ಪಾಲಿಕೆ ನಿರ್ಣಯದಂತೆ ಸ್ವಾಧೀನಾನುಭವ ಪತ್ರ ನಿರ್ಧಾರ


Team Udayavani, Feb 13, 2019, 6:31 AM IST

palke.jpg

ಬೆಂಗಳೂರು: ಬಿಬಿಎಂಪಿ ಈ ಹಿಂದೆ ತೆಗೆದುಕೊಂಡ ನಿರ್ಣಯದಂತೆಯೇ 3,000 ಚದರಡಿ ಮೇಲ್ಪಟ್ಟ ವಿಸ್ತೀರ್ಣದ ಗೃಹಬಳಕೆ ಸಂಪರ್ಕಕ್ಕೆ ಹಾಗೂ 5,000 ಚದರಡಿ ಮೇಲ್ಪಟ್ಟ ವಿಸ್ತೀರ್ಣದ ವಾಣಿಜ್ಯ ಸಂಪರ್ಕಕ್ಕೆ ಮಾತ್ರ ಒಸಿ (ಸ್ವಾಧೀನಾನುಭವ ಪತ್ರ) ಕೇಳುತ್ತಿದ್ದೇವೆ. ಪಾಲಿಕೆಯಿಂದ ಹೊಸ ತಿದ್ದುಪಡಿ ತಂದರೂ ಅದನ್ನು ಪಾಲಿಸಲು ಸಿದ್ಧರಿದ್ದೇವೆ ಎಂದು ಜಲಮಂಡಳಿ ಅಧ್ಯಕ್ಷ ತುಷಾರ ಗಿರಿನಾಥ್‌ ತಿಳಿಸಿದ್ದಾರೆ.

ಬಿಬಿಎಂಪಿ ಕೌನ್ಸಿಲ್‌ ಸಭೆಯಲ್ಲಿ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಈ ಹಿಂದಿನ ಬಿಬಿಎಂಪಿ ನಿರ್ಣಯದಂತೆ ಕುಡಿಯುವ ನೀರು ಹಾಗೂ ಒಳಚರಂಡಿ ಸಂಪರ್ಕ ಬಯಸುವವರಿಗೆ ಒಸಿ ಕೇಳುತ್ತಿದೇವೆ. ಒದಗಿಸದವರಿಗೆ ಮಾಸಿಕ ಶುಲ್ಕದ ಶೇ.50 ರಷ್ಟು ದಂಡ ಹಾಕುತ್ತಿದ್ದೇವೆ. 2400 ಚದರಡಿ ವ್ಯಾಪ್ತಿಯ ನಿವೇಶನದಲ್ಲಿ ನಿರ್ಮಾಣವಾಗುವ ಎಲ್ಲಾ ಮನೆಗಳಿಗೂ ವಿನಾಯ್ತಿ ನೀಡುವ ಸಂಬಂಧ ಬಿಬಿಎಂಪಿ ತಿದ್ದುಪಡಿ ಮಾಡಿದರೆ ಅದನ್ನು ಕೂಡಲೇ ಜಾರಿಗೆ ತರುತ್ತೇವೆ ಎಂದರು.

ಈ ಹಿನ್ನೆಲೆಯಲ್ಲಿ ಸದಸ್ಯರೆಲ್ಲರೂ ಒಮ್ಮತದಿಂದ ಗೃಹಬಳಕೆಗೆ 5,000 ಚ.ಅಡಿ ವಿಸ್ತೀರ್ಣದವರೆಗೂ ಒಸಿ ವಿನಾಯ್ತಿ ಎಂಬ ತಿದ್ದುಪಡಿಯನ್ನು ಶೀಘ್ರದಲ್ಲಿಯೇ ಜಾರಿಗೆ ಆಗ್ರಹಿಸಿದರು. ಇದಕ್ಕೆ ಒಪ್ಪಿದ ಆಯುಕ್ತರು, ಮುಂದಿನ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದರು. 110 ಹಳ್ಳಿಗಳ ಕುಡಿಯುವ ನೀರಿನ ಯೋಜನೆ ಕುರಿತು ಮಾತನಾಡಿದ ಅವರು, 2023 ವರೆಗೂ ಯಾವುದೇ ಹೊಸ ನೀರು ಬರುವುದಿಲ್ಲ.

