಿಕರಿಗೆ ಕೆಲಸವಿಲ್ಲದಂತಾಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿಯಾಗಿದ್ದು, ವಾರ್ಡ್‌ ರಸ್ತೆಗಳನ್ನು ಸ್ವಚ್ಛಗೊಳಿಸಲು ಅವರನ್ನು ಬಳಸಿಕೊಳ್ಳಲಾಗುವುದು ಎಂದು ಘನತ್ಯಾಜ್ಯ ವಿಭಾಗದ ಹಿರಿಯ ಅಧಿಕಾರಿ ವಿವರಿಸಿದರು. 

ನಗರದ ಎಂಟು ವಲಯಗಳಲ್ಲಿ ಯಾಂತ್ರಿಕ ಕಸ ಗುಡಿಸುವ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. ಜಿಪಿಎಸ್‌ ಮೂಲಕ ವಾಹನಗಳು ಕಾರ್ಯನಿರ್ವಹಿಸುವ ಮಾಹಿತಿ ಪಡೆಯಲಾಗುತ್ತಿದ್ದು, ಅದನ್ನು ಆಧರಿಸಿ ಗುತ್ತಿಗೆದಾರರಿಗೆ ವೇತನ ನೀಡಲಾಗುತ್ತದೆ. ಹಾಗಾಗಿ ಮತ್ತೆ 34 ಯಂತ್ರಗಳನ್ನು ಖರೀದಿಗೆ ಟೆಂಡರ್‌ ಸಿದ್ಧಪಡಿಸಲಾಗುತ್ತಿದೆ. 
-ಸಫ‌ರಾಜ್‌ ಖಾನ್‌, ಘನತ್ಯಾಜ್ಯ ಮತ್ತು ಆರೋಗ್ಯ ವಿಭಾಗದ ಜಂಟಿ ಆಯುಕ್ತ

ಕಳೆದೊಂದು ತಿಂಗಳಲ್ಲಿ ವಾಹನಗಳು ಸ್ವಚ್ಛಗೊಳಿಸಿದ ರಸ್ತೆಯ ಉದ್ದ 
-ವಲಯ    ದೂರ (ಕಿ.ಮೀ.ಗಳಲ್ಲಿ)
-ಪೂರ್ವ  1,104
-ಪಶ್ಚಿಮ  1,072
-ದಕ್ಷಿಣ  1,071
-ಯಲಹಂಕ  1,164
-ಮಹದೇವಪುರ  966
-ಬೊಮ್ಮನಹಳ್ಳಿ  1,030
-ಆರ್‌.ಆರ್‌.ನಗರ  1,096
-ಕೇಂದ್ರ ಕಚೇರಿ  1,122

* ವೆಂ. ಸುನೀಲ್‌ ಕುಮಾರ್‌ 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.