ಆರೋಗ್ಯ ಸಮೀಕ್ಷೆಗೆ ಟ್ಯಾಬ್‌, ತಂತ್ರಾಂಶ ಅರ್ಪಣೆ


Team Udayavani, Aug 7, 2020, 9:03 AM IST

ಆರೋಗ್ಯ ಸಮೀಕ್ಷೆಗೆ ಟ್ಯಾಬ್‌, ತಂತ್ರಾಂಶ ಅರ್ಪಣೆ

ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕು ನಿಯಂತ್ರಣದಲ್ಲಿ ಮಹತ್ವದ ಪಾತ್ರ ವಹಿಸಿರುವ ಆಶಾ ಕಾರ್ಯಕರ್ತರು ಹಾಗೂ ವೈದ್ಯಕೀಯ ಸಹಾಯಕ ಸಿಬ್ಬಂದಿಗೆ (ಲಿಂಕ್‌ ವರ್ಕ್ ಗಳಿಗೆ ) ಟ್ಯಾಬ್‌ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗುರುವಾರ ನಡೆದ ಕೋವಿಡ್‌ ಹಾಸಿಗೆಗಳ ನಿರ್ವಹಣಾ ವ್ಯವಸ್ಥೆ (ಸಿಎಚ್‌ ಬಿಎಂಎಸ್‌) ಮತ್ತು ಕೋವಿಡ್‌ ಸಿಯುಪಿಎಚ್‌ಸಿ ತಂತ್ರಾಂಶವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ಕೊರೊನಾ ತುರ್ತು ಸಂದರ್ಭದಲ್ಲಿ ಮನೆ-ಮನೆ ಆರೋಗ್ಯ ಸಮೀಕ್ಷೆ ಮಾಡುತ್ತಿದ್ದಾರೆ. ಪಾಲಿಕೆ ವ್ಯಾಪ್ತಿಯ 1,200 ಆಶಾ ಕಾರ್ಯಕರ್ತರು ಹಾಗೂ ಲಿಂಕ್‌ ವರ್ಕ್ ಗಳಿಗೆ ಟ್ಯಾಬ್‌ ನೀಡಲಾಗುವುದು. ಪ್ರಸ್ತುತ ಇವರೆಲ್ಲಾ ನಿತ್ಯ ಪುಸ್ತಕಗಳಲ್ಲಿ ಮಾಹಿತಿ ಸಂಗ್ರಹಿಸಿ ಅದನ್ನು ಆನ್‌ಲೈನ್‌ಗೆ ದಾಖಲಾತಿ ಮಾಡುತ್ತಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 141 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆದ್ಯತೆ ಮೇರೆಗೆ ಅಭಿವೃದ್ಧಿಪಡಿಸಲಾಗುವುದು ಎಂದ ಅವರು, ಇವುಗಳಲ್ಲಿ ಆಕ್ಸಿಜನ್‌ ವ್ಯವಸ್ಥೆ ಕಲ್ಪಿಸಲಾಗುವುದು. ಅಲ್ಲದೆ, ಕೇಂದ್ರಗಳಿಗೆ ಬರುವ ರೋಗಿಗಳ ಆರೋಗ್ಯದ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಲಿದ್ದು, ಇದಕ್ಕಾಗಿ ಕಂಪ್ಯೂಟರ್‌ಗಳನ್ನು ಒದಗಿಸಲಾಗುವುದು. ಉಳಿದ 57 ವಾರ್ಡ್‌ಗಳಲ್ಲಿ ಸಹ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು. ನಗರದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 50 ಸಾವಿರ ರೂ.ವರೆಗೆ ಔಷಧಿಗಳನ್ನು ಸರಬರಾಜು ಮಾಡಲಾಗುತ್ತಿದೆ. ಒಟ್ಟಾರೆ ಸುಮಾರು 5 ಲಕ್ಷ ರೂ.ವರೆಗೆ ಔಷಧಗಳನ್ನು ಸರಬರಾಜು ಮಾಡು ನಿರ್ಧರಿಸಲಾಗಿದೆ ಎಂದರು.

ಮೇಯರ್‌ ಎಂ. ಗೌತಮ್‌ ಕುಮಾರ್‌, ಉಪಮೇಯರ್‌ ರಾಮಮೋಹನ್‌ ರಾಜ್‌, ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್‌, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಜಿ. ಮಂಜುನಾಥ್‌ ರಾಜು, ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌, ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ ಹಾಗೂ ಆರೋಗ್ಯ) ಡಿ. ರಂದೀಪ್‌ ಹಾಗೂ ಆರೋಗ್ಯಾಧಿಕಾರಿಗಳಿದ್ದರು.

ಸಿಯುಪಿಎಚ್‌ಸಿ ತಂತ್ರಾಂಶ :  ನಗರ ಪ್ರಾಥಮಿಕ ಆರೋಗ್ಯ ಕೇಂದ್ರ (ಸಿಯುಪಿಎಚ್‌ಸಿ) ತಂತ್ರಾಂಶವನ್ನು (ಆ್ಯಪ್‌) ಕೋವಿಡ್ ಸೋಂಕು ನಿಯಂತ್ರಣ ಕಾರ್ಯಕ್ಕೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಕೋವಿಡ್ ಸೋಂಕಿತರ ಸಂಪರ್ಕಿತರ ಪತ್ತೆ ಹಚ್ಚುವಿಕೆ, ಆರೋಗ್ಯ ಸಮೀಕ್ಷೆ, ಕಂಟೈನ್ಮೆಂಟ್‌ ಪ್ರದೇಶ, ಜ್ವರ ತಪಾಸಣಾ ಕೇಂದ್ರಗಳು ಮತ್ತು ಕೋವಿಡ್‌ ಪರೀಕ್ಷೆಗಳ ನಿರ್ವಹಣೆ ಇದರ ಮೂಲಕ ಆಗಲಿದೆ.

ಹಾಸಿಗೆ ನಿರ್ವಹಣೆ ತಂತ್ರಾಂಶ :  ಅದೇ ರೀತಿ, ಹಾಸಿಗೆ ಲಭ್ಯತೆ ತಿಳಿದುಕೊಂಡು ಸೋಂಕು ದೃಢಪಟ್ಟವರನ್ನು ತುರ್ತಾಗಿ ಆಸ್ಪತ್ರೆಗಳಿಗೆ ದಾಖಲಿಸಲು ಕೋವಿಡ್‌ ಆಸ್ಪತ್ರೆಗಳ ಹಾಸಿಗೆ ನಿರ್ವಹಣಾ ವ್ಯವಸ್ಥೆ (ಸಿಎಚ್‌ಬಿಎಂಎಸ್‌) ತಂತ್ರಾಂಶ ನೆರವಾಗಲಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.