ಕಾವೇರಿಯಿಂದ ಬರುತ್ತಿರುವ ನೀರಿನಲ್ಲಿಯೇ ಸೋರಿಕೆಯನ್ನು ತಡೆಗಟ್ಟಿ 110 ಹಳ್ಳಿ ನೀರೊದಗಿಸಬೇಕಿದೆ. ಪ್ರಸ್ತುತ 110 ಹಳ್ಳಿ ನೀರೊದಗಿಸುವ ಯೋಜನೆಯಡಿ ಪ್ರಸ್ತುತ 36 ಹಳ್ಳಿಗಳಿಗೆ ನೀರು ಒದಗಿಸುತ್ತಿದ್ದೇವೆ. ಮುಂದಿನ 2 ವರ್ಷದಲ್ಲಿ ಎಲ್ಲಾ ಹಳ್ಳಿಗಳಿಗೂ ನೀರು ಒದಗಿಸಲಾಗುತ್ತದೆ. ಮೊದಲನೇ ಹಂತಲ್ಲಿ 2019 ಮೇ ಒಳಗೆ ಎಲ್ಲಾ 110 ಹಳ್ಳಿಗಳಿಗೆ ಕೊಳವೆ ಅಳವಡಿಸುವ ಕಾಮಗಾರಿ ಯಶಸ್ವಿಯಾಗಿ ಮುಕ್ತಾಯವಾಗಲಿದೆ ಎಂದು ಹೇಳಿದರು.

ಒಬ್ಬರಿಗೆ 130 ಲೀಟರ್‌ ನೀರು: ನಗರಕ್ಕೆ 1,400 ಎಂಎಲ್‌ಡಿ ನೀರು ಸರಬರಾಜು ಮಾಡಲಾಗುತ್ತಿದೆ. ಪ್ರತಿಯೊಬ್ಬರಿಗೆ ದಿನಕ್ಕೆ 100 ಲೀಟರ್‌ ಶುದ್ಧ ನೀರು, 25 ರಿಂದ 30 ಲೀಟರ್‌ ಸಂಸ್ಕರಿಸಿದ ನೀರು ಒಟ್ಟು 130 ರಿಂದ 135 ಲೀಟರ್‌ ನೀಡುವುದು ಗುರಿಯಾಗಿದೆ. ನಗರದಲ್ಲಿ ಶೇ.37.5 ರಷ್ಟು ನೀರಿನ ಸೋರಿಕೆ ಇದೆ. ಅದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ವಿವಿಧ ಯೋಜನೆಯಡಿ ಪ್ರಯತ್ನ ಮಾಡಲಾಗುತ್ತಿದೆ. ಹಳೇ ಕೊಳವೆಗಳನ್ನು ಬದಲಾವಣೆ ಮಾಡುವುದಕ್ಕೆ 360 ಕೋಟಿ ರೂ. ಬೇಕಾಗಲಿದೆ. ಅದನ್ನು ಪತ್ರಿ ವರ್ಷ 100 ಕೋಟಿ ರೂ. ಗಳನ್ನು ಹಂತ ಹಂತವಾಗಿ ಜಲಮಂಡಳಿ ಭರಿಸಲಿದೆ ಎಂದು ತಿಳಿಸಿದರು.

ತ್ಯಾಜ್ಯ ನೀರಿನ ಸಮಸ್ಯೆಗೆ ಪರಿಹಾರ: ನಗರಕ್ಕೆ ಕಾವೇರಿಯಿಂದ 1,400 ಎಂಎಲ್‌ಡಿ ಕಾವೇರಿ ನೀರು, 400 ಎಂಎಲ್‌ಡಿ ಕೊಳವೆ ಬಾವಿ ನೀರು ನಗರದಲ್ಲಿ ಪ್ರತಿದಿನ ಪೂರೈಕೆ ಆಗುತ್ತಿದೆ. ಇದರಿಂದ ನಿತ್ಯ 1,440 ಎಂಎಲ್‌ಡಿ ತ್ಯಾಜ್ಯ ನೀರು ಉತ್ಪತ್ತಿಯಾಗುತ್ತಿದೆ. ಇದಕ್ಕೆ ಸಮನಾಗಿ ತ್ಯಾಜ್ಯ ನೀರಿನ ಕೊಳವೆಗಳು, ತ್ಯಾಜ್ಯ ಸಂಸ್ಕರಣಾ ಘಟಕಗಳು ನಮ್ಮಲ್ಲಿ ಇಲ್ಲ.

2017ರ ವರೆಗೆ ಕೇವಲ 721 ಎಂಎಲ್‌ಡಿ (ಶೇ.50ರಷ್ಟು) ತ್ಯಾಜ್ಯ ನೀರು ಸಂಸ್ಕರಣಾ ಸಾಮರ್ಥ್ಯದ ಘಟಕಗಳನ್ನು ತೆರೆಯಲಾಗಿದೆ. ಹೀಗಾಗಿಯೇ ರಾಜಕಾಲುವೆ ಹಾಗೂ ಕೆರೆಗಳಿಗೆ ತ್ಯಾಜ್ಯ ನೀರು ನೇರವಾಗಿ ಹರಿಯುತ್ತಿದೆ ಎಂದರು. ಈ ಕುರಿತು ಪರಿಹಾರವಾಗಿ ಜೈಕಾ ವತಿಯಿಂದ ಅನುದಾನ ಪಡೆದು 336 ಎಂಎಲ್‌ಡಿ ತ್ಯಾಜ್ಯ ನೀರು ಸಂಸ್ಕರಣೆ ಮಾಡುವ 10 ಎಸ್‌ಟಿಪಿ, ಹೆಬ್ಟಾಳ, ವೃಷಭಾವತಿ ವ್ಯಾಲಿ, ದೊಡ್ಡಬೆಲೆ, ಕೆಎನ್‌ಸಿ ವ್ಯಾಲಿಯಲ್ಲಿ 440 ಎಂಎಲ್‌ಡಿ ಸಾಮರ್ಥ್ಯದ ಎಸ್‌ಟಿಪಿ ಘಟಕ ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿದೆ.

ಜತೆಗೆ ಅಮೃತ್‌ ಯೋಜನೆ ಅಡಿಯಲ್ಲಿ 75 ಎಂಎಲ್‌ಡಿ ಎಸ್‌ಟಿಪಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಕಾಮಗಾರಿಗಳು ಮುಗಿದರೆ 2020ರ ವೇಳೆಗೆ 1,575 ಎಂಎಲ್‌ಡಿ ತ್ಯಾಜ್ಯ ನೀರು ಸಂಸ್ಕರಣೆ ಮಾಡಲಾಗುವುದು. ಮುಂದೆ 110 ಹಳ್ಳಿಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನೀರಿಗೆ ಕೆರೆ ಸುತ್ತ ಎಸ್‌ಟಿಪಿ ನಿರ್ಮಾಣಕ್ಕೆ ಕ್ರಮಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಜಿಪಿಎಸ್‌ ವ್ಯವಸ್ಥೆ: ನಗರದಲ್ಲಿರುವ ಜಲಮಂಡಳಿಯ 2.40 ಲಕ್ಷ ಮ್ಯಾನ್‌, 110 ಜಟ್ಟಿಂಗ್‌ ಮಷಿನ್‌ಗಳಿವೆ. ಅವುಗಳಿಗೆ ನಂಬರಿಂಗ್‌ ಮಾಡಿ ಜನವರಿಯಿಂದ ಜಿಪಿಎಸ್‌ ಅಳವಡಿಕೆ ಮಾಡಲಾಗಿದೆ. ಜಟಿಂಗ್‌ ಯಂತ್ರಗಳ ಕೊರತೆ ಹಿನ್ನೆಲೆ 36 ಹೊಸ ಯಂತ್ರ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಜತೆಗೆ ಒಳಚರಂಡಿ ಹೂಳು ತೆಗೆಯುವುದಕ್ಕೆ ಹೊರ ಗುತ್ತಿಗೆಯಲ್ಲಿ 4 ಬೃಹತ್‌ ತಂತ್ರ ಪಡೆಯಲಾಗುತ್ತಿದೆ ಎಂದು ತುಷಾರ್‌ ಗಿರಿನಾಥ್‌ ತಿಳಿಸಿದರು.

ಇವುಗಳ ಜತೆಗೆ ವಾರ್ಡ್‌ಗಳಲ್ಲಿ ತಿಂಗಳಲ್ಲಿ 1 ನೇ ಹಾಗೂ 3 ನೇ ಸೋಮವಾರ ಎಇಇ, ಎಇಗಳನ್ನು ಒಳಗೊಂಡು ಸಭೆ ನಡೆಸಲು ಸದ್ಯ ವೇಳಾಪಟ್ಟಿ ಸಿದ್ಧಪಡೆಸಿ ವೆಬ್‌ಸೈಟ್‌ನಲ್ಲಿ ಬಿಡುತ್ತೇವೆ. ಈ ಸಭೆಯಲ್ಲಿ ಬಿಬಿಎಂಪಿ ಸದಸ್ಯರು ತಮ್ಮ ವಾರ್ಡ್‌ ಸಮಸ್ಯೆ ಹೇಳಿಕೊಳ್ಳಬಹುದು ಎಂದರು. ಬೇಸಿಗೆಯಲ್ಲಿ ನಗರದಲ್ಲಿ ನೀರಿನ ಬವಣೆ ಉಂಟಾಗುವುದಿಲ್ಲ, ಅಗತ್ಯ ಬಿದ್ದರೆ ಕಾವೇರಿ ಪಂಪಿಂಗ್‌ನಿಂದ ಇನ್ನು 10 ಎಂಎಲ್‌ಡಿ ನೀರನ್ನು ತರಿಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